<p><strong>ಅಹಮದಾಬಾದ್</strong>: ‘ಗುಜರಾತ್ನ ಅಹಮದಾಬಾದ್ ನಗರದ ಹೊರವಲಯದಲ್ಲಿರುವ ಕೊಠಡಿಯೊಂದರಲ್ಲಿ ಅನಿಲ ಸೋರಿಕೆಯಾಗಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ್ದ ಅವಘಡದಲ್ಲಿ ಗಾಯಗೊಂಡಿದ್ದವರ ಪೈಕಿ ಏಳು ಮಂದಿ ಮೃತಪಟ್ಟಿದ್ಧಾರೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಈ ಘಟನೆ ಗುರುವಾರ ರಾತ್ರಿ (ಜು.20) ನಡೆದಿದೆ. ಈ ಅವಘಡದಲ್ಲಿ ಕಾರ್ಮಿಕರು ಮತ್ತು ಅವರ ಕುಟುಂಬದವರು ಸೇರಿ 10 ಜನರಿಗೆ ಗಾಯಗಳಾಗಿದ್ದವು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಏಳು ಜನರು ಮೃತಪಟ್ಟಿದ್ದಾರೆ’ ಎಂದು ಅಸ್ಲಾಲಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಎಸ್.ಎಸ್ ಗಾಮೆಟಿ ಶುಕ್ರವಾರ ತಿಳಿಸಿದರು.</p>.<p>ಮೃತ ಕಾರ್ಮಿಕರು ಮಧ್ಯಪ್ರದೇಶದ ಗುನಾ ಜಿಲ್ಲೆಯ ಮಧುಸೂದನಗಢದವರು.</p>.<p>‘ಕಾರ್ಖಾನೆಯೊಂದರ ಕೆಲವು ಕಾರ್ಮಿಕರು ಮತ್ತು ಅವರ ಕುಟುಂಬದವರು ಸಣ್ಣ ಕೊಠಡಿಯೊಂದರಲ್ಲಿ ಮಲಗಿದ್ದರು. ಈ ವೇಳೆ ಎಲ್ಪಿಜಿ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿದೆ. ಈ ಬಗ್ಗೆ ಎಚ್ಚರಿಕೆ ನೀಡಲು ನೆರೆ ಮನೆಯವರು ಬಾಗಿಲು ತಟ್ಟಿದ್ಧಾರೆ. ಈ ವೇಳೆ ಕಾರ್ಮಿಕರು ಲೈಟ್ ಸ್ವಿಚ್ ಆನ್ ಮಾಡಿದ್ದರಿಂದ ಅನಿಲ ತುಂಬಿದ ಕೊಠಡಿಯಲ್ಲಿ ಸ್ಪೋಟ ಸಂಭವಿಸಿದೆ ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<p><strong>ಪರಿಹಾರ ಘೋಷಣೆ</strong>:ಗುಜರಾತ್ನ ಅಹಮದಾಬಾದ್ನಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟದಲ್ಲಿ ಸಾವಿಗೀಡಾದ ಕಾರ್ಮಿಕರು ಮಧ್ಯಪ್ರದೇಶ ಮೂಲದವರು. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೃತರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ಧನ ಘೋಷಿಸಿದ್ದಾರೆ.</p>.<p>‘ಈ ಅವಘಡದಲ್ಲಿ ಮೃತಪಟ್ಟವರು ಮಧ್ಯಪ್ರದೇಶದ ಗುನಾ ಜಿಲ್ಲೆಯ ಮಧುಸೂದನಗಢದ ನಿವಾಸಿಗಳು’ ಎಂದು ಮಧ್ಯಪ್ರದೇಶ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.</p>.<p>ಗಾಯಾಳುಗಳಿಗೆ ತಲಾ ₹ 2 ಲಕ್ಷ ಪರಿಹಾರ ಧನ ಘೋಷಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಕಚೇರಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ‘ಗುಜರಾತ್ನ ಅಹಮದಾಬಾದ್ ನಗರದ ಹೊರವಲಯದಲ್ಲಿರುವ ಕೊಠಡಿಯೊಂದರಲ್ಲಿ ಅನಿಲ ಸೋರಿಕೆಯಾಗಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ್ದ ಅವಘಡದಲ್ಲಿ ಗಾಯಗೊಂಡಿದ್ದವರ ಪೈಕಿ ಏಳು ಮಂದಿ ಮೃತಪಟ್ಟಿದ್ಧಾರೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಈ ಘಟನೆ ಗುರುವಾರ ರಾತ್ರಿ (ಜು.20) ನಡೆದಿದೆ. ಈ ಅವಘಡದಲ್ಲಿ ಕಾರ್ಮಿಕರು ಮತ್ತು ಅವರ ಕುಟುಂಬದವರು ಸೇರಿ 10 ಜನರಿಗೆ ಗಾಯಗಳಾಗಿದ್ದವು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಏಳು ಜನರು ಮೃತಪಟ್ಟಿದ್ದಾರೆ’ ಎಂದು ಅಸ್ಲಾಲಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಎಸ್.ಎಸ್ ಗಾಮೆಟಿ ಶುಕ್ರವಾರ ತಿಳಿಸಿದರು.</p>.<p>ಮೃತ ಕಾರ್ಮಿಕರು ಮಧ್ಯಪ್ರದೇಶದ ಗುನಾ ಜಿಲ್ಲೆಯ ಮಧುಸೂದನಗಢದವರು.</p>.<p>‘ಕಾರ್ಖಾನೆಯೊಂದರ ಕೆಲವು ಕಾರ್ಮಿಕರು ಮತ್ತು ಅವರ ಕುಟುಂಬದವರು ಸಣ್ಣ ಕೊಠಡಿಯೊಂದರಲ್ಲಿ ಮಲಗಿದ್ದರು. ಈ ವೇಳೆ ಎಲ್ಪಿಜಿ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿದೆ. ಈ ಬಗ್ಗೆ ಎಚ್ಚರಿಕೆ ನೀಡಲು ನೆರೆ ಮನೆಯವರು ಬಾಗಿಲು ತಟ್ಟಿದ್ಧಾರೆ. ಈ ವೇಳೆ ಕಾರ್ಮಿಕರು ಲೈಟ್ ಸ್ವಿಚ್ ಆನ್ ಮಾಡಿದ್ದರಿಂದ ಅನಿಲ ತುಂಬಿದ ಕೊಠಡಿಯಲ್ಲಿ ಸ್ಪೋಟ ಸಂಭವಿಸಿದೆ ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<p><strong>ಪರಿಹಾರ ಘೋಷಣೆ</strong>:ಗುಜರಾತ್ನ ಅಹಮದಾಬಾದ್ನಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟದಲ್ಲಿ ಸಾವಿಗೀಡಾದ ಕಾರ್ಮಿಕರು ಮಧ್ಯಪ್ರದೇಶ ಮೂಲದವರು. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೃತರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ಧನ ಘೋಷಿಸಿದ್ದಾರೆ.</p>.<p>‘ಈ ಅವಘಡದಲ್ಲಿ ಮೃತಪಟ್ಟವರು ಮಧ್ಯಪ್ರದೇಶದ ಗುನಾ ಜಿಲ್ಲೆಯ ಮಧುಸೂದನಗಢದ ನಿವಾಸಿಗಳು’ ಎಂದು ಮಧ್ಯಪ್ರದೇಶ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.</p>.<p>ಗಾಯಾಳುಗಳಿಗೆ ತಲಾ ₹ 2 ಲಕ್ಷ ಪರಿಹಾರ ಧನ ಘೋಷಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಕಚೇರಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>