<p><strong>ಗಾಂಧಿನಗರ</strong>: ವಿವಾಹ ನೋಂದಣಿ ಕಾಯ್ದೆಗೆ ತಿದ್ದುಪಡಿ ತರಲು ಯೋಜಿಸಿರುವುದಾಗಿ ಗುಜರಾತ್ ಸರ್ಕಾರ ಶುಕ್ರವಾರ ಘೋಷಿಸಿದೆ. ಸದ್ಯ ಇರುವ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಈ ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದೆ.</p><p>ವಿಧಾನಸಭೆಯಲ್ಲಿ ಮಾತನಾಡಿರುವ ಉಪ ಮುಖ್ಯಮಂತ್ರಿ ಹರ್ಷ್ ಸಂಘವಿ, ಹೊಸ ನಿಯಮಾವಳಿ ರೂಪಿಸುವುದು ಅಗತ್ಯವಾಗಿದೆ ಎಂದು ಒತ್ತಿ ಹೇಳಿದ್ದಾರೆ. ಅಮಾಯಕ ಹೆಣ್ಣು ಮಕ್ಕಳು ಪ್ರೀತಿಯ ಬಲೆಯಲ್ಲಿ ಬೀಳುತ್ತಿದ್ದಾರೆ. ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.</p><p>ವಿವಾಹ ನೋಂದಣಿ ಕಾಯ್ದೆಯ ದುರುಪಯೋಗ ತಪ್ಪಿಸುವ ಸಲುವಾಗಿ, ತಿದ್ದುಪಡಿ ತರಬೇಕು ಎಂದು ಸಾಕಷ್ಟು ಜನರು ಹಾಗೂ ಹಲವು ಸಾಮಾಜಿಕ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ ಎಂದು ಹೇಳಿದ್ದಾರೆ.</p><p>'ಲವ್ ಜಿಹಾದ್' ಅನ್ನು 'ಸಾಂಸ್ಕೃತಿಕ ಆಕ್ರಮಣ' ಎಂದಿರುವ ಡಿಸಿಎಂ, ಈ ವಿಚಾರವನ್ನು ಬಿಜೆಪಿ ಸರ್ಕಾರ ನಿರ್ಲಕ್ಷಿಸಲು ಸಾಧ್ಯವೇ ಇಲ್ಲ ಎಂದು ಪ್ರತಿಪಾದಿಸಿದ್ದಾರೆ. ವಿವಾಹ ನೋಂದಣಿ ಪ್ರಕ್ರಿಯೆ ವೇಳೆ ಸುರಕ್ಷತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಕೆಲವು ಬದಲಾವಣೆಗಳನ್ನು ಮಾಡಲು ಉದ್ದೇಶಿಸಿದ್ದೇವೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.</p><p>ಪ್ರಸ್ತಾಪಿತ ತಿದ್ದುಪಡಿಗಳಿಗೆ ಸಾರ್ವಜನಿಕರಿಂದ 30 ದಿನಗಳವರೆಗೆ ಆಕ್ಷೇಪಣೆ, ಸಲಹೆಗಳನ್ನು ಆಹ್ವಾನಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಂಧಿನಗರ</strong>: ವಿವಾಹ ನೋಂದಣಿ ಕಾಯ್ದೆಗೆ ತಿದ್ದುಪಡಿ ತರಲು ಯೋಜಿಸಿರುವುದಾಗಿ ಗುಜರಾತ್ ಸರ್ಕಾರ ಶುಕ್ರವಾರ ಘೋಷಿಸಿದೆ. ಸದ್ಯ ಇರುವ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಈ ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದೆ.</p><p>ವಿಧಾನಸಭೆಯಲ್ಲಿ ಮಾತನಾಡಿರುವ ಉಪ ಮುಖ್ಯಮಂತ್ರಿ ಹರ್ಷ್ ಸಂಘವಿ, ಹೊಸ ನಿಯಮಾವಳಿ ರೂಪಿಸುವುದು ಅಗತ್ಯವಾಗಿದೆ ಎಂದು ಒತ್ತಿ ಹೇಳಿದ್ದಾರೆ. ಅಮಾಯಕ ಹೆಣ್ಣು ಮಕ್ಕಳು ಪ್ರೀತಿಯ ಬಲೆಯಲ್ಲಿ ಬೀಳುತ್ತಿದ್ದಾರೆ. ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.</p><p>ವಿವಾಹ ನೋಂದಣಿ ಕಾಯ್ದೆಯ ದುರುಪಯೋಗ ತಪ್ಪಿಸುವ ಸಲುವಾಗಿ, ತಿದ್ದುಪಡಿ ತರಬೇಕು ಎಂದು ಸಾಕಷ್ಟು ಜನರು ಹಾಗೂ ಹಲವು ಸಾಮಾಜಿಕ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ ಎಂದು ಹೇಳಿದ್ದಾರೆ.</p><p>'ಲವ್ ಜಿಹಾದ್' ಅನ್ನು 'ಸಾಂಸ್ಕೃತಿಕ ಆಕ್ರಮಣ' ಎಂದಿರುವ ಡಿಸಿಎಂ, ಈ ವಿಚಾರವನ್ನು ಬಿಜೆಪಿ ಸರ್ಕಾರ ನಿರ್ಲಕ್ಷಿಸಲು ಸಾಧ್ಯವೇ ಇಲ್ಲ ಎಂದು ಪ್ರತಿಪಾದಿಸಿದ್ದಾರೆ. ವಿವಾಹ ನೋಂದಣಿ ಪ್ರಕ್ರಿಯೆ ವೇಳೆ ಸುರಕ್ಷತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಕೆಲವು ಬದಲಾವಣೆಗಳನ್ನು ಮಾಡಲು ಉದ್ದೇಶಿಸಿದ್ದೇವೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.</p><p>ಪ್ರಸ್ತಾಪಿತ ತಿದ್ದುಪಡಿಗಳಿಗೆ ಸಾರ್ವಜನಿಕರಿಂದ 30 ದಿನಗಳವರೆಗೆ ಆಕ್ಷೇಪಣೆ, ಸಲಹೆಗಳನ್ನು ಆಹ್ವಾನಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>