<p><strong>ವಡೋದರಾ:</strong> ಮಹಿಸಾಗರ ನಗರದಿಗೆ ನಾಲ್ಕು ದಶಕಗಳ ಹಿಂದೆ ನಿರ್ಮಿಸಿದ್ದ ಸೇತುವೆ ಕುಸಿದ ಪರಿಣಾಮ ಒಂಬತ್ತು ಜನರು ಮೃತಪಟ್ಟು, ಹಲವರು ಗಾಯಗೊಂಡಿರುವ ಪ್ರಕರಣ ಗುಜರಾತ್ನ ವಡೋದರಾದಲ್ಲಿ ಬುಧವಾರ ನಡೆದಿದೆ. </p><p>ವಾಹನಗಳು ಸಂಚರಿಸುತ್ತಿದ್ದ ಸಂದರ್ಭದಲ್ಲಿ ‘ಗಂಭೀರ ಸೇತುವೆ’ ಮಧ್ಯದ ಭಾಗ ಕುಸಿದಿದೆ. ಇದರ ಪರಿಣಾಮ ವಾಹನಗಳು ನೀರಿಗೆ ಬಿದ್ದು ಹಲವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಋಷಿಕೇಶ ಪಟೇಲ್ ತಿಳಿಸಿದ್ದಾರೆ.</p><p>‘ಈ ಸೇತುವೆಯು 1985ರಲ್ಲಿ ನಿರ್ಮಾಣಗೊಂಡಿತ್ತು. ಇದರ ನಿರ್ವಹಣೆಯೂ ಆಯಾ ಕಾಲಕ್ಕೆ ನಡೆದಿದೆ. ದುರಂತಕ್ಕೆ ಕಾರಣವೇನು ಎಂಬುದನ್ನು ಪತ್ತೆ ಮಾಡಲು ತನಿಖೆ ನಡೆಸಲಾಗುವುದು’ ಎಂದು ಅವರು ಹೇಳಿದ್ದಾರೆ.</p>.<p>ತಾಂತ್ರಿಕ ಪರಿಣಿತ ತಂಡವನ್ನು ಘಟನಾ ಸ್ಥಳಕ್ಕೆ ಕಳುಹಿಸಿ ತನಿಖೆ ನಡೆಸಲು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಆದೇಶಿಸಿದ್ದಾರೆ. </p><p>ಈ ಘಟನೆಯು ಬುಧವಾರ ಬೆಳಿಗ್ಗೆ 7.30ಕ್ಕೆ ಸಂಭವಿಸಿದೆ. ಎರಡು ಪಿಲ್ಲರ್ ನಡುವಿನ ಸ್ಲಾಬ್ ಕುಸಿದಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ. ಎರಡು ಟ್ರಕ್ ಮತ್ತು ಒಂದು ವ್ಯಾನ್ ನದಿಗೆ ಬಿದ್ದಿವೆ ಎಂದು ಪೊಲೀಸ್ ಇನ್ಸ್ಟೆಕ್ಟರ್ ವಿಜಯ್ ಚರಣ್ ತಿಳಿಸಿದ್ದಾರೆ.</p><p>ಅಗ್ನಿಶಾಮಕ ದಳ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಈಗಲೂ ಶೋಧ ಕಾರ್ಯ ಮುಂದುವರಿದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ಧಾವಿಸಿದೆ.</p><p>900 ಮೀ. ಉದ್ದ ‘ಗಂಭೀರ ಸೇತುವೆ’ಗೆ 23 ಪಿಲ್ಲರ್ಗಳಿವೆ. ಇದು ವಡೋದರಾ ಮತ್ತು ಆನಂದ್ ಜಿಲ್ಲೆಗಳನ್ನು ಸಂಪರ್ಕಿಸುತ್ತದೆ. </p><p>ಗುಜರಾತಿನ ಮೊರ್ಬಿ ಪ್ರದೇಶದ ಮಚ್ಚು ನದಿಯ ದಡದಲ್ಲಿ ನಿರ್ಮಿಸಲಾಗಿದ್ದ ತೂಗು ಸೇತುವೆ ಕುಸಿದು ಹಲವರು ನೀರುಪಾಲಾಗಿದ್ದರು. 2022ರ ಅಕ್ಟೋಬರ್ 30ರಂದು ನಡೆದ ಈ ಘಟನೆಯಲ್ಲಿ 135 ಜನ ಮೃತಪಟ್ಟಿದ್ದರು. </p><p>2024ರ ಜ. 18ರಂದು ವಡೋದರಾದ ಹರ್ನಿ ಸರೋವರದಲ್ಲಿ ದೋಣಿ ದುರಂತ ಸಂಭವಿಸಿ 12 ಮಕ್ಕಳು ಹಾಗೂ ಇಬ್ಬರು ಶಿಕ್ಷಕಿಯರು ಮೃತಪಟ್ಟಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡೋದರಾ:</strong> ಮಹಿಸಾಗರ ನಗರದಿಗೆ ನಾಲ್ಕು ದಶಕಗಳ ಹಿಂದೆ ನಿರ್ಮಿಸಿದ್ದ ಸೇತುವೆ ಕುಸಿದ ಪರಿಣಾಮ ಒಂಬತ್ತು ಜನರು ಮೃತಪಟ್ಟು, ಹಲವರು ಗಾಯಗೊಂಡಿರುವ ಪ್ರಕರಣ ಗುಜರಾತ್ನ ವಡೋದರಾದಲ್ಲಿ ಬುಧವಾರ ನಡೆದಿದೆ. </p><p>ವಾಹನಗಳು ಸಂಚರಿಸುತ್ತಿದ್ದ ಸಂದರ್ಭದಲ್ಲಿ ‘ಗಂಭೀರ ಸೇತುವೆ’ ಮಧ್ಯದ ಭಾಗ ಕುಸಿದಿದೆ. ಇದರ ಪರಿಣಾಮ ವಾಹನಗಳು ನೀರಿಗೆ ಬಿದ್ದು ಹಲವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಋಷಿಕೇಶ ಪಟೇಲ್ ತಿಳಿಸಿದ್ದಾರೆ.</p><p>‘ಈ ಸೇತುವೆಯು 1985ರಲ್ಲಿ ನಿರ್ಮಾಣಗೊಂಡಿತ್ತು. ಇದರ ನಿರ್ವಹಣೆಯೂ ಆಯಾ ಕಾಲಕ್ಕೆ ನಡೆದಿದೆ. ದುರಂತಕ್ಕೆ ಕಾರಣವೇನು ಎಂಬುದನ್ನು ಪತ್ತೆ ಮಾಡಲು ತನಿಖೆ ನಡೆಸಲಾಗುವುದು’ ಎಂದು ಅವರು ಹೇಳಿದ್ದಾರೆ.</p>.<p>ತಾಂತ್ರಿಕ ಪರಿಣಿತ ತಂಡವನ್ನು ಘಟನಾ ಸ್ಥಳಕ್ಕೆ ಕಳುಹಿಸಿ ತನಿಖೆ ನಡೆಸಲು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಆದೇಶಿಸಿದ್ದಾರೆ. </p><p>ಈ ಘಟನೆಯು ಬುಧವಾರ ಬೆಳಿಗ್ಗೆ 7.30ಕ್ಕೆ ಸಂಭವಿಸಿದೆ. ಎರಡು ಪಿಲ್ಲರ್ ನಡುವಿನ ಸ್ಲಾಬ್ ಕುಸಿದಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ. ಎರಡು ಟ್ರಕ್ ಮತ್ತು ಒಂದು ವ್ಯಾನ್ ನದಿಗೆ ಬಿದ್ದಿವೆ ಎಂದು ಪೊಲೀಸ್ ಇನ್ಸ್ಟೆಕ್ಟರ್ ವಿಜಯ್ ಚರಣ್ ತಿಳಿಸಿದ್ದಾರೆ.</p><p>ಅಗ್ನಿಶಾಮಕ ದಳ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಈಗಲೂ ಶೋಧ ಕಾರ್ಯ ಮುಂದುವರಿದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ಧಾವಿಸಿದೆ.</p><p>900 ಮೀ. ಉದ್ದ ‘ಗಂಭೀರ ಸೇತುವೆ’ಗೆ 23 ಪಿಲ್ಲರ್ಗಳಿವೆ. ಇದು ವಡೋದರಾ ಮತ್ತು ಆನಂದ್ ಜಿಲ್ಲೆಗಳನ್ನು ಸಂಪರ್ಕಿಸುತ್ತದೆ. </p><p>ಗುಜರಾತಿನ ಮೊರ್ಬಿ ಪ್ರದೇಶದ ಮಚ್ಚು ನದಿಯ ದಡದಲ್ಲಿ ನಿರ್ಮಿಸಲಾಗಿದ್ದ ತೂಗು ಸೇತುವೆ ಕುಸಿದು ಹಲವರು ನೀರುಪಾಲಾಗಿದ್ದರು. 2022ರ ಅಕ್ಟೋಬರ್ 30ರಂದು ನಡೆದ ಈ ಘಟನೆಯಲ್ಲಿ 135 ಜನ ಮೃತಪಟ್ಟಿದ್ದರು. </p><p>2024ರ ಜ. 18ರಂದು ವಡೋದರಾದ ಹರ್ನಿ ಸರೋವರದಲ್ಲಿ ದೋಣಿ ದುರಂತ ಸಂಭವಿಸಿ 12 ಮಕ್ಕಳು ಹಾಗೂ ಇಬ್ಬರು ಶಿಕ್ಷಕಿಯರು ಮೃತಪಟ್ಟಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>