<p><strong>ಅಹಮದಾಬಾದ್:</strong> ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ಕೆರಳಿದ ಅಲ್ಪಸಂಖ್ಯಾತ ಸಮುದಾಯದ ಗುಂಪೊಂದು ಗಾಂಧಿನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಹಲವು ಅಂಗಡಿಗಳು ಹಾಗೂ ವಾಹನಗಳಿಗೆ ಹಾನಿ ಮಾಡಿ, ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p>.ಗುಜರಾತ್: ಅಪರಾಧ ಕೃತ್ಯ ಮರುಸೃಷ್ಟಿ; ಕೊಲೆ ಆರೋಪಿಗೆ ಗುಂಡಿಕ್ಕಿದ ಪೊಲೀಸರು!.<p>ಬುಧವಾರ ತಡರಾತ್ರಿ ದೇಘಂ ತಾಲ್ಲೂಕಿನ ಬಹಿಯಾಲ್ ಗ್ರಾಮದಲ್ಲಿ ನಡೆದ ಘರ್ಷಣೆ ಹಾಗೂ ಹಿಂಸಾಚಾರದಲ್ಲಿ ಭಾಗಿಯಾದ ಆರೋಪದಲ್ಲಿ 60 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಘಟನೆಯಲ್ಲಿ ಐದು ಅಂಗಡಿಗಳು ಹಾಗೂ 6 ವಾಹನಗಳು ಹಾನಿಯಾಗಿವೆ ಎಂದು ಅವರು ಹೇಳಿದ್ದಾರೆ.</p><p>ಸದ್ಯ ನಡೆಯುತ್ತಿರುವ ‘ಐ ಲವ್ ಮೊಹಮ್ಮದ್’ ಟ್ರೆಂಡ್ ಬಗ್ಗೆ ಹಿಂದೂ ಧರ್ಮಕ್ಕೆ ಸೇರಿದ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಆಕ್ಷೇಪಾರ್ಹ ಪೋಸ್ಟ್ ಈ ಹಿಂಸಾಚಾರಕ್ಕೆ ಕಾರಣವಾಗಿದೆ ಎಂದು ಗಾಂಧಿನಗರ ಪೊಲೀಸ್ ವರಿಷ್ಠಾಧಿಕಾರಿ ತೇಜ ವಸಂಸೆಟ್ಟಿ ತಿಳಿಸಿದ್ದಾರೆ.</p>.ಗುಜರಾತ್ | ಕೋಮು ಗಲಭೆಗೆ ಕಾರಣವಾದ ಸಾಮಾಜಿಕ ಜಾಲತಾಣದ ಪೋಸ್ಟ್.<p>ಬುಧವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ವಾಟ್ಸ್ಆ್ಯಪ್ನಲ್ಲಿ ಆಕ್ಷೇಪಾರ್ಹ ಸ್ಟೇಟಸ್ ಹಾಕಿದ್ದ ವ್ಯಕ್ತಿಯ ಅಂಗಡಿಯ ಷಟರ್ ಮುರಿದ ಆಕ್ರೋಶಿತ ಗುಂಪು ವಸ್ತುಗಳನ್ನೆಲ್ಲಾ ಹೊರಗೆ ಎಸೆದು ಬೆಂಕಿ ಹಚ್ಚಿದೆ ಎಂದು ಅವರು ತಿಳಿಸಿದ್ದಾರೆ.</p><p>ಬಳಿಕ ಗುಂಪು, ಹಿಂದೂ ಪ್ರದೇಶಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತೀಕಾರವಾಗಿ ಆ ಕಡೆಯಿಂದಲೂ ಕಲ್ಲು ತೂರಟ ನಡೆಸಿದ್ದಾರೆ. ಸ್ಥಳದಲ್ಲಿ ಭಾರಿ ಪೊಲೀಸ್ ನಿಯೋಜನೆ ಮಾಡಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p> .ಗುಜರಾತ್ ಹೈಕೋರ್ಟ್ಗೆ ಬಾಂಬ್ ಬೆದರಿಕೆ: ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ಕೆರಳಿದ ಅಲ್ಪಸಂಖ್ಯಾತ ಸಮುದಾಯದ ಗುಂಪೊಂದು ಗಾಂಧಿನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಹಲವು ಅಂಗಡಿಗಳು ಹಾಗೂ ವಾಹನಗಳಿಗೆ ಹಾನಿ ಮಾಡಿ, ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p>.ಗುಜರಾತ್: ಅಪರಾಧ ಕೃತ್ಯ ಮರುಸೃಷ್ಟಿ; ಕೊಲೆ ಆರೋಪಿಗೆ ಗುಂಡಿಕ್ಕಿದ ಪೊಲೀಸರು!.<p>ಬುಧವಾರ ತಡರಾತ್ರಿ ದೇಘಂ ತಾಲ್ಲೂಕಿನ ಬಹಿಯಾಲ್ ಗ್ರಾಮದಲ್ಲಿ ನಡೆದ ಘರ್ಷಣೆ ಹಾಗೂ ಹಿಂಸಾಚಾರದಲ್ಲಿ ಭಾಗಿಯಾದ ಆರೋಪದಲ್ಲಿ 60 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಘಟನೆಯಲ್ಲಿ ಐದು ಅಂಗಡಿಗಳು ಹಾಗೂ 6 ವಾಹನಗಳು ಹಾನಿಯಾಗಿವೆ ಎಂದು ಅವರು ಹೇಳಿದ್ದಾರೆ.</p><p>ಸದ್ಯ ನಡೆಯುತ್ತಿರುವ ‘ಐ ಲವ್ ಮೊಹಮ್ಮದ್’ ಟ್ರೆಂಡ್ ಬಗ್ಗೆ ಹಿಂದೂ ಧರ್ಮಕ್ಕೆ ಸೇರಿದ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಆಕ್ಷೇಪಾರ್ಹ ಪೋಸ್ಟ್ ಈ ಹಿಂಸಾಚಾರಕ್ಕೆ ಕಾರಣವಾಗಿದೆ ಎಂದು ಗಾಂಧಿನಗರ ಪೊಲೀಸ್ ವರಿಷ್ಠಾಧಿಕಾರಿ ತೇಜ ವಸಂಸೆಟ್ಟಿ ತಿಳಿಸಿದ್ದಾರೆ.</p>.ಗುಜರಾತ್ | ಕೋಮು ಗಲಭೆಗೆ ಕಾರಣವಾದ ಸಾಮಾಜಿಕ ಜಾಲತಾಣದ ಪೋಸ್ಟ್.<p>ಬುಧವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ವಾಟ್ಸ್ಆ್ಯಪ್ನಲ್ಲಿ ಆಕ್ಷೇಪಾರ್ಹ ಸ್ಟೇಟಸ್ ಹಾಕಿದ್ದ ವ್ಯಕ್ತಿಯ ಅಂಗಡಿಯ ಷಟರ್ ಮುರಿದ ಆಕ್ರೋಶಿತ ಗುಂಪು ವಸ್ತುಗಳನ್ನೆಲ್ಲಾ ಹೊರಗೆ ಎಸೆದು ಬೆಂಕಿ ಹಚ್ಚಿದೆ ಎಂದು ಅವರು ತಿಳಿಸಿದ್ದಾರೆ.</p><p>ಬಳಿಕ ಗುಂಪು, ಹಿಂದೂ ಪ್ರದೇಶಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತೀಕಾರವಾಗಿ ಆ ಕಡೆಯಿಂದಲೂ ಕಲ್ಲು ತೂರಟ ನಡೆಸಿದ್ದಾರೆ. ಸ್ಥಳದಲ್ಲಿ ಭಾರಿ ಪೊಲೀಸ್ ನಿಯೋಜನೆ ಮಾಡಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p> .ಗುಜರಾತ್ ಹೈಕೋರ್ಟ್ಗೆ ಬಾಂಬ್ ಬೆದರಿಕೆ: ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>