<p><strong>ನವದೆಹಲಿ:</strong> ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಗಲ್ಫ್ ದೇಶಗಳಲ್ಲಿರುವ ಸುಮಾರು 23,000 ವಿದ್ಯಾರ್ಥಿಗಳು ಸಿಬಿಎಸ್ಇಯ ಅಂತಿಮ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.</p><p>ಹಾಗೇ ಇರಾನ್ ದೇಶದಲ್ಲಿ ಇನ್ನೂ ಸಾವಿರಕ್ಕೂ ಹೆಚ್ಚು ಜನ ಭಾರತೀಯರಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಂಸತ್ತಿನ ಸ್ಥಾಯಿ ಸಮಿತಿಗೆ ತಿಳಿಸಿದೆ.</p><p>ಇರಾನ್ನಲ್ಲಿ ಇನ್ನೂ ಸಾವಿರಕ್ಕೂ ಹೆಚ್ಚು ಭಾರತೀಯರಿದ್ದು, ಅವರಲ್ಲಿ ಎಲ್ಲರೂ ದೇಶ ತೊರೆಯಲು ಇಚ್ಛಿಸುತ್ತಿಲ್ಲ ಎಂದು ಸಂಸತ್ತಿನ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿ ತರೂರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.</p><p>ಗಲ್ಫ್ ದೇಶಗಳಲ್ಲಿರುವ 10ನೇ ಹಾಗೂ 12ನೇ ತರಗತಿ ವಿದ್ಯಾರ್ಥಿಗಳು ಸಿಬಿಎಸ್ಇ ಅಂತಿಮ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ.</p><p>ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಶಿಕ್ಷಣ ಸಚಿವಾಲಯಗಳ ನಡುವೆ ಈಗಾಗಲೇ ಚರ್ಚೆಗಳು ನಡೆದಿದ್ದು, ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ 23,000 ವಿದ್ಯಾರ್ಥಿಗಳಿಗೆ ಸಿಬಿಎಸ್ಇ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ತರೂರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಗಲ್ಫ್ ದೇಶಗಳಲ್ಲಿರುವ ಸುಮಾರು 23,000 ವಿದ್ಯಾರ್ಥಿಗಳು ಸಿಬಿಎಸ್ಇಯ ಅಂತಿಮ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.</p><p>ಹಾಗೇ ಇರಾನ್ ದೇಶದಲ್ಲಿ ಇನ್ನೂ ಸಾವಿರಕ್ಕೂ ಹೆಚ್ಚು ಜನ ಭಾರತೀಯರಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಂಸತ್ತಿನ ಸ್ಥಾಯಿ ಸಮಿತಿಗೆ ತಿಳಿಸಿದೆ.</p><p>ಇರಾನ್ನಲ್ಲಿ ಇನ್ನೂ ಸಾವಿರಕ್ಕೂ ಹೆಚ್ಚು ಭಾರತೀಯರಿದ್ದು, ಅವರಲ್ಲಿ ಎಲ್ಲರೂ ದೇಶ ತೊರೆಯಲು ಇಚ್ಛಿಸುತ್ತಿಲ್ಲ ಎಂದು ಸಂಸತ್ತಿನ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿ ತರೂರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.</p><p>ಗಲ್ಫ್ ದೇಶಗಳಲ್ಲಿರುವ 10ನೇ ಹಾಗೂ 12ನೇ ತರಗತಿ ವಿದ್ಯಾರ್ಥಿಗಳು ಸಿಬಿಎಸ್ಇ ಅಂತಿಮ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ.</p><p>ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಶಿಕ್ಷಣ ಸಚಿವಾಲಯಗಳ ನಡುವೆ ಈಗಾಗಲೇ ಚರ್ಚೆಗಳು ನಡೆದಿದ್ದು, ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ 23,000 ವಿದ್ಯಾರ್ಥಿಗಳಿಗೆ ಸಿಬಿಎಸ್ಇ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ತರೂರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>