<p><strong>ಶ್ರೀನಗರ</strong>: ಏಷ್ಯಾದ ಅತಿ ಎತ್ತರದ ರೋಪ್ವೇಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ, ಗುಲ್ಮಾರ್ಗ್ ಗೊಂಡೋಲಾ ಕೇಬಲ್ ಕಾರಿನ 65 ಕ್ಯಾಬಿನ್ಗಳಲ್ಲಿ 300ಕ್ಕೂ ಹೆಚ್ಚು ಪ್ರವಾಸಿಗರು ಗಂಟೆಗಟ್ಟಲೆ ಸಿಲುಕಿದ ಘಟನೆ ಸೋಮವಾರ ನಡೆದಿದ್ದು, ಎಲ್ಲರನ್ನೂ ರಕ್ಷಿಸಲಾಗಿದೆ.</p>.<p>ಕೆಲ ಪ್ರವಾಸಿಗರು ನೆಲದಿಂದ ಸುಮಾರು 500 ಅಡಿ ಎತ್ತರದಲ್ಲಿ ಕ್ಯಾಬಿನ್ಗಳಲ್ಲಿ ಸಿಲುಕಿಕೊಂಡಿದ್ದರು. ವಿವಿಧ ಏಜೆನ್ಸಿಗಳ ಸಿಬ್ಬಂದಿ ಏಳು ಗಂಟೆ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಿಸಿ, ಸ್ಥಳಾಂತರಿಸಿದರು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಾರಿ ಮಳೆಯಿದ್ದ ಕಾರಣ ರಕ್ಷಣಾ ಕಾರ್ಯಾಚರಣೆ ವಿಳಂಬವಾಯಿತು ಎಂದು ಅವರು ವಿವರಿಸಿದ್ದಾರೆ.</p>.<p>ಮಧ್ಯಾಹ್ನದ ವೇಳೆ ತಾಂತ್ರಿಕ ದೋಷ ಕಂಡು ಬಂದ ಕೂಡಲೇ ಕೇಬಲ್ ಕಾರ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು ಎಂದು ಅವರು ಹೇಳಿದ್ದಾರೆ.</p>.<p>ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್), ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆಯ ಸಿಬ್ಬಂದಿ ಹಗ್ಗ ಮತ್ತು ಏಣಿಗಳ ಸಹಾಯದಿಂದ ಪ್ರವಾಸಿಗರನ್ನು ಸುರಕ್ಷಿತವಾಗಿ ಕೆಳಗಿಳಿಸಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-4-526171973</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಏಷ್ಯಾದ ಅತಿ ಎತ್ತರದ ರೋಪ್ವೇಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ, ಗುಲ್ಮಾರ್ಗ್ ಗೊಂಡೋಲಾ ಕೇಬಲ್ ಕಾರಿನ 65 ಕ್ಯಾಬಿನ್ಗಳಲ್ಲಿ 300ಕ್ಕೂ ಹೆಚ್ಚು ಪ್ರವಾಸಿಗರು ಗಂಟೆಗಟ್ಟಲೆ ಸಿಲುಕಿದ ಘಟನೆ ಸೋಮವಾರ ನಡೆದಿದ್ದು, ಎಲ್ಲರನ್ನೂ ರಕ್ಷಿಸಲಾಗಿದೆ.</p>.<p>ಕೆಲ ಪ್ರವಾಸಿಗರು ನೆಲದಿಂದ ಸುಮಾರು 500 ಅಡಿ ಎತ್ತರದಲ್ಲಿ ಕ್ಯಾಬಿನ್ಗಳಲ್ಲಿ ಸಿಲುಕಿಕೊಂಡಿದ್ದರು. ವಿವಿಧ ಏಜೆನ್ಸಿಗಳ ಸಿಬ್ಬಂದಿ ಏಳು ಗಂಟೆ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಿಸಿ, ಸ್ಥಳಾಂತರಿಸಿದರು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಾರಿ ಮಳೆಯಿದ್ದ ಕಾರಣ ರಕ್ಷಣಾ ಕಾರ್ಯಾಚರಣೆ ವಿಳಂಬವಾಯಿತು ಎಂದು ಅವರು ವಿವರಿಸಿದ್ದಾರೆ.</p>.<p>ಮಧ್ಯಾಹ್ನದ ವೇಳೆ ತಾಂತ್ರಿಕ ದೋಷ ಕಂಡು ಬಂದ ಕೂಡಲೇ ಕೇಬಲ್ ಕಾರ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು ಎಂದು ಅವರು ಹೇಳಿದ್ದಾರೆ.</p>.<p>ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್), ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆಯ ಸಿಬ್ಬಂದಿ ಹಗ್ಗ ಮತ್ತು ಏಣಿಗಳ ಸಹಾಯದಿಂದ ಪ್ರವಾಸಿಗರನ್ನು ಸುರಕ್ಷಿತವಾಗಿ ಕೆಳಗಿಳಿಸಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-4-526171973</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>