<p><strong>ಕೋಲ್ಕತ್ತ:</strong> ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕ ವಿಚಾರದಲ್ಲಿ ರಾಜ್ಯಪಾಲರು ಮಹತ್ವದ ಪಾತ್ರ ವಹಿಸುತ್ತಾರೆ. ಯುಜಿಸಿ ಇತ್ತೀಚೆಗೆ ಹೊರಡಿಸಿರುವ ಕರಡು ಅಧಿಸೂಚನೆಗೆ ರಾಜ್ಯಗಳು ಬದ್ಧವಾಗಿರಬೇಕು ಎಂದು ವಿಶ್ವವಿದ್ಯಾಲಯಗಳ ಅನುದಾನ ಆಯೋಗದ (ಯುಜಿಸಿ) ಮುಖ್ಯಸ್ಥ ಎಂ.ಜಗದೀಶ್ ಕುಮಾರ್ ಅವರು ಹೇಳಿದರು.</p>.<p>ಪಶ್ಚಿಮ ಬಂಗಾಳದಲ್ಲಿ ರಾಜ್ಯದ 34 ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕ ವಿಚಾರವಾಗಿ ಟಿಎಂಸಿ ಸರ್ಕಾರ ಮತ್ತು ರಾಜ್ಯಪಾಲ ಸಿ.ವಿ. ಆನಂದ್ ಅವರ ಮಧ್ಯೆ ಭಿನ್ನಾಭಿಪ್ರಾಯಗಳು ತಾರಕಕ್ಕೆ ಏರಿರುವ ಮಧ್ಯೆಯೇ ಕುಮಾರ್ ಅವರು ಈ ಹೇಳಿಕೆ ನೀಡಿದರು.</p>.<p>ರಾಜ್ಯಪಾಲರು ರಾಜ್ಯದ ವಿಶ್ವವಿದ್ಯಾಲಯಗಳ ಪದನಿಮಿತ್ತ ಕುಲಾಧಿಪತಿಯಾಗಿರುತ್ತಾರೆ.</p>.<p>ಸ್ವಾತಂತ್ರ್ಯ ನಂತರ ಅಥವಾ ಅದಕ್ಕೂ ಮುಂಚಿನಿಂದಲೂ ಕುಲಪತಿಗಳನ್ನು ಆಯ್ಕೆ ಮಾಡುವ ವಿಶೇಷಾಧಿಕಾರವನ್ನು ರಾಜ್ಯಪಾಲರು ಹೊಂದಿದ್ದಾರೆ. ಯುಜಿಸಿಯ ಕರಡು ನಿಯಮಾವಳಿಯಲ್ಲೂ ಈ ವಿಚಾರವಾಗಿ ಹೊಸ ಬದಲಾವಣೆ ಇಲ್ಲ ಎಂದು ಹೇಳಿದರು.</p>.<p>ವಿಶ್ವವಿದ್ಯಾಲಯಗಳನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸುವ ಉದ್ದೇಶದಿಂದ ಹೊಸ ಕರಡು ನಿಯಮಾವಳಿಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕ ವಿಚಾರದಲ್ಲಿ ರಾಜ್ಯಪಾಲರು ಮಹತ್ವದ ಪಾತ್ರ ವಹಿಸುತ್ತಾರೆ. ಯುಜಿಸಿ ಇತ್ತೀಚೆಗೆ ಹೊರಡಿಸಿರುವ ಕರಡು ಅಧಿಸೂಚನೆಗೆ ರಾಜ್ಯಗಳು ಬದ್ಧವಾಗಿರಬೇಕು ಎಂದು ವಿಶ್ವವಿದ್ಯಾಲಯಗಳ ಅನುದಾನ ಆಯೋಗದ (ಯುಜಿಸಿ) ಮುಖ್ಯಸ್ಥ ಎಂ.ಜಗದೀಶ್ ಕುಮಾರ್ ಅವರು ಹೇಳಿದರು.</p>.<p>ಪಶ್ಚಿಮ ಬಂಗಾಳದಲ್ಲಿ ರಾಜ್ಯದ 34 ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕ ವಿಚಾರವಾಗಿ ಟಿಎಂಸಿ ಸರ್ಕಾರ ಮತ್ತು ರಾಜ್ಯಪಾಲ ಸಿ.ವಿ. ಆನಂದ್ ಅವರ ಮಧ್ಯೆ ಭಿನ್ನಾಭಿಪ್ರಾಯಗಳು ತಾರಕಕ್ಕೆ ಏರಿರುವ ಮಧ್ಯೆಯೇ ಕುಮಾರ್ ಅವರು ಈ ಹೇಳಿಕೆ ನೀಡಿದರು.</p>.<p>ರಾಜ್ಯಪಾಲರು ರಾಜ್ಯದ ವಿಶ್ವವಿದ್ಯಾಲಯಗಳ ಪದನಿಮಿತ್ತ ಕುಲಾಧಿಪತಿಯಾಗಿರುತ್ತಾರೆ.</p>.<p>ಸ್ವಾತಂತ್ರ್ಯ ನಂತರ ಅಥವಾ ಅದಕ್ಕೂ ಮುಂಚಿನಿಂದಲೂ ಕುಲಪತಿಗಳನ್ನು ಆಯ್ಕೆ ಮಾಡುವ ವಿಶೇಷಾಧಿಕಾರವನ್ನು ರಾಜ್ಯಪಾಲರು ಹೊಂದಿದ್ದಾರೆ. ಯುಜಿಸಿಯ ಕರಡು ನಿಯಮಾವಳಿಯಲ್ಲೂ ಈ ವಿಚಾರವಾಗಿ ಹೊಸ ಬದಲಾವಣೆ ಇಲ್ಲ ಎಂದು ಹೇಳಿದರು.</p>.<p>ವಿಶ್ವವಿದ್ಯಾಲಯಗಳನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸುವ ಉದ್ದೇಶದಿಂದ ಹೊಸ ಕರಡು ನಿಯಮಾವಳಿಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>