ಪ್ರಕರಣದ ಸಂಬಂಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ ನೀಡಬೇಕೆಂದು ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಘೋಷಣೆ ಕೂಗಿದರು. ಈ ವೇಳೆ ಗದ್ದಲದ ವಾತಾವರಣ ನಿರ್ಮಾಣವಾಯಿತು. ಸಭಾಧ್ಯಕ್ಷರ ಮನವಿಯ ನಂತರವೂ ಅವರು ಪ್ರತಿಭಟನೆ ಮುಂದುವರೆಸಿದರು. ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಆರು ಮಂದಿ ಬಿಜೆಪಿ ಶಾಸಕರನ್ನು ಪ್ರಸ್ತುತ ಅಧಿವೇಶನದ ಉಳಿದ ಅವಧಿ ಅಥವಾ 30 ದಿನದ ಅವಧಿ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಅಮಾನತು ಮಾಡಲಾಯಿತು.