<p><strong>ಗುವಾಹಟಿ</strong>: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ 9 ವರ್ಷಗಳ ಹಿಂದೆ ಆರ್ಎಸ್ಎಸ್ ಕಾರ್ಯಕರ್ತ ಹೂಡಿದ್ದ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಹೊಸ ಸಾಕ್ಷಿಗಳ ವಿಚಾರಣೆಗೆ ಅವಕಾಶ ಕಲ್ಪಿಸಿದ್ದ ಕೆಳ ಹಂತದ ನ್ಯಾಯಾಲಯದ ಆದೇಶವನ್ನು ಗುವಾಹಟಿ ಹೈಕೋರ್ಟ್ ಗುರುವಾರ ರದ್ದು ಮಾಡಿದೆ.</p><p>ಮಾನಹಾನಿ ಪ್ರಕರಣ ಸಂಬಂಧ ವಿಚಾರಣಾ ನ್ಯಾಯಾಲಯದ ಎದುರು ಹೆಚ್ಚುವರಿ ಸಾಕ್ಷಿಗಳು ವಿಚಾರಣೆಗೆ ಹಾಜರಾಗಲು ಅವಕಾಶ ಕಲ್ಪಿಸಿ ಕಾಮರೂಪ್ ಮೆಟ್ರೊಪಾಲಿಟನ್ ನ್ಯಾಯಾಲಯದ ಹೆಚ್ಚುವರಿ ವಿಶೇಷ ನ್ಯಾಯಾಧೀಶ ನೀಡಿದ್ದ ಆದೇಶವನ್ನು ನ್ಯಾಯಮೂರ್ತಿ ಅರುಣ್ ದೇವ್ ಚೌಧರಿ ಅವರಿದ್ದ ಏಕಸದಸ್ಯ ಪೀಠ ರದ್ದು ಮಾಡಿದೆ.</p><p>ಆರ್ಎಸ್ಎಸ್ ಕಾರ್ಯಕರ್ತ ಅಂಜನ್ ಕುಮಾರ್ ಬೋರಾ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಸಂಬಂಧ, ಆರು ಸಾಕ್ಷಿಗಳ ಹೇಳಿಕೆಗಳ ದಾಖಲು ಪ್ರಕ್ರಿಯೆ ಪೂರ್ಣಗೊಂಡಿದ್ದರಿಂದ, ಹೊಸದಾಗಿ ಮೂವರು ಸಾಕ್ಷಿಗಳನ್ನು ಸೇರಿಸಲು ವಿಚಾರಣಾ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಅವರು 2023ರ ಮಾರ್ಚ್ನಲ್ಲಿ ನಿರಾಕರಿಸಿದ್ದರು.</p><p>ಇದನ್ನು ಪ್ರಶ್ನಿಸಿ ಅಂಜನ್ ಅವರು ಕಾಮರೂಪ್ ಮೆಟ್ರೊಪಾಲಿಟನ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಮೇಲ್ಮನವಿಯ ವಿಚಾರಣೆ ನಡೆಸಿದ ಹೆಚ್ಚುವರಿ ವಿಶೇಷ ನ್ಯಾಯಾಧೀಶ, ರಾಹುಲ್ ಗಾಂಧಿ ವಿರುದ್ಧ ಹೊಸ ಸಾಕ್ಷಿಗಳ ವಿಚಾರಣೆಗೆ ಅವಕಾಶ ಕಲ್ಪಿಸಿ ಸೆಪ್ಟಂಬರ್ನಲ್ಲಿ ಆದೇಶಿಸಿದ್ದರು.</p><p>ಈ ಆದೇಶವನ್ನು ರಾಹುಲ್ ಪರ ವಕೀಲ ಅನ್ಶುಮಾನ್ ಬೋರಾ ಅವರು 2024ರ ಜುಲೈನಲ್ಲಿ ಗುವಾಹಟಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಹೆಚ್ಚುವರಿ ವಿಶೇಷ ನ್ಯಾಯಾಧೀಶರ ಆದೇಶವನ್ನು ವಜಾಗೊಳಿಸಿದೆ. ಹಾಗೆಯೇ, ಪ್ರಕರಣವನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.</p><p>ರಾಹುಲ್ ಗಾಂಧಿ ಅವರು ಪ್ರಮುಖ ವೈಷ್ಣವ ಮಠ 'ಬರ್ಪೆಟಾ ಸತ್ರಾ'ಗೆ 2015ರ ಡಿಸೆಂಬರ್ 12ರಂದು ಭೇಟಿ ನೀಡಲು ಉದ್ದೇಶಿಸಿದ್ದರು. ಆದರೆ, ಆರ್ಎಸ್ಎಸ್ ಕಾರ್ಯಕರ್ತರು ತಮ್ಮನ್ನು ಮಠ ಭೇಟಿ ನೀಡದಂತೆ ತಡೆದಿದ್ದಾರೆ ಎಂದು ನಂತರ ಆರೋಪಿಸಿದ್ದರು.</p><p>ಇದರಿಂದ ಕೆರಳಿದ ಅಂಜನ್ ಕುಮಾರ್, ಕಾಂಗ್ರೆಸ್ ನಾಯಕ ಆರ್ಎಸ್ಎಸ್ ವಿರುದ್ಧ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ 9 ವರ್ಷಗಳ ಹಿಂದೆ ಆರ್ಎಸ್ಎಸ್ ಕಾರ್ಯಕರ್ತ ಹೂಡಿದ್ದ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಹೊಸ ಸಾಕ್ಷಿಗಳ ವಿಚಾರಣೆಗೆ ಅವಕಾಶ ಕಲ್ಪಿಸಿದ್ದ ಕೆಳ ಹಂತದ ನ್ಯಾಯಾಲಯದ ಆದೇಶವನ್ನು ಗುವಾಹಟಿ ಹೈಕೋರ್ಟ್ ಗುರುವಾರ ರದ್ದು ಮಾಡಿದೆ.</p><p>ಮಾನಹಾನಿ ಪ್ರಕರಣ ಸಂಬಂಧ ವಿಚಾರಣಾ ನ್ಯಾಯಾಲಯದ ಎದುರು ಹೆಚ್ಚುವರಿ ಸಾಕ್ಷಿಗಳು ವಿಚಾರಣೆಗೆ ಹಾಜರಾಗಲು ಅವಕಾಶ ಕಲ್ಪಿಸಿ ಕಾಮರೂಪ್ ಮೆಟ್ರೊಪಾಲಿಟನ್ ನ್ಯಾಯಾಲಯದ ಹೆಚ್ಚುವರಿ ವಿಶೇಷ ನ್ಯಾಯಾಧೀಶ ನೀಡಿದ್ದ ಆದೇಶವನ್ನು ನ್ಯಾಯಮೂರ್ತಿ ಅರುಣ್ ದೇವ್ ಚೌಧರಿ ಅವರಿದ್ದ ಏಕಸದಸ್ಯ ಪೀಠ ರದ್ದು ಮಾಡಿದೆ.</p><p>ಆರ್ಎಸ್ಎಸ್ ಕಾರ್ಯಕರ್ತ ಅಂಜನ್ ಕುಮಾರ್ ಬೋರಾ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಸಂಬಂಧ, ಆರು ಸಾಕ್ಷಿಗಳ ಹೇಳಿಕೆಗಳ ದಾಖಲು ಪ್ರಕ್ರಿಯೆ ಪೂರ್ಣಗೊಂಡಿದ್ದರಿಂದ, ಹೊಸದಾಗಿ ಮೂವರು ಸಾಕ್ಷಿಗಳನ್ನು ಸೇರಿಸಲು ವಿಚಾರಣಾ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಅವರು 2023ರ ಮಾರ್ಚ್ನಲ್ಲಿ ನಿರಾಕರಿಸಿದ್ದರು.</p><p>ಇದನ್ನು ಪ್ರಶ್ನಿಸಿ ಅಂಜನ್ ಅವರು ಕಾಮರೂಪ್ ಮೆಟ್ರೊಪಾಲಿಟನ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಮೇಲ್ಮನವಿಯ ವಿಚಾರಣೆ ನಡೆಸಿದ ಹೆಚ್ಚುವರಿ ವಿಶೇಷ ನ್ಯಾಯಾಧೀಶ, ರಾಹುಲ್ ಗಾಂಧಿ ವಿರುದ್ಧ ಹೊಸ ಸಾಕ್ಷಿಗಳ ವಿಚಾರಣೆಗೆ ಅವಕಾಶ ಕಲ್ಪಿಸಿ ಸೆಪ್ಟಂಬರ್ನಲ್ಲಿ ಆದೇಶಿಸಿದ್ದರು.</p><p>ಈ ಆದೇಶವನ್ನು ರಾಹುಲ್ ಪರ ವಕೀಲ ಅನ್ಶುಮಾನ್ ಬೋರಾ ಅವರು 2024ರ ಜುಲೈನಲ್ಲಿ ಗುವಾಹಟಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಹೆಚ್ಚುವರಿ ವಿಶೇಷ ನ್ಯಾಯಾಧೀಶರ ಆದೇಶವನ್ನು ವಜಾಗೊಳಿಸಿದೆ. ಹಾಗೆಯೇ, ಪ್ರಕರಣವನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.</p><p>ರಾಹುಲ್ ಗಾಂಧಿ ಅವರು ಪ್ರಮುಖ ವೈಷ್ಣವ ಮಠ 'ಬರ್ಪೆಟಾ ಸತ್ರಾ'ಗೆ 2015ರ ಡಿಸೆಂಬರ್ 12ರಂದು ಭೇಟಿ ನೀಡಲು ಉದ್ದೇಶಿಸಿದ್ದರು. ಆದರೆ, ಆರ್ಎಸ್ಎಸ್ ಕಾರ್ಯಕರ್ತರು ತಮ್ಮನ್ನು ಮಠ ಭೇಟಿ ನೀಡದಂತೆ ತಡೆದಿದ್ದಾರೆ ಎಂದು ನಂತರ ಆರೋಪಿಸಿದ್ದರು.</p><p>ಇದರಿಂದ ಕೆರಳಿದ ಅಂಜನ್ ಕುಮಾರ್, ಕಾಂಗ್ರೆಸ್ ನಾಯಕ ಆರ್ಎಸ್ಎಸ್ ವಿರುದ್ಧ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>