ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಸ್ಥಾನದ ಅವಶೇಷದ ಮೇಲೆ ಜ್ಞಾನವಾಪಿ ಮಸೀದಿ: ಹಿಂದೂ ಅರ್ಜಿದಾರರ ಪರ ವಕೀಲ

Published 25 ಜನವರಿ 2024, 19:26 IST
Last Updated 25 ಜನವರಿ 2024, 19:26 IST
ಅಕ್ಷರ ಗಾತ್ರ

ವಾರಾಣಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸಿದ್ಧಪಡಿಸಿರುವ ವರದಿಯು, ಈ ಮಸೀದಿಯನ್ನು ಅದಾಗಲೇ ಇದ್ದ ದೇವಸ್ಥಾನದ ಅವಶೇಷಗಳ ಮೇಲೆ ನಿರ್ಮಿಸಲಾಗಿದೆ ಎಂಬುದಾಗಿ ಸೂಚಿಸುತ್ತಿದೆ ಎಂದು ಹಿಂದೂ ಅರ್ಜಿದಾರರ ಪರ ವಕೀಲ ವಿಷ್ಣು ಶಂಕರ್ ಜೈನ್ ಗುರುವಾರ ಹೇಳಿದ್ದಾರೆ.

839 ಪುಟಗಳ ಸಮೀಕ್ಷಾ ವರದಿಯ ಪ್ರತಿಯು ಪ್ರಕರಣದ ಸಂಬಂಧಪಟ್ಟವರಿಗೆ ಕೋರ್ಟ್‌ನಿಂದ ಲಭ್ಯವಾಗಿದೆ ಎಂದು ಜೈನ್ ಹೇಳಿದ್ದಾರೆ. ಅದಾಗಲೇ ಇದ್ದ ದೇವಸ್ಥಾನವನ್ನು ಧ್ವಂಸಗೊಳಿಸಿ, ಅದರ ಅವಶೇಷಗಳ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬುದನ್ನು ಸಮೀಕ್ಷಾ ವರದಿಯು ಸ್ಪಷ್ಟಪಡಿಸುತ್ತಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ದೇವಸ್ಥಾನದ ಅಸ್ತಿತ್ವದ ಬಗ್ಗೆ ಸಾಕಷ್ಟು ಸಾಕ್ಷ್ಯಗಳು ಸಮೀಕ್ಷಾ ವರದಿಯಲ್ಲಿ ಇವೆ ಎಂದು ಅವರು ಹೇಳಿದ್ದಾರೆ. ಹಿಂದೂ ಹಾಗೂ ಮುಸ್ಲಿಂ ಅರ್ಜಿದಾರರು ಸೇರಿದಂತೆ ಒಟ್ಟು 11 ಮಂದಿ ಈ ಸಮೀಕ್ಷೆಯ ವರದಿಯ ಪ್ರತಿ ತಮಗೆ ಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. ಜ್ಞಾನವಾಪಿ ಮಸೀದಿಯು ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಹೊಂದಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT