ಮಸೀದಿಯ ಹೊರ ಗೋಡೆಯೊಂದರ ಬಳಿ ಹಿಂದೂ ದೇವತೆಗಳ ವಿಗ್ರಹಗಳಿವೆ. ಅವುಗಳಿಗೆ ದಿನನಿತ್ಯವೂ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿಹಿಂದೂ ಧರ್ಮಕ್ಕೆ ಸೇರಿದ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ್ ಅವರು ಈ ಪ್ರಕರಣದ ತೀರ್ಪನ್ನು ಸೆಪ್ಟೆಂಬರ್ 12ರ ವರೆಗೆ ಕಾಯ್ದಿರಿಸಿಆಗಸ್ಟ್ 24ರಂದು ತೀರ್ಪು ನೀಡಿದ್ದರು.