<p><strong>ಲಖನೌ:</strong> ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್ಐ) ಆಗಸ್ಟ್ 4ರಿಂದ ಕೈಗೊಂಡಿದ್ದ ವಿವಾದಿತ ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯು ಶುಕ್ರವಾರ ಪೂರ್ಣಗೊಂಡಿದ್ದು, ಶನಿವಾರ ಸಮೀಕ್ಷಾ ವರದಿಯನ್ನು ವಾರಾಣಸಿಯ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು.</p><p>29 ದಿನಗಳ ಸುದೀರ್ಘ ವೈಜ್ಞಾನಿಕ ಸಮೀಕ್ಷೆಯಲ್ಲಿ ಎಎಸ್ಐ ತಂಡವು ಭೂ ಭೇದಕ ರಾಡಾರ್ (ಜಿಪಿಆರ್) ಮತ್ತು ಇತರ ವೈಜ್ಞಾನಿಕ ಉಪಕರಣಗಳನ್ನು ಬಳಸಿ ಜ್ಞಾನವಾಪಿ ಮಸೀದಿ ಆವರಣದ ಕೆಳಗೆ ಏನಿದೆ ಎಂಬುದನ್ನು ಖಚಿತಪಡಿಸಿಕೊಂಡಿದೆ.</p><p>ಪ್ರಾರ್ಥನೆಗೂ ಮುನ್ನ ಮುಸ್ಲಿಮರು ಕೈಕಾಲು ಮುಖ ತೊಳೆದುಕೊಳ್ಳುವ ಸ್ಥಳವಾದ ‘ವುಜುಖಾನಾ’ ಹೊರತುಪಡಿಸಿ ಮಸೀದಿ ಆವರಣದಲ್ಲಿನ ಒಳ ಮತ್ತು ಹೊರಗೋಡೆಗಳು, ನೆಲಮಾಳಿಗೆ ಮತ್ತು ಆವರಣದ ಇತರ ಭಾಗಗಳಲ್ಲಿ ಸಮೀಕ್ಷೆ ನಡೆಸಲಾಗಿದೆ.</p><p>ಎಎಸ್ಐ ವೈಜ್ಞಾನಿಕ ಸಮೀಕ್ಷೆಗಾಗಿ ವಾರಾಣಸಿ ನ್ಯಾಯಾಲಯದ ಆದೇಶಕ್ಕೆ ತಡೆ ಕೋರಿ ಮುಸ್ಲಿಮರ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿತ್ತು. ಬಳಿಕ ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಯನ್ನು ಕೈಗೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್ಐ) ಆಗಸ್ಟ್ 4ರಿಂದ ಕೈಗೊಂಡಿದ್ದ ವಿವಾದಿತ ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯು ಶುಕ್ರವಾರ ಪೂರ್ಣಗೊಂಡಿದ್ದು, ಶನಿವಾರ ಸಮೀಕ್ಷಾ ವರದಿಯನ್ನು ವಾರಾಣಸಿಯ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು.</p><p>29 ದಿನಗಳ ಸುದೀರ್ಘ ವೈಜ್ಞಾನಿಕ ಸಮೀಕ್ಷೆಯಲ್ಲಿ ಎಎಸ್ಐ ತಂಡವು ಭೂ ಭೇದಕ ರಾಡಾರ್ (ಜಿಪಿಆರ್) ಮತ್ತು ಇತರ ವೈಜ್ಞಾನಿಕ ಉಪಕರಣಗಳನ್ನು ಬಳಸಿ ಜ್ಞಾನವಾಪಿ ಮಸೀದಿ ಆವರಣದ ಕೆಳಗೆ ಏನಿದೆ ಎಂಬುದನ್ನು ಖಚಿತಪಡಿಸಿಕೊಂಡಿದೆ.</p><p>ಪ್ರಾರ್ಥನೆಗೂ ಮುನ್ನ ಮುಸ್ಲಿಮರು ಕೈಕಾಲು ಮುಖ ತೊಳೆದುಕೊಳ್ಳುವ ಸ್ಥಳವಾದ ‘ವುಜುಖಾನಾ’ ಹೊರತುಪಡಿಸಿ ಮಸೀದಿ ಆವರಣದಲ್ಲಿನ ಒಳ ಮತ್ತು ಹೊರಗೋಡೆಗಳು, ನೆಲಮಾಳಿಗೆ ಮತ್ತು ಆವರಣದ ಇತರ ಭಾಗಗಳಲ್ಲಿ ಸಮೀಕ್ಷೆ ನಡೆಸಲಾಗಿದೆ.</p><p>ಎಎಸ್ಐ ವೈಜ್ಞಾನಿಕ ಸಮೀಕ್ಷೆಗಾಗಿ ವಾರಾಣಸಿ ನ್ಯಾಯಾಲಯದ ಆದೇಶಕ್ಕೆ ತಡೆ ಕೋರಿ ಮುಸ್ಲಿಮರ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿತ್ತು. ಬಳಿಕ ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಯನ್ನು ಕೈಗೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>