ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ದ್ವಾನಿ ಹಿಂಸಾಚಾರ: 7 ದಿನಗಳ ಬಳಿಕ ಕರ್ಫ್ಯೂ ಸಡಿಲಿಕೆ

Published 15 ಫೆಬ್ರುವರಿ 2024, 13:28 IST
Last Updated 15 ಫೆಬ್ರುವರಿ 2024, 13:28 IST
ಅಕ್ಷರ ಗಾತ್ರ

ಹಲ್ದ್ವಾನಿ: ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾ ಮತ್ತು ಮಸೀದಿಯನ್ನು ತೆರವುಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿ ಹಿಂಸಾಚಾರ ಭುಗಿಲೆದ್ದಿದ್ದ ಉತ್ತರಖಂಡದ ಬನ್‌ಭೂಲ್‌ಪುರ ಪ್ರದೇಶದಲ್ಲಿ ಏಳು ದಿನಗಳ ಬಳಿಕ ಗುರುವಾರ ಕರ್ಫ್ಯೂ ಸಡಿಲಿಸಲಾಗಿದೆ.

ಗೌಜಾಜಾಲಿ, ರೈಲ್ವೆ ಬಜಾರ್‌ ಮತ್ತು ಎಫ್‌ಸಿಐ ಗೋದಾಮು ಪ್ರದೇಶದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4ರ ವರೆಗೆ ಕರ್ಫ್ಯೂ ಸಡಿಲಿಸಲಾಗಿದೆ ಎಂದು ನೈನಿತಾಲ್‌ ಜಿಲ್ಲಾಧಿಕಾರಿ ವಂದನಾ ಸಿಂಗ್‌ ಆದೇಶದಲ್ಲಿ ತಿಳಿಸಿದ್ದಾರೆ.

ಬನ್‌ಭೂಲ್‌ಪುರದ ಇತರ ಪ್ರದೇಶಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮಾತ್ರ ಕರ್ಫ್ಯೂ ಸಡಿಲಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಫೆಬ್ರುವರಿ 8ರಂದು ಭುಗಿಲೆದ್ದಿದ್ದ ಹಿಂಸಾಚಾರದಲ್ಲಿ ಆರು ಮಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT