<p><strong>ಹೈದರಾಬಾದ್:</strong> ‘ಸರ್ಕಾರಿ ಪ್ರಾಯೋಜಿತ ಮೊಕದ್ದಮೆಗಳಿಗೆ ಸರ್ಕಾರವು ಕಡಿವಾಣ ಹಾಕಿದರೆ ನ್ಯಾಯಾಂಗದ ಅರ್ಧ ಸಮಸ್ಯೆ ಬಗೆಹರಿಯುತ್ತದೆ’ ಎಂದು ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ.</p>.<p>‘ಐಎಸ್ಬಿ ಲೀಡರ್ಷಿಪ್ ಸಮ್ಮೇಳನ–2022’ರಲ್ಲಿ ಪಾಲ್ಗೊಂಡು ಶನಿವಾರ ಮಾತನಾಡಿದ ಅವರು, ‘ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ಕೂಡ ನ್ಯಾಯಾಂಗ ವ್ಯವಸ್ಥೆ ಮೂಲಸೌಕರ್ಯಗಳಿಂದ ವಂಚಿತವಾಗಿದೆ. ರಾಷ್ಟ್ರಮಟ್ಟದ ಅಧ್ಯಯನದಿಂದ ಇದು ತಿಳಿದುಬಂದಿದೆ’ ಎಂದು ವಿಷಾದ ವ್ಯಕ್ತಪಡಿಸಿದರು.</p>.<p>‘ನ್ಯಾಯಾಂಗದ ಪಾಲಿಗೆ ಸರ್ಕಾರವೇ ದೊಡ್ಡ ದಾವೆಗಾರ. ಅಂತರ ವಿಭಾಗೀಯ ವ್ಯಾಜ್ಯಗಳು, ಸೇವಾ ವಿಚಾರಗಳಿಗೆ ಸಂಬಂಧಿಸಿದ ದೂರುಗಳನ್ನು ಪರಿಹರಿಸುವುದೇದೊಡ್ಡ ಸಮಸ್ಯೆಯಾಗಿದೆ’ ಎಂದಿದ್ದಾರೆ.</p>.<p><a href="https://www.prajavani.net/india-news/family-members-keep-dead-it-employees-body-in-house-for-18-months-974510.html" itemprop="url">ಕೋಮಾದಲ್ಲಿದ್ದಾರೆ ಎಂದು ಕೊಳೆತ ಶವವನ್ನು ಮನೆಯಲ್ಲೇ ಇಟ್ಟುಕೊಂಡ ಕಾನ್ಪುರ ಕುಟುಂಬ </a></p>.<p>ಅಂಗವಿಕಲರಿಗೆ ನ್ಯಾಯಾಂಗ ಸೇವೆ ಸುಲಭವಾಗಿ ದೊರೆಯುವಂತಾಗಬೇಕು (ನವದೆಹಲಿ ವರದಿ): ‘ಅಂಗವಿಕಲರಿಗೆ ನ್ಯಾಯಾಂಗ ಸೇವೆಯು ಸುಲಭವಾಗಿ ದೊರೆಯುವಂತಾಗಬೇಕು. ಈ ದಿಸೆಯಲ್ಲಿ ಸುಪ್ರೀಂ ಕೋರ್ಟ್ನ ಇ–ಸಮಿತಿಯು ಡಿಜಿಟಲ್ ಮೂಲಸೌಕರ್ಯ ರೂಪಿಸಲು ಮುಂದಾಗಿದೆ’ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಶನಿವಾರ ತಿಳಿಸಿದ್ದಾರೆ.</p>.<p>‘ಅಗತ್ಯ ಕಾನೂನು ಇದ್ದರೂ ಕೂಡ ಕೆಲ ಸರ್ಕಾರಿ–ಖಾಸಗಿ ಕಚೇರಿಗಳು, ಸಾರಿಗೆ ಸೇವೆ, ಉದ್ಯಾನಗಳು ಹಾಗೂ ಇತರೆ ಸ್ಥಳಗಳು ಅಂಗವಿಕಲರಿಗೆ ಮುಕ್ತವಾಗಿಲ್ಲ’ ಎಂದು ವಿಷಾದ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ‘ಸರ್ಕಾರಿ ಪ್ರಾಯೋಜಿತ ಮೊಕದ್ದಮೆಗಳಿಗೆ ಸರ್ಕಾರವು ಕಡಿವಾಣ ಹಾಕಿದರೆ ನ್ಯಾಯಾಂಗದ ಅರ್ಧ ಸಮಸ್ಯೆ ಬಗೆಹರಿಯುತ್ತದೆ’ ಎಂದು ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ.</p>.<p>‘ಐಎಸ್ಬಿ ಲೀಡರ್ಷಿಪ್ ಸಮ್ಮೇಳನ–2022’ರಲ್ಲಿ ಪಾಲ್ಗೊಂಡು ಶನಿವಾರ ಮಾತನಾಡಿದ ಅವರು, ‘ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ಕೂಡ ನ್ಯಾಯಾಂಗ ವ್ಯವಸ್ಥೆ ಮೂಲಸೌಕರ್ಯಗಳಿಂದ ವಂಚಿತವಾಗಿದೆ. ರಾಷ್ಟ್ರಮಟ್ಟದ ಅಧ್ಯಯನದಿಂದ ಇದು ತಿಳಿದುಬಂದಿದೆ’ ಎಂದು ವಿಷಾದ ವ್ಯಕ್ತಪಡಿಸಿದರು.</p>.<p>‘ನ್ಯಾಯಾಂಗದ ಪಾಲಿಗೆ ಸರ್ಕಾರವೇ ದೊಡ್ಡ ದಾವೆಗಾರ. ಅಂತರ ವಿಭಾಗೀಯ ವ್ಯಾಜ್ಯಗಳು, ಸೇವಾ ವಿಚಾರಗಳಿಗೆ ಸಂಬಂಧಿಸಿದ ದೂರುಗಳನ್ನು ಪರಿಹರಿಸುವುದೇದೊಡ್ಡ ಸಮಸ್ಯೆಯಾಗಿದೆ’ ಎಂದಿದ್ದಾರೆ.</p>.<p><a href="https://www.prajavani.net/india-news/family-members-keep-dead-it-employees-body-in-house-for-18-months-974510.html" itemprop="url">ಕೋಮಾದಲ್ಲಿದ್ದಾರೆ ಎಂದು ಕೊಳೆತ ಶವವನ್ನು ಮನೆಯಲ್ಲೇ ಇಟ್ಟುಕೊಂಡ ಕಾನ್ಪುರ ಕುಟುಂಬ </a></p>.<p>ಅಂಗವಿಕಲರಿಗೆ ನ್ಯಾಯಾಂಗ ಸೇವೆ ಸುಲಭವಾಗಿ ದೊರೆಯುವಂತಾಗಬೇಕು (ನವದೆಹಲಿ ವರದಿ): ‘ಅಂಗವಿಕಲರಿಗೆ ನ್ಯಾಯಾಂಗ ಸೇವೆಯು ಸುಲಭವಾಗಿ ದೊರೆಯುವಂತಾಗಬೇಕು. ಈ ದಿಸೆಯಲ್ಲಿ ಸುಪ್ರೀಂ ಕೋರ್ಟ್ನ ಇ–ಸಮಿತಿಯು ಡಿಜಿಟಲ್ ಮೂಲಸೌಕರ್ಯ ರೂಪಿಸಲು ಮುಂದಾಗಿದೆ’ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಶನಿವಾರ ತಿಳಿಸಿದ್ದಾರೆ.</p>.<p>‘ಅಗತ್ಯ ಕಾನೂನು ಇದ್ದರೂ ಕೂಡ ಕೆಲ ಸರ್ಕಾರಿ–ಖಾಸಗಿ ಕಚೇರಿಗಳು, ಸಾರಿಗೆ ಸೇವೆ, ಉದ್ಯಾನಗಳು ಹಾಗೂ ಇತರೆ ಸ್ಥಳಗಳು ಅಂಗವಿಕಲರಿಗೆ ಮುಕ್ತವಾಗಿಲ್ಲ’ ಎಂದು ವಿಷಾದ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>