<p><strong>ಜರುಸಲೇಂ:</strong> ಹಮಾಸ್ ಬಂಡುಕೋರರು 2023ರ ಅಕ್ಟೋಬರ್ 7ರಂದು ನಡೆಸಿದ ಹಠಾತ್ ದಾಳಿಯಲ್ಲಿ ಹತ್ಯೆಗೈದಿದ್ದ ಮೂವರು ಸೈನಿಕರ ಮೃತದೇಹವನ್ನು ಭಾನುವಾರ ರಾತ್ರಿ ಹಸ್ತಾಂತರಿಸಿದರು ಎಂದು ಇಸ್ರೇಲ್ ತಿಳಿಸಿದೆ.</p>.<p>ದಾಳಿ ಸಂದರ್ಭದಲ್ಲಿ ದಕ್ಷಿಣ ಇಸ್ರೇಲ್ನಲ್ಲಿ ಸೈನಿಕರನ್ನು ಹತ್ಯೆ ಮಾಡಿ ಮೃತದೇಹಗಳನ್ನು ಗಾಜಾಕ್ಕೆ ಕೊಂಡೊಯ್ದಿದ್ದರು. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು ಮೃತರನ್ನು ಗುರುತಿಸಿದೆ ಎಂದು ಇಸ್ರೇಲ್ ಸೇನೆಯು ತಿಳಿಸಿದೆ.</p>.<p>ದಕ್ಷಿಣ ಗಾಜಾದ ಸುರಂಗದಲ್ಲಿ ಇವರ ಮೃತದೇಹಗಳು ಪತ್ತೆಯಾಗಿವೆ ಎಂದು ಹಮಾಸ್ ಇದಕ್ಕೂ ಮುನ್ನ ಹೇಳಿಕೆಯಲ್ಲಿ ತಿಳಿಸಿತ್ತು.</p>.<p>ಅಕ್ಟೋಬರ್ 10ರಂದು ಕದಮ ವಿರಾಮ ಒಪ್ಪಂದ ಏರ್ಪಟ್ಟ ಬಳಿಕ ಹಮಾಸ್ ಬಂಡುಕೋರರು 20 ಒತ್ತೆಯಾಳುಗಳ ಮೃತದೇಹಗಳನ್ನು ಹಸ್ತಾಂತರಿಸಿದ್ದಾರೆ. ಈ ಪೈಕಿ ಎಂಟು ಮೃತದೇಹಗಳು ಗಾಜಾದಲ್ಲಿಯೇ ಇವೆ.</p>.<p><strong>45 ಮೃತದೇಹಗಳ ಹಸ್ತಾಂತರ:</strong> ಇಸ್ರೇಲ್ 45 ಪ್ಯಾಲೆಸ್ಟೀನ್ ಪ್ರಜೆಗಳ ಮೃತದೇಹಗಳನ್ನು ಹಸ್ತಾಂತರಿಸಿದೆ ಎಂದು ಗಾಜಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜರುಸಲೇಂ:</strong> ಹಮಾಸ್ ಬಂಡುಕೋರರು 2023ರ ಅಕ್ಟೋಬರ್ 7ರಂದು ನಡೆಸಿದ ಹಠಾತ್ ದಾಳಿಯಲ್ಲಿ ಹತ್ಯೆಗೈದಿದ್ದ ಮೂವರು ಸೈನಿಕರ ಮೃತದೇಹವನ್ನು ಭಾನುವಾರ ರಾತ್ರಿ ಹಸ್ತಾಂತರಿಸಿದರು ಎಂದು ಇಸ್ರೇಲ್ ತಿಳಿಸಿದೆ.</p>.<p>ದಾಳಿ ಸಂದರ್ಭದಲ್ಲಿ ದಕ್ಷಿಣ ಇಸ್ರೇಲ್ನಲ್ಲಿ ಸೈನಿಕರನ್ನು ಹತ್ಯೆ ಮಾಡಿ ಮೃತದೇಹಗಳನ್ನು ಗಾಜಾಕ್ಕೆ ಕೊಂಡೊಯ್ದಿದ್ದರು. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು ಮೃತರನ್ನು ಗುರುತಿಸಿದೆ ಎಂದು ಇಸ್ರೇಲ್ ಸೇನೆಯು ತಿಳಿಸಿದೆ.</p>.<p>ದಕ್ಷಿಣ ಗಾಜಾದ ಸುರಂಗದಲ್ಲಿ ಇವರ ಮೃತದೇಹಗಳು ಪತ್ತೆಯಾಗಿವೆ ಎಂದು ಹಮಾಸ್ ಇದಕ್ಕೂ ಮುನ್ನ ಹೇಳಿಕೆಯಲ್ಲಿ ತಿಳಿಸಿತ್ತು.</p>.<p>ಅಕ್ಟೋಬರ್ 10ರಂದು ಕದಮ ವಿರಾಮ ಒಪ್ಪಂದ ಏರ್ಪಟ್ಟ ಬಳಿಕ ಹಮಾಸ್ ಬಂಡುಕೋರರು 20 ಒತ್ತೆಯಾಳುಗಳ ಮೃತದೇಹಗಳನ್ನು ಹಸ್ತಾಂತರಿಸಿದ್ದಾರೆ. ಈ ಪೈಕಿ ಎಂಟು ಮೃತದೇಹಗಳು ಗಾಜಾದಲ್ಲಿಯೇ ಇವೆ.</p>.<p><strong>45 ಮೃತದೇಹಗಳ ಹಸ್ತಾಂತರ:</strong> ಇಸ್ರೇಲ್ 45 ಪ್ಯಾಲೆಸ್ಟೀನ್ ಪ್ರಜೆಗಳ ಮೃತದೇಹಗಳನ್ನು ಹಸ್ತಾಂತರಿಸಿದೆ ಎಂದು ಗಾಜಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>