ವಿಷಯ ತಿಳಿಯುತ್ತಿದ್ದಂತೆ ಬಲಪಂಥೀಯ ಕಾರ್ಯಕರ್ತರು ಮತ್ತು ಸ್ಥಳೀಯರು ದೇವಾಲಯದ ಬಳಿ ಸೇರಿ ರಸ್ತೆ ತಡೆದು, ದುಷ್ಕರ್ಮಿಗಳನ್ನು ಬಂಧಿಸುವಂತೆ ಧರಣಿ ನಡೆಸಿದ್ದಾರೆ. ಗುಂಪು ಚದುರಿಸಲು ಲಾಠಿ ಚಾರ್ಜ್ ನಡೆಸಲಾಗಿದೆ. ಜೊತೆಗೆ ಮುಂಜಾಗೃತಾ ಕ್ರಮವಾಗಿ 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.