ಹರಿದ್ವಾರ ಜಿಲ್ಲೆಯ ರೂರ್ಕಿ ಬಳಿಯ ಭಗವಾನ್ಪುರದಲ್ಲಿ ಹನುಮ ಜಯಂತಿಯ ಮೆರವಣಿಗೆ ಆಗಮಿಸುತ್ತಿದ್ದಂತೆ, ಮನೆಗಳ ಮೇಲೆ ನಿಂತಿದ್ದವರು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದವರು ಕಕ್ಕಾಬಿಕ್ಕಿಯಾಗಿ ಓಡಿದ್ದರಿಂದ ಕಾಲ್ತುಳಿತದ ರೀತಿಯ ಘಟನೆಯೂ ನಡೆದಿದೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.