<p><strong>ಚಂಡೀಗಡ</strong>: ವಾಯುಮಾಲಿನ್ಯ ತಗ್ಗಿಸಲು ಪ್ರತಿ ಮಂಗಳವಾರ ‘ಕಾರು– ರಹಿತ’ ದಿನವನ್ನಾಗಿ ಘೋಷಿಸಿರುವ ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಅವರು ಇಂದು ಮೋಟಾರ್ ಬೈಕ್ನಲ್ಲಿ ಪ್ರಯಾಣಿಸಿದರು.</p><p>ಕಾರ್ ಫ್ರೀ ಡೇ ಎಂದು ಸೆ. 2ರಂದು ಮುಖ್ಯಮಂತ್ರಿ ಘೋಷಿಸಿದ್ದರು. ಅದರ ಅನ್ವಯ ಪ್ರತಿ ಮಂಗಳವಾರ ಕಾರು ಬಳಸದಂತೆ ಉತ್ತೇಜಿಸಲು ಸ್ವತಃ ಕಾರು ಬಿಟ್ಟು ಸಂಚರಿಸಲು ವಿನೂತನ ಪ್ರಯತ್ನ ನಡೆಸಿದ್ದಾರೆ.</p>.<p>ಮಾದಕದ್ರವ್ಯ ಮುಕ್ತ ಹರಿಯಾಣ ಎಂಬ ಸೈಕ್ಲೊಥಾನ್ ಡೇ ಆಚರಿಸಿ, ಅದರಲ್ಲಿಯೂ ಖಟ್ಟರ್ ಸೈಕಲ್ ತುಳಿದಿದ್ದರು.</p><p>ಮಂಗಳವಾರ ಬೆಳಿಗ್ಗೆ ಬುಲೆಟ್ನಲ್ಲಿ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಖಟರ್ ಪ್ರಯಾಣಿಸಿದರು. ಹೆಲ್ಮೆಟ್ ಧರಿಸಿ ಬೈಕ್ನಲ್ಲಿ ಹೊರಟ ಅವರನ್ನು ಹಿಂದೆ, ಪೊಲೀಸರು ಹಾಗೂ ಅಧಿಕಾರಿಗಳೂ ತಮ್ಮ ತಮ್ಮ ದ್ವಿಚಕ್ರ ವಾಹನದಲ್ಲಿ ಅನುಸರಿಸಿದರು. </p>.<p>ಅಲ್ಲಿ ಅವರಿಗಾಗಿ ಕಾದಿದ್ದ ಹೆಲಿಕಾಪ್ಟರ್ ಮೂಲಕ ಖಟ್ಟರ್ ಮುಂದೆ ಪ್ರಯಾಣ ಬೆಳೆಸಿದರು. ಮುಖ್ಯಮಂತ್ರಿ ಪ್ರಯಾಣಕ್ಕಾಗಿ ರಸ್ತೆಯಲ್ಲಿ ಇತರ ವಾಹನಗಳಿಗೆ ನಿರ್ಬಂಧ ಹೇರಲಾಗಿತ್ತು. ರಸ್ತೆಯ ಇಕ್ಕೆಲಗಳಲ್ಲಿ ಪೊಲೀಸರ ಸರ್ಪಗಾವಲು ಹಾಕಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ</strong>: ವಾಯುಮಾಲಿನ್ಯ ತಗ್ಗಿಸಲು ಪ್ರತಿ ಮಂಗಳವಾರ ‘ಕಾರು– ರಹಿತ’ ದಿನವನ್ನಾಗಿ ಘೋಷಿಸಿರುವ ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಅವರು ಇಂದು ಮೋಟಾರ್ ಬೈಕ್ನಲ್ಲಿ ಪ್ರಯಾಣಿಸಿದರು.</p><p>ಕಾರ್ ಫ್ರೀ ಡೇ ಎಂದು ಸೆ. 2ರಂದು ಮುಖ್ಯಮಂತ್ರಿ ಘೋಷಿಸಿದ್ದರು. ಅದರ ಅನ್ವಯ ಪ್ರತಿ ಮಂಗಳವಾರ ಕಾರು ಬಳಸದಂತೆ ಉತ್ತೇಜಿಸಲು ಸ್ವತಃ ಕಾರು ಬಿಟ್ಟು ಸಂಚರಿಸಲು ವಿನೂತನ ಪ್ರಯತ್ನ ನಡೆಸಿದ್ದಾರೆ.</p>.<p>ಮಾದಕದ್ರವ್ಯ ಮುಕ್ತ ಹರಿಯಾಣ ಎಂಬ ಸೈಕ್ಲೊಥಾನ್ ಡೇ ಆಚರಿಸಿ, ಅದರಲ್ಲಿಯೂ ಖಟ್ಟರ್ ಸೈಕಲ್ ತುಳಿದಿದ್ದರು.</p><p>ಮಂಗಳವಾರ ಬೆಳಿಗ್ಗೆ ಬುಲೆಟ್ನಲ್ಲಿ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಖಟರ್ ಪ್ರಯಾಣಿಸಿದರು. ಹೆಲ್ಮೆಟ್ ಧರಿಸಿ ಬೈಕ್ನಲ್ಲಿ ಹೊರಟ ಅವರನ್ನು ಹಿಂದೆ, ಪೊಲೀಸರು ಹಾಗೂ ಅಧಿಕಾರಿಗಳೂ ತಮ್ಮ ತಮ್ಮ ದ್ವಿಚಕ್ರ ವಾಹನದಲ್ಲಿ ಅನುಸರಿಸಿದರು. </p>.<p>ಅಲ್ಲಿ ಅವರಿಗಾಗಿ ಕಾದಿದ್ದ ಹೆಲಿಕಾಪ್ಟರ್ ಮೂಲಕ ಖಟ್ಟರ್ ಮುಂದೆ ಪ್ರಯಾಣ ಬೆಳೆಸಿದರು. ಮುಖ್ಯಮಂತ್ರಿ ಪ್ರಯಾಣಕ್ಕಾಗಿ ರಸ್ತೆಯಲ್ಲಿ ಇತರ ವಾಹನಗಳಿಗೆ ನಿರ್ಬಂಧ ಹೇರಲಾಗಿತ್ತು. ರಸ್ತೆಯ ಇಕ್ಕೆಲಗಳಲ್ಲಿ ಪೊಲೀಸರ ಸರ್ಪಗಾವಲು ಹಾಕಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>