<p><strong>ಚಂಡೀಗಢ:</strong> ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ವಿಫಲವಾಗಿರುವುದಕ್ಕೆ ಮನನೊಂದು ಹರಿಯಾಣದ ಬಿಜೆಪಿ ಕಾರ್ಯಕರ್ತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. </p><p>ಮೃತ ವ್ಯಕ್ತಿಯನ್ನು ಸುಖ್ವಿಂದರ್ (45) ಎಂದು ಗುರುತಿಸಲಾಗಿದೆ. ಈತ ಹರಿಯಾಣದ ಹಿಸಾರ್ ಜಿಲ್ಲೆಯ ತನ್ನ ಅತ್ತೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. </p><p>ಚಾರ್ಖಿ ದಾದ್ರಿಯ ನಂದಾ ಗ್ರಾಮದ ನಿವಾಸಿಯಾಗಿರುವ ಸುಖ್ವಿಂದರ್ ಹಲವು ವರ್ಷಗಳಿಂದ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಎಂದು ಆತನ ಸಹೋದರ ಜುಗ್ವಿಂದರ್ ಹೇಳಿದ್ದಾರೆ.. </p><p>ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ ಸ್ಪಷ್ಟಬಹುಮತ ಸಿಗದಿರುವುದಕ್ಕೆ ಸುಖ್ವಿಂದರ್ ಮನನೊಂದಿದ್ದರು. ಆತನ ಮನವೊಲಿಸಲು ಕುಟುಂಬಸ್ಥರು ಸಾಕಷ್ಟು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ ಎಂದು ಜುಗ್ವಿಂದರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ವಿಫಲವಾಗಿರುವುದಕ್ಕೆ ಮನನೊಂದು ಹರಿಯಾಣದ ಬಿಜೆಪಿ ಕಾರ್ಯಕರ್ತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. </p><p>ಮೃತ ವ್ಯಕ್ತಿಯನ್ನು ಸುಖ್ವಿಂದರ್ (45) ಎಂದು ಗುರುತಿಸಲಾಗಿದೆ. ಈತ ಹರಿಯಾಣದ ಹಿಸಾರ್ ಜಿಲ್ಲೆಯ ತನ್ನ ಅತ್ತೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. </p><p>ಚಾರ್ಖಿ ದಾದ್ರಿಯ ನಂದಾ ಗ್ರಾಮದ ನಿವಾಸಿಯಾಗಿರುವ ಸುಖ್ವಿಂದರ್ ಹಲವು ವರ್ಷಗಳಿಂದ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಎಂದು ಆತನ ಸಹೋದರ ಜುಗ್ವಿಂದರ್ ಹೇಳಿದ್ದಾರೆ.. </p><p>ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ ಸ್ಪಷ್ಟಬಹುಮತ ಸಿಗದಿರುವುದಕ್ಕೆ ಸುಖ್ವಿಂದರ್ ಮನನೊಂದಿದ್ದರು. ಆತನ ಮನವೊಲಿಸಲು ಕುಟುಂಬಸ್ಥರು ಸಾಕಷ್ಟು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ ಎಂದು ಜುಗ್ವಿಂದರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>