ಬಳಿಕ ಸುದ್ದಿಗಾರರಿಗೆ ಮಾತನಾಡಿದ ಸೈನಿ, 'ಕರ್ನಾಲ್ನಲ್ಲಿ ಮಾತ್ರವಲ್ಲದೆ ಎಲ್ಲೆಡೆ ಬಿಜೆಪಿಗೆ ಭಾರಿ ಜನಬೆಂಬಲ ವ್ಯಕ್ತವಾಗುತ್ತಿದೆ. ನಾವು ದೊಡ್ಡ ಜನಾದೇಶದೊಂದಿಗೆ ಗೆಲ್ಲುತ್ತೇವೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕಳೆದ 10 ವರ್ಷಗಳಲ್ಲಿ ದೇಶ ಪ್ರಗತಿಯ ಪಥದಲ್ಲಿ ಮುನ್ನಡೆದಿದೆ' ಎಂದರು.
ಹರಿಯಾಣದ 10 ಲೋಕಸಭಾ ಸ್ಥಾನಗಳಿಗೆ ಮತ್ತು ಖಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಲ್ ವಿಧಾನಸಭಾ ಸ್ಥಾನಕ್ಕೆ ಮೇ 25 ರಂದು ಚುನಾವಣೆ ನಡೆಯಲಿದೆ.
ಕರ್ನಾಲ್ ವಿಧಾನಸಭಾ ಉಪಚುನಾವಣೆಯಲ್ಲಿ ನಯಾಬ್ ಸೈನಿ ಅವರು ಕಾಂಗ್ರೆಸ್ ಪ್ರತಿಸ್ಪರ್ಧಿ ತರ್ಲೋಚನ್ ಸಿಂಗ್ ವಿರುದ್ಧ ಸ್ಪರ್ಧಿಸಿದ್ದಾರೆ.