<p><strong>ಚಂಡೀಗಢ</strong>: ಹರಿಯಾಣದ ಐಪಿಎಸ್ ಅಧಿಕಾರಿ ವೈ.ಪೂರನ್ ಕುಮಾರ್ (52) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಹಾಗೂ ಐಎಎಸ್ ಅಧಿಕಾರಿ ಅಮ್ನೀತ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.</p><p>ನನ್ನ ಪತಿ ಸಾವಿಗೆ ಹಿರಿಯ ಅಧಿಕಾರಿಗಳ ವ್ಯವಸ್ಥಿತ ಕಿರುಕುಳವೇ ಕಾರಣ ಎಂದು ಅವರು ಆರೋಪಿಸಿದ್ದಾರೆ.</p><p>ಈ ಕುರಿತು ಅವರು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಅಡಿ ದೂರು ದಾಖಲಿಸಿ ಹರಿಯಾಣದ 13 ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಮನವಿ ಮಾಡಿದ್ದಾರೆ.</p><p>ಪೂರನ್ ಕುಮಾರ್ ಚಂಡೀಗಢದ ತಮ್ಮ ನಿವಾಸದಲ್ಲಿ ಮಂಗಳವಾರ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಯಹತ್ಮೆ ಮಾಡಿಕೊಂಡಿದ್ದರು.</p><p>2001ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ಅವರು, ರೋಹಟಕ್ನ ಸುನರಿಯಾದ ಪೊಲೀಸ್ ತರಬೇತಿ ಕೇಂದ್ರದ ‘ಐಜಿಪಿ’ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಲ್ಲಿಗೆ ವರ್ಗಾವಣೆ ಆಗಿ ಬರುವ ಮುನ್ನ ಅವರು ರೋಹಟಕ್ ವಲಯದ ಐಜಿಪಿ ಆಗಿದ್ದರು. </p><p>ಪೂರನ್ ಪತ್ನಿ ಅಮ್ನೀತ್ ಪಿ. ಕುಮಾರ್ ಐಎಎಸ್ ಅಧಿಕಾರಿಯಾಗಿದ್ದಾರೆ. </p><p>‘ಮಂಗಳವಾರ ಮಧ್ಯಾಹ್ನ ಪೊಲೀಸರು ಸೆಕ್ಟರ್ 11ರಲ್ಲಿರುವ ಪೂರನ್ ಅವರ ನಿವಾಸಕ್ಕೆ ಧಾವಿಸಿದರು. ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ’ ಎಂದು ಚಂಡೀಗಢದ ಪೊಲೀಸ್ ವರಿಷ್ಠಾಧಿಕಾರಿ ಕನ್ವರ್ದೀಪ್ ಕೌರ್ ಸುದ್ದಿಗಾರರಿಗೆ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ಹರಿಯಾಣದ ಐಪಿಎಸ್ ಅಧಿಕಾರಿ ವೈ.ಪೂರನ್ ಕುಮಾರ್ (52) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಹಾಗೂ ಐಎಎಸ್ ಅಧಿಕಾರಿ ಅಮ್ನೀತ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.</p><p>ನನ್ನ ಪತಿ ಸಾವಿಗೆ ಹಿರಿಯ ಅಧಿಕಾರಿಗಳ ವ್ಯವಸ್ಥಿತ ಕಿರುಕುಳವೇ ಕಾರಣ ಎಂದು ಅವರು ಆರೋಪಿಸಿದ್ದಾರೆ.</p><p>ಈ ಕುರಿತು ಅವರು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಅಡಿ ದೂರು ದಾಖಲಿಸಿ ಹರಿಯಾಣದ 13 ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಮನವಿ ಮಾಡಿದ್ದಾರೆ.</p><p>ಪೂರನ್ ಕುಮಾರ್ ಚಂಡೀಗಢದ ತಮ್ಮ ನಿವಾಸದಲ್ಲಿ ಮಂಗಳವಾರ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಯಹತ್ಮೆ ಮಾಡಿಕೊಂಡಿದ್ದರು.</p><p>2001ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ಅವರು, ರೋಹಟಕ್ನ ಸುನರಿಯಾದ ಪೊಲೀಸ್ ತರಬೇತಿ ಕೇಂದ್ರದ ‘ಐಜಿಪಿ’ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಲ್ಲಿಗೆ ವರ್ಗಾವಣೆ ಆಗಿ ಬರುವ ಮುನ್ನ ಅವರು ರೋಹಟಕ್ ವಲಯದ ಐಜಿಪಿ ಆಗಿದ್ದರು. </p><p>ಪೂರನ್ ಪತ್ನಿ ಅಮ್ನೀತ್ ಪಿ. ಕುಮಾರ್ ಐಎಎಸ್ ಅಧಿಕಾರಿಯಾಗಿದ್ದಾರೆ. </p><p>‘ಮಂಗಳವಾರ ಮಧ್ಯಾಹ್ನ ಪೊಲೀಸರು ಸೆಕ್ಟರ್ 11ರಲ್ಲಿರುವ ಪೂರನ್ ಅವರ ನಿವಾಸಕ್ಕೆ ಧಾವಿಸಿದರು. ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ’ ಎಂದು ಚಂಡೀಗಢದ ಪೊಲೀಸ್ ವರಿಷ್ಠಾಧಿಕಾರಿ ಕನ್ವರ್ದೀಪ್ ಕೌರ್ ಸುದ್ದಿಗಾರರಿಗೆ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>