<p><strong>ಚಂಡೀಗಡ:</strong> ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಟಿಕ್ರಿ ಗಡಿಯಲ್ಲಿ ಪ್ರತಿಭಟನೆ ನಡೆಯುತ್ತಿರುವ ಸ್ಥಳದಿಂದ ಎರಡು ಕಿ.ಮೀ ದೂರದಲ್ಲಿ ರೈತನೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದೆ.</p>.<p>‘ಹರಿಯಾಣದ ಜಿಂದ್ ಗ್ರಾಮದ ನಿವಾಸಿ ಕರ್ಮವೀರ್ ಸಿಂಗ್(52) ಅವರ ಶವ ಭಾನುವಾರ ಬೆಳಿಗ್ಗೆ ಟಿಕ್ರಿ ಗಡಿ ಪ್ರದೇಶದಿಂದ ಎರಡು ಕಿಲೋ ಮೀಟರ್ ದೂರದಲ್ಲಿರುವ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳದಲ್ಲಿ ಮರಣ ಪತ್ರವೂ ಸಿಕ್ಕಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ’ ಎಂದು ನಗರ ಪೊಲೀಸ್ ಠಾಣೆಯ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಮಾಹಿತಿ ನೀಡಿದರು.</p>.<p>‘ಆತ್ಮೀಯ ರೈತ ಭಾಂದವರೇ, ಮೋದಿ ಸರ್ಕಾರವು ಪ್ರತಿನಿತ್ಯ ಹೊಸ ಹೊಸ ದಿನಾಂಕವನ್ನು ನೀಡುತ್ತಿದೆ. ಈ ಕಪ್ಪು ಕೃಷಿ ಕಾಯ್ದೆಗಳು ಯಾವಾಗ ರದ್ದಾಗುತ್ತವೆ ಎಂಬುದು ಯಾರಿಗೂ ತಿಳಿದಿಲ್ಲ ಎಂದು ಮರಣ ಪತ್ರದಲ್ಲಿ ಬರೆಯಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>15 ದಿನಗಳ ಹಿಂದೆ ಹರಿಯಾಣದ ಮತ್ತೊಬ್ಬ ರೈತ ಟಿಕ್ರಿ ಗಡಿಯಲ್ಲಿ ವಿಷ ಸೇವಿಸಿದ್ದರು. ಬಳಿಕ, ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವಿಗೀಡಾಗಿದ್ದರು.</p>.<p>ಡಿಸೆಂಬರ್ ತಿಂಗಳಲ್ಲಿ ಪಂಜಾಬ್ನ ವಕೀಲರೊಬ್ಬರು ಟಿಕ್ರಿ ಗಡಿಯ ಪ್ರತಿಭಟನಾ ಸ್ಥಳದ ಸಮೀಪದಿಂದ ಕೆಲವು ಕಿಲೋ ಮೀಟರ್ ದೂರದಲ್ಲಿ ವಿಷ ಸೇವಿಸಿ ಸಾವಿಗೀಡಾಗಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/quit-arrogance-withdraw-the-anti-agricultural-law-says-rahul-gandhi-803155.html" itemprop="url">ದುರಂಹಕಾರ ಬಿಟ್ಟು ಕೃಷಿ ಕಾಯ್ದೆ ಹಿಂಪಡೆಯಿರಿ: ರಾಹುಲ್ ಗಾಂಧಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಟಿಕ್ರಿ ಗಡಿಯಲ್ಲಿ ಪ್ರತಿಭಟನೆ ನಡೆಯುತ್ತಿರುವ ಸ್ಥಳದಿಂದ ಎರಡು ಕಿ.ಮೀ ದೂರದಲ್ಲಿ ರೈತನೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದೆ.</p>.<p>‘ಹರಿಯಾಣದ ಜಿಂದ್ ಗ್ರಾಮದ ನಿವಾಸಿ ಕರ್ಮವೀರ್ ಸಿಂಗ್(52) ಅವರ ಶವ ಭಾನುವಾರ ಬೆಳಿಗ್ಗೆ ಟಿಕ್ರಿ ಗಡಿ ಪ್ರದೇಶದಿಂದ ಎರಡು ಕಿಲೋ ಮೀಟರ್ ದೂರದಲ್ಲಿರುವ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳದಲ್ಲಿ ಮರಣ ಪತ್ರವೂ ಸಿಕ್ಕಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ’ ಎಂದು ನಗರ ಪೊಲೀಸ್ ಠಾಣೆಯ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಮಾಹಿತಿ ನೀಡಿದರು.</p>.<p>‘ಆತ್ಮೀಯ ರೈತ ಭಾಂದವರೇ, ಮೋದಿ ಸರ್ಕಾರವು ಪ್ರತಿನಿತ್ಯ ಹೊಸ ಹೊಸ ದಿನಾಂಕವನ್ನು ನೀಡುತ್ತಿದೆ. ಈ ಕಪ್ಪು ಕೃಷಿ ಕಾಯ್ದೆಗಳು ಯಾವಾಗ ರದ್ದಾಗುತ್ತವೆ ಎಂಬುದು ಯಾರಿಗೂ ತಿಳಿದಿಲ್ಲ ಎಂದು ಮರಣ ಪತ್ರದಲ್ಲಿ ಬರೆಯಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>15 ದಿನಗಳ ಹಿಂದೆ ಹರಿಯಾಣದ ಮತ್ತೊಬ್ಬ ರೈತ ಟಿಕ್ರಿ ಗಡಿಯಲ್ಲಿ ವಿಷ ಸೇವಿಸಿದ್ದರು. ಬಳಿಕ, ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವಿಗೀಡಾಗಿದ್ದರು.</p>.<p>ಡಿಸೆಂಬರ್ ತಿಂಗಳಲ್ಲಿ ಪಂಜಾಬ್ನ ವಕೀಲರೊಬ್ಬರು ಟಿಕ್ರಿ ಗಡಿಯ ಪ್ರತಿಭಟನಾ ಸ್ಥಳದ ಸಮೀಪದಿಂದ ಕೆಲವು ಕಿಲೋ ಮೀಟರ್ ದೂರದಲ್ಲಿ ವಿಷ ಸೇವಿಸಿ ಸಾವಿಗೀಡಾಗಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/quit-arrogance-withdraw-the-anti-agricultural-law-says-rahul-gandhi-803155.html" itemprop="url">ದುರಂಹಕಾರ ಬಿಟ್ಟು ಕೃಷಿ ಕಾಯ್ದೆ ಹಿಂಪಡೆಯಿರಿ: ರಾಹುಲ್ ಗಾಂಧಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>