<p><strong>ಕುರುಕ್ಷೇತ್ರ:</strong> ಸೂರ್ಯಕಾಂತಿ ಬೀಜಕ್ಕೆ ಕನಿಷ್ಠ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ ಇಲ್ಲಿನ ಪಿಪ್ಲಿಯ ಧಾನ್ಯ ಮಾರುಕಟ್ಟೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹಾಪಂಚಾಯತ್ ಬಳಿಕ ರೈತರು ದೆಹಲಿ– ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟಿಸಿದರು.</p><p>ರೈತರು ಪ್ರತಿಭಟನೆ ನಡೆಸಿದ ಕಾರಣ ಪೊಲೀಸರು ಬೇರೆ ರಸ್ತೆಗಳ ಮೂಲಕ ವಾಹನಗಳನ್ನು ಕಳುಹಿಸಿದರು ಎಂದೂ ಹೇಳಿವೆ.</p><p>‘ಬೇಡಿಕೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಅವರ ಜೊತೆ ಚರ್ಚಿಸಲು ಸಭೆ ಏರ್ಪಡಿಸುವುದಾಗಿ ಸ್ಥಳೀಯಾಡಳಿತ ಹೇಳಿತ್ತು. ಆದರೆ, ಸಭೆ ಏರ್ಪಡಿಸದ ಕಾರಣ ರಸ್ತೆ ತಡೆ ನಡೆಸುತ್ತಿದ್ದೇವೆ’ ಎಂದು ರೈತ ಮುಖಂಡ ಕರಂ ಸಿಂಗ್ ಮಥಾನ ಹೇಳಿದರು.</p><p>ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ಕುಸ್ತಿಪಟು ಬಜರಂಗ್ ಪೂನಿಯಾ, ವಿವಿಧ ಖಾಪ್ಗಳ ಮುಖಂಡರು ಪಾಲ್ಗೊಂಡಿದ್ದರು. ಭಾರತೀಯ ಕಿಸಾನ್ ಯೂನಿಯನ್ (ಚಾರುಣಿ) ಮಹಾಪಂಚಾಯತ್ಗೆ ಕರೆ ನೀಡಿತ್ತು.</p><p><strong>1.48 ಲಕ್ಷ ರೈತರ ವಿರುದ್ಧ ಇನ್ನೂ ಇವೆ ಪ್ರಕರಣಗಳು:</strong> ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದ 1.48 ಲಕ್ಷ ರೈತರ ವಿರುದ್ಧದ ಪ್ರಕರಣಗಳನ್ನು ಇನ್ನೂ ವಾಪಸ್ ಪಡೆದಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಮುಖಂಡ ಶಿವಕುಮಾರ್ ಶರ್ಮಾ ಸೋಮವಾರ ತಿಳಿಸಿದ್ದಾರೆ.</p><p>ಸುದ್ದಿಗಾರರ ಜೊತೆ ಮಾತನಾಡಿದ ಅವರು,‘ಪ್ರತಿಭಟನೆಯು ಕೊನೆಗೊಂಡ ಬಳಿಕ 30 ದಿನಗಳೊಳಗೆ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯುವುದಾಗಿ ಕೇಂದ್ರ ಸರ್ಕಾರವು ನಮಗೆ ಭರವಸೆ ನೀಡಿತ್ತು. ಆದರೆ ಪ್ರಕರಣಗಳು ಇನ್ನೂ ಇವೆ. ನಾನೂ ಸೇರಿದಂತೆ ರೈತರು ಈ ಪ್ರಕರಣಗಳಿಂದಾಗಿ ನ್ಯಾಯಾಲಯಕ್ಕೆ ಓಡಾಡುತ್ತಿದ್ದೇವೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಕ್ಷೇತ್ರ:</strong> ಸೂರ್ಯಕಾಂತಿ ಬೀಜಕ್ಕೆ ಕನಿಷ್ಠ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ ಇಲ್ಲಿನ ಪಿಪ್ಲಿಯ ಧಾನ್ಯ ಮಾರುಕಟ್ಟೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹಾಪಂಚಾಯತ್ ಬಳಿಕ ರೈತರು ದೆಹಲಿ– ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟಿಸಿದರು.</p><p>ರೈತರು ಪ್ರತಿಭಟನೆ ನಡೆಸಿದ ಕಾರಣ ಪೊಲೀಸರು ಬೇರೆ ರಸ್ತೆಗಳ ಮೂಲಕ ವಾಹನಗಳನ್ನು ಕಳುಹಿಸಿದರು ಎಂದೂ ಹೇಳಿವೆ.</p><p>‘ಬೇಡಿಕೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಅವರ ಜೊತೆ ಚರ್ಚಿಸಲು ಸಭೆ ಏರ್ಪಡಿಸುವುದಾಗಿ ಸ್ಥಳೀಯಾಡಳಿತ ಹೇಳಿತ್ತು. ಆದರೆ, ಸಭೆ ಏರ್ಪಡಿಸದ ಕಾರಣ ರಸ್ತೆ ತಡೆ ನಡೆಸುತ್ತಿದ್ದೇವೆ’ ಎಂದು ರೈತ ಮುಖಂಡ ಕರಂ ಸಿಂಗ್ ಮಥಾನ ಹೇಳಿದರು.</p><p>ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ಕುಸ್ತಿಪಟು ಬಜರಂಗ್ ಪೂನಿಯಾ, ವಿವಿಧ ಖಾಪ್ಗಳ ಮುಖಂಡರು ಪಾಲ್ಗೊಂಡಿದ್ದರು. ಭಾರತೀಯ ಕಿಸಾನ್ ಯೂನಿಯನ್ (ಚಾರುಣಿ) ಮಹಾಪಂಚಾಯತ್ಗೆ ಕರೆ ನೀಡಿತ್ತು.</p><p><strong>1.48 ಲಕ್ಷ ರೈತರ ವಿರುದ್ಧ ಇನ್ನೂ ಇವೆ ಪ್ರಕರಣಗಳು:</strong> ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದ 1.48 ಲಕ್ಷ ರೈತರ ವಿರುದ್ಧದ ಪ್ರಕರಣಗಳನ್ನು ಇನ್ನೂ ವಾಪಸ್ ಪಡೆದಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಮುಖಂಡ ಶಿವಕುಮಾರ್ ಶರ್ಮಾ ಸೋಮವಾರ ತಿಳಿಸಿದ್ದಾರೆ.</p><p>ಸುದ್ದಿಗಾರರ ಜೊತೆ ಮಾತನಾಡಿದ ಅವರು,‘ಪ್ರತಿಭಟನೆಯು ಕೊನೆಗೊಂಡ ಬಳಿಕ 30 ದಿನಗಳೊಳಗೆ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯುವುದಾಗಿ ಕೇಂದ್ರ ಸರ್ಕಾರವು ನಮಗೆ ಭರವಸೆ ನೀಡಿತ್ತು. ಆದರೆ ಪ್ರಕರಣಗಳು ಇನ್ನೂ ಇವೆ. ನಾನೂ ಸೇರಿದಂತೆ ರೈತರು ಈ ಪ್ರಕರಣಗಳಿಂದಾಗಿ ನ್ಯಾಯಾಲಯಕ್ಕೆ ಓಡಾಡುತ್ತಿದ್ದೇವೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>