ವಿಧಾನಸಭೆಯಲ್ಲಿ ಮಾತನಾಡಿದ ಅವರು, ‘ಕರ್ನಾಲ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ಘೋಷಿಸುತ್ತಿದ್ದೇನೆ. ನೂತನ ಮುಖ್ಯಮಂತ್ರಿ ನಯಾಬ್ ಸೈನಿ ಅವರು ಕರ್ನಾಲ್ ವಿಧಾನಸಭಾ ಕ್ಷೇತ್ರದ ಹೊಣೆಯನ್ನು ಹೊತ್ತುಕೊಳ್ಳಲಿದ್ದಾರೆ’ ಎಂದು ಅವರು ಹೇಳಿದರು.
2014ರಿಂದ ಖಟ್ಟರ್ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರ ರಾಜೀನಾಮೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ. ಮೂಲಗಳ ಪ್ರಕಾರ ಅವರನ್ನು ಕರ್ನಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಲಿದೆ ಎನ್ನಲಾಗಿದೆ.