<p>ಚಂಡೀಗಢ: ಹಿಂಸಾಚಾರ ಪೀಡಿತ ನೂಹ್ನಲ್ಲಿ ಅಕ್ರಮ ಕಟ್ಟಡಗಳ ನೆಲಸಮಗೊಳಿಸುವ ಕಾರ್ಯಾಚರಣೆಗೂ ಮೊದಲು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿರಲಿಲ್ಲ ಮತ್ತು ಅದು ‘ಜನಾಂಗೀಯ ಶುದ್ಧಿ’ ಕಾರ್ಯಾಚರಣೆಯಂತಿತ್ತು ಎಂಬ ಹೈಕೋರ್ಟ್ ಅಭಿಪ್ರಾಯವನ್ನು ಹರಿಯಾಣ ಸರ್ಕಾರ ಶುಕ್ರವಾರ ಅಲ್ಲಗಳೆದಿದೆ.</p>.<p>ಮುಸ್ಲಿಂ ಸಮುದಾಯದವರು ಪ್ರಧಾನವಾಗಿರುವ ನೂಹ್ನಲ್ಲಿ ಅಕ್ರಮ ಕಟ್ಟಡಗಳ ನೆಲಸಮಗೊಳಿಸುವ ಪ್ರಕ್ರಿಯೆಗೆ ಸೋಮವಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತಡೆ ನೀಡಿತ್ತು. ನಿರ್ದಿಷ್ಟ ಸಮುದಾಯದ ಜನರನ್ನು ಗುರಿಯಾಗಿಸಿಕೊಂಡು ಈ ಕಾರ್ಯಾಚರಣೆ ನಡೆಸಲಾಗುತ್ತಿದೆಯೇ ಎಂದೂ ಪ್ರಶ್ನಿಸಿತ್ತು.</p>.<p>ಶುಕ್ರವಾರ ನ್ಯಾಯಮೂರ್ತಿಗಳಾದ ಅರುಣ್ ಪಲ್ಲಿ ಮತ್ತು ಜಗಮೋಹನ ಬನ್ಸಾಲ್ ಅವರಿದ್ದ ವಿಭಾಗೀಯ ನ್ಯಾಯಪೀಠವು ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಹರಿಯಾಣ ಸರ್ಕಾರದ ಪರ ವಕೀಲ ದೀಪ್ ಸಭರ್ವಾಲ್ ಅವರು, ‘ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆ ವೇಳೆ ಎಲ್ಲ ಪ್ರಕ್ರಿಯೆಗಳನ್ನೂ ಪೂರ್ಣಗೊಳಿಸಲಾಗಿದೆ. ರಾಜ್ಯದ ಮುಂದೆ ಎಲ್ಲರೂ ಸಮಾನರು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಂಡೀಗಢ: ಹಿಂಸಾಚಾರ ಪೀಡಿತ ನೂಹ್ನಲ್ಲಿ ಅಕ್ರಮ ಕಟ್ಟಡಗಳ ನೆಲಸಮಗೊಳಿಸುವ ಕಾರ್ಯಾಚರಣೆಗೂ ಮೊದಲು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿರಲಿಲ್ಲ ಮತ್ತು ಅದು ‘ಜನಾಂಗೀಯ ಶುದ್ಧಿ’ ಕಾರ್ಯಾಚರಣೆಯಂತಿತ್ತು ಎಂಬ ಹೈಕೋರ್ಟ್ ಅಭಿಪ್ರಾಯವನ್ನು ಹರಿಯಾಣ ಸರ್ಕಾರ ಶುಕ್ರವಾರ ಅಲ್ಲಗಳೆದಿದೆ.</p>.<p>ಮುಸ್ಲಿಂ ಸಮುದಾಯದವರು ಪ್ರಧಾನವಾಗಿರುವ ನೂಹ್ನಲ್ಲಿ ಅಕ್ರಮ ಕಟ್ಟಡಗಳ ನೆಲಸಮಗೊಳಿಸುವ ಪ್ರಕ್ರಿಯೆಗೆ ಸೋಮವಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತಡೆ ನೀಡಿತ್ತು. ನಿರ್ದಿಷ್ಟ ಸಮುದಾಯದ ಜನರನ್ನು ಗುರಿಯಾಗಿಸಿಕೊಂಡು ಈ ಕಾರ್ಯಾಚರಣೆ ನಡೆಸಲಾಗುತ್ತಿದೆಯೇ ಎಂದೂ ಪ್ರಶ್ನಿಸಿತ್ತು.</p>.<p>ಶುಕ್ರವಾರ ನ್ಯಾಯಮೂರ್ತಿಗಳಾದ ಅರುಣ್ ಪಲ್ಲಿ ಮತ್ತು ಜಗಮೋಹನ ಬನ್ಸಾಲ್ ಅವರಿದ್ದ ವಿಭಾಗೀಯ ನ್ಯಾಯಪೀಠವು ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಹರಿಯಾಣ ಸರ್ಕಾರದ ಪರ ವಕೀಲ ದೀಪ್ ಸಭರ್ವಾಲ್ ಅವರು, ‘ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆ ವೇಳೆ ಎಲ್ಲ ಪ್ರಕ್ರಿಯೆಗಳನ್ನೂ ಪೂರ್ಣಗೊಳಿಸಲಾಗಿದೆ. ರಾಜ್ಯದ ಮುಂದೆ ಎಲ್ಲರೂ ಸಮಾನರು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>