<p><strong>ಚಂಡೀಗಢ</strong>: ಅಪರಾಧ ಚಟುವಟಿಕೆಗಳ ವಿರುದ್ಧ ರಾಜ್ಯದಾದ್ಯಂತ ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 348 ಆರೋಪಿಗಳನ್ನು ಬಂಧಿಸಲಾಗಿದೆ. ದರೋಡೆಯಂತಹ ಘೋರ ಕೃತ್ಯಗಳಲ್ಲಿ ಭಾಗಿಯಾದ 35 ಮಂದಿಯೂ ಈ ಪಟ್ಟಿಯಲ್ಲಿದ್ದಾರೆ ಎಂದು ಹರಿಯಾಣ ಪೊಲೀಸ್ ಇಲಾಖೆ ಶುಕ್ರವಾರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.</p><p>ಅಪರಾಧ ಜಾಲಕ್ಕೆ ಕಡಿವಾಣ ಹಾಕಲು, ಮಾದಕವಸ್ತು ಹಾಗೂ ಶಸ್ತ್ರಾಸ್ತ್ರ ಕಳ್ಳಸಾಗಣೆಗೆ ತಡೆಯೊಡ್ಡುವ ಮೂಲಕ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಪೊಲೀಸ್ ಮಹಾನಿರ್ದೇಶಕ ಒ.ಪಿ. ಸಿಂಗ್ ಅವರು ನೀಡಿದ್ದ ನಿರ್ದೇಶನದಂತೆ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿದೆ.</p><p>ಕಾರ್ಯಾಚರಣೆ ವೇಳೆ ವಿವಿಧ ಜಿಲ್ಲೆಗಳಲ್ಲಿ ಗಾಂಜಾ, ಹೆರಾಯಿನ್, ಚರಸ್, ಅಫೀಮು, ಭುಕ್ಕಿ ಸೇರಿದಂತೆ 65 ಕೆ.ಜಿ.ಗೂ ಅಧಿಕ ಮಾದಕವಸ್ತುಗಳನ್ನು ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಾರ ಪ್ರಮಾಣದ ಮಾದಕ ದ್ರವ್ಯದ ಮಾತ್ರೆಗಳು, ನಿಷೇಧಿತ ಔಷದಗಳನ್ನೂ ವಶಪಡಿಸಿಕೊಂಡಿದ್ದಾರೆ.</p><p>8 ಪಿಸ್ತೂಲ್ಗಳು, ಅಷ್ಟೇ ಕಾರ್ಟ್ರಿಡ್ಜ್ಗಳನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ 16 ಪ್ರಕರಣ ದಾಖಲಾಗಿದ್ದು, 22 ಮಂದಿಯನ್ನು ಬಂಧಿಸಲಾಗಿದೆ. ಸಂಘಟಿತ ಅಪರಾಧಕ್ಕೆ ಸಂಬಂಧಿಸಿದ ಆಸ್ತಿಯೊಂದನ್ನು ನಾಶಮಾಡಲಾಗಿದೆ. ಈ ಸಂಬಂಧ ಎಂಟು ಮಂದಿ ವಿರುದ್ಧ ಲುಕ್-ಔಟ್ ನೋಟಿಸ್ ಹೊರಡಿಸಲಾಗಿದೆ. ಅಂತರರಾಜ್ಯ ಅಪರಾಧಗಳನ್ನು ನಿಗ್ರಹಿಸುವ ನಿಟ್ಟಿನಲ್ಲಿ ಇತರ ರಾಜ್ಯಗಳೊಂದಿಗೆ ಗುಪ್ತಚರ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.</p><p>41 ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಏಳು ಮಂದಿ ಘೋಷಿತ ಅಪರಾಧಿಗಳನ್ನು ಬಂಧಿಸಲಾಗಿದೆ. ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ 6,986 ಚಲನ್ಗಳನ್ನು ನೀಡಲಾಗಿದೆ. ಮಹಿಳೆಯರು ಹಾಗೂ ಸೈಬರ್ ಸುರಕ್ಷತೆಯನ್ನು ಗಮನದಲ್ಲಿರಿಸಿ, 81 ಕಡೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದೂ ಮಾಹಿತಿ ನೀಡಲಾಗಿದೆ.</p><p>ರಾತ್ರಿ ವೇಳೆ ಭದ್ರತೆ ಹೆಚ್ಚಿಸುವ ಸಲುವಾಗಿ 366 ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ. 1,566 ಗಸ್ತು ವಾಹನಗಳು ಮತ್ತು 4,900ಕ್ಕೂ ಅಧಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.</p><p><strong>3,435 ಕರೆ<br></strong>ಸಾರ್ವಜನಿಕರಿಗೆ ತುರ್ತಾಗಿ ಸ್ಪಂದಿಸುವುದಕ್ಕಾಗಿ ತೆರೆದಿರುವ ಸಹಾಯವಾಣಿ ಸಂಖ್ಯೆ '112'ಗೆ ಕಳೆದ 24 ಗಂಟೆಗಳಲ್ಲಿ 3,435 ಕರೆಗಳು ಬಂದಿವೆ. ಇದರಲ್ಲಿ, 3,057ಕ್ಕೆ ಸ್ಥಳದಲ್ಲೇ ಪರಿಹಾರ ನೀಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.</p><p>88 ಕಡೆ ವರದಿಯಾಗಿರುವ ರಸ್ತೆ ಅಪಘಾತ ಪ್ರಕರಣಗಳಿಗೆ ತಕ್ಷಣವೇ ನೆರವಾಗಿರುವ ಪೊಲೀಸರು, 605 ಮಂದಿ ನಿರಾಶ್ರಿತರಿಗೂ ಸಹಾಯ ಹಸ್ತ ಚಾಚಿದ್ದಾರೆ.</p><p>ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ವ್ಯಕ್ತಿಯೊಬ್ಬರಿಗೆ ₹3.51 ಲಕ್ಷ ವಂಚಿಸಿದ್ದ 'ಜೈಪುರ ಗ್ಯಾಂಗ್'ನ ನಾಲ್ವರನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ಅಪರಾಧ ಚಟುವಟಿಕೆಗಳ ವಿರುದ್ಧ ರಾಜ್ಯದಾದ್ಯಂತ ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 348 ಆರೋಪಿಗಳನ್ನು ಬಂಧಿಸಲಾಗಿದೆ. ದರೋಡೆಯಂತಹ ಘೋರ ಕೃತ್ಯಗಳಲ್ಲಿ ಭಾಗಿಯಾದ 35 ಮಂದಿಯೂ ಈ ಪಟ್ಟಿಯಲ್ಲಿದ್ದಾರೆ ಎಂದು ಹರಿಯಾಣ ಪೊಲೀಸ್ ಇಲಾಖೆ ಶುಕ್ರವಾರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.</p><p>ಅಪರಾಧ ಜಾಲಕ್ಕೆ ಕಡಿವಾಣ ಹಾಕಲು, ಮಾದಕವಸ್ತು ಹಾಗೂ ಶಸ್ತ್ರಾಸ್ತ್ರ ಕಳ್ಳಸಾಗಣೆಗೆ ತಡೆಯೊಡ್ಡುವ ಮೂಲಕ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಪೊಲೀಸ್ ಮಹಾನಿರ್ದೇಶಕ ಒ.ಪಿ. ಸಿಂಗ್ ಅವರು ನೀಡಿದ್ದ ನಿರ್ದೇಶನದಂತೆ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿದೆ.</p><p>ಕಾರ್ಯಾಚರಣೆ ವೇಳೆ ವಿವಿಧ ಜಿಲ್ಲೆಗಳಲ್ಲಿ ಗಾಂಜಾ, ಹೆರಾಯಿನ್, ಚರಸ್, ಅಫೀಮು, ಭುಕ್ಕಿ ಸೇರಿದಂತೆ 65 ಕೆ.ಜಿ.ಗೂ ಅಧಿಕ ಮಾದಕವಸ್ತುಗಳನ್ನು ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಾರ ಪ್ರಮಾಣದ ಮಾದಕ ದ್ರವ್ಯದ ಮಾತ್ರೆಗಳು, ನಿಷೇಧಿತ ಔಷದಗಳನ್ನೂ ವಶಪಡಿಸಿಕೊಂಡಿದ್ದಾರೆ.</p><p>8 ಪಿಸ್ತೂಲ್ಗಳು, ಅಷ್ಟೇ ಕಾರ್ಟ್ರಿಡ್ಜ್ಗಳನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ 16 ಪ್ರಕರಣ ದಾಖಲಾಗಿದ್ದು, 22 ಮಂದಿಯನ್ನು ಬಂಧಿಸಲಾಗಿದೆ. ಸಂಘಟಿತ ಅಪರಾಧಕ್ಕೆ ಸಂಬಂಧಿಸಿದ ಆಸ್ತಿಯೊಂದನ್ನು ನಾಶಮಾಡಲಾಗಿದೆ. ಈ ಸಂಬಂಧ ಎಂಟು ಮಂದಿ ವಿರುದ್ಧ ಲುಕ್-ಔಟ್ ನೋಟಿಸ್ ಹೊರಡಿಸಲಾಗಿದೆ. ಅಂತರರಾಜ್ಯ ಅಪರಾಧಗಳನ್ನು ನಿಗ್ರಹಿಸುವ ನಿಟ್ಟಿನಲ್ಲಿ ಇತರ ರಾಜ್ಯಗಳೊಂದಿಗೆ ಗುಪ್ತಚರ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.</p><p>41 ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಏಳು ಮಂದಿ ಘೋಷಿತ ಅಪರಾಧಿಗಳನ್ನು ಬಂಧಿಸಲಾಗಿದೆ. ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ 6,986 ಚಲನ್ಗಳನ್ನು ನೀಡಲಾಗಿದೆ. ಮಹಿಳೆಯರು ಹಾಗೂ ಸೈಬರ್ ಸುರಕ್ಷತೆಯನ್ನು ಗಮನದಲ್ಲಿರಿಸಿ, 81 ಕಡೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದೂ ಮಾಹಿತಿ ನೀಡಲಾಗಿದೆ.</p><p>ರಾತ್ರಿ ವೇಳೆ ಭದ್ರತೆ ಹೆಚ್ಚಿಸುವ ಸಲುವಾಗಿ 366 ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ. 1,566 ಗಸ್ತು ವಾಹನಗಳು ಮತ್ತು 4,900ಕ್ಕೂ ಅಧಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.</p><p><strong>3,435 ಕರೆ<br></strong>ಸಾರ್ವಜನಿಕರಿಗೆ ತುರ್ತಾಗಿ ಸ್ಪಂದಿಸುವುದಕ್ಕಾಗಿ ತೆರೆದಿರುವ ಸಹಾಯವಾಣಿ ಸಂಖ್ಯೆ '112'ಗೆ ಕಳೆದ 24 ಗಂಟೆಗಳಲ್ಲಿ 3,435 ಕರೆಗಳು ಬಂದಿವೆ. ಇದರಲ್ಲಿ, 3,057ಕ್ಕೆ ಸ್ಥಳದಲ್ಲೇ ಪರಿಹಾರ ನೀಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.</p><p>88 ಕಡೆ ವರದಿಯಾಗಿರುವ ರಸ್ತೆ ಅಪಘಾತ ಪ್ರಕರಣಗಳಿಗೆ ತಕ್ಷಣವೇ ನೆರವಾಗಿರುವ ಪೊಲೀಸರು, 605 ಮಂದಿ ನಿರಾಶ್ರಿತರಿಗೂ ಸಹಾಯ ಹಸ್ತ ಚಾಚಿದ್ದಾರೆ.</p><p>ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ವ್ಯಕ್ತಿಯೊಬ್ಬರಿಗೆ ₹3.51 ಲಕ್ಷ ವಂಚಿಸಿದ್ದ 'ಜೈಪುರ ಗ್ಯಾಂಗ್'ನ ನಾಲ್ವರನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>