<p><strong>ಚಂಡೀಗಢ</strong>: ಬೆಳೆಗಳಿಗೆ ಬೆಂಬಲ ಬೆಲೆಗೆ(ಎಂಎಸ್ಪಿ) ಕಾನೂನಿನ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೆಹಲಿಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿರುವ ರೈತರನ್ನು ಚದುರಿಸಲು ಪೊಲೀಸರು ಶಂಭು ಗಡಿ ಬಳಿ ತಡೆದು, ಅಶ್ರುವಾಯು ಪ್ರಯೋಗಿಸಿದ್ದಾರೆ. </p><p>ನೆರೆಯ ಹರಿಯಾಣ ಮತ್ತು ಪಂಜಾಬ್ಗೆ ಹೊಂದಿಕೊಂಡಿರುವ ಗಡಿ ಬಳಿ ಹಲವು ಪದರಗಳ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ.</p><p>ಅಶ್ರುವಾಯುವಿನಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಕೆಲ ರೈತರು ಮುಖವನ್ನು ಮುಚ್ಚಿಕೊಂಡಿದ್ದರು. ಮತ್ತೆ ಕೆಲವರು ರಕ್ಷಣಾತ್ಮಕ ಕನ್ನಡಕಗಳನ್ನು ಧರಿಸಿದ್ದರು. ಕೆಲವರು ಕೆಲವು ಮೀಟರ್ಗಳಷ್ಟು ಹಿಂದಕ್ಕೆ ಸರಿದಿದ್ದರು. ಇನ್ನೂ ಕೆಲವರು ಒದ್ದೆಯಾದ ಸೆಣಬಿನ ಚೀಲಗಳಿಂದ ರಕ್ಷಣೆ ಪಡೆಯುತ್ತಿದ್ದದ್ದು ಕಂಡುಬಂದಿತು.</p><p>101 ರೈತರ ಗುಂಪು ಶಂಭು ಗಡಿಯಿಂದ ದೆಹಲಿಗೆ ಪಾದಯಾತ್ರೆಯನ್ನು ಇಂದು ಪುನರಾರಂಭಿಸಿತ್ತು. </p><p>ಕೆಲ ಮೀಟರ್ಗಳ ನಡಿಗೆ ಬಳಿ ರೈತರು ಬ್ಯಾರಿಕೇಡ್ ಮೀರಿ ನುಗ್ಗಲು ಯತ್ನಿಸಿದರು. ಈ ವೇಳೆ ಪಾದಯಾತ್ರೆಗೆ ಅನುಮತಿ ಪಡೆದಿರುವ ಪತ್ರ ತೋರಿಸುವಂತೆ ಪೊಲೀಸರು ಒತ್ತಾಯಿಸಿದ್ದಾರೆ. ಬಳಿಕ, ಅಶ್ರುವಾಯು ಪ್ರಯೋಗಿಸಿದ್ದಾರೆ.</p><p>ಶುಕ್ರವಾರ ಅಶ್ರುವಾಯು ಪ್ರಯೋಗದಿಂದ ಕೆಲವರು ಗಾಯಗೊಂಡಿದ್ದ ಹಿನ್ನೆಲೆ ರೈತರು ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು.</p><p>ಎಂಎಸ್ಪಿ ಜೊತೆಗೆ ರೈತರ ವಿವಿಧ ಬೇಡಿಕೆಗಳ ಬಗ್ಗೆಯೂ ಸರ್ಕಾರ ಮಾತುಕತೆಗೆ ಮುಂದಾಗಬೇಕು ಎಂದು ರೈತರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ಬೆಳೆಗಳಿಗೆ ಬೆಂಬಲ ಬೆಲೆಗೆ(ಎಂಎಸ್ಪಿ) ಕಾನೂನಿನ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೆಹಲಿಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿರುವ ರೈತರನ್ನು ಚದುರಿಸಲು ಪೊಲೀಸರು ಶಂಭು ಗಡಿ ಬಳಿ ತಡೆದು, ಅಶ್ರುವಾಯು ಪ್ರಯೋಗಿಸಿದ್ದಾರೆ. </p><p>ನೆರೆಯ ಹರಿಯಾಣ ಮತ್ತು ಪಂಜಾಬ್ಗೆ ಹೊಂದಿಕೊಂಡಿರುವ ಗಡಿ ಬಳಿ ಹಲವು ಪದರಗಳ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ.</p><p>ಅಶ್ರುವಾಯುವಿನಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಕೆಲ ರೈತರು ಮುಖವನ್ನು ಮುಚ್ಚಿಕೊಂಡಿದ್ದರು. ಮತ್ತೆ ಕೆಲವರು ರಕ್ಷಣಾತ್ಮಕ ಕನ್ನಡಕಗಳನ್ನು ಧರಿಸಿದ್ದರು. ಕೆಲವರು ಕೆಲವು ಮೀಟರ್ಗಳಷ್ಟು ಹಿಂದಕ್ಕೆ ಸರಿದಿದ್ದರು. ಇನ್ನೂ ಕೆಲವರು ಒದ್ದೆಯಾದ ಸೆಣಬಿನ ಚೀಲಗಳಿಂದ ರಕ್ಷಣೆ ಪಡೆಯುತ್ತಿದ್ದದ್ದು ಕಂಡುಬಂದಿತು.</p><p>101 ರೈತರ ಗುಂಪು ಶಂಭು ಗಡಿಯಿಂದ ದೆಹಲಿಗೆ ಪಾದಯಾತ್ರೆಯನ್ನು ಇಂದು ಪುನರಾರಂಭಿಸಿತ್ತು. </p><p>ಕೆಲ ಮೀಟರ್ಗಳ ನಡಿಗೆ ಬಳಿ ರೈತರು ಬ್ಯಾರಿಕೇಡ್ ಮೀರಿ ನುಗ್ಗಲು ಯತ್ನಿಸಿದರು. ಈ ವೇಳೆ ಪಾದಯಾತ್ರೆಗೆ ಅನುಮತಿ ಪಡೆದಿರುವ ಪತ್ರ ತೋರಿಸುವಂತೆ ಪೊಲೀಸರು ಒತ್ತಾಯಿಸಿದ್ದಾರೆ. ಬಳಿಕ, ಅಶ್ರುವಾಯು ಪ್ರಯೋಗಿಸಿದ್ದಾರೆ.</p><p>ಶುಕ್ರವಾರ ಅಶ್ರುವಾಯು ಪ್ರಯೋಗದಿಂದ ಕೆಲವರು ಗಾಯಗೊಂಡಿದ್ದ ಹಿನ್ನೆಲೆ ರೈತರು ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು.</p><p>ಎಂಎಸ್ಪಿ ಜೊತೆಗೆ ರೈತರ ವಿವಿಧ ಬೇಡಿಕೆಗಳ ಬಗ್ಗೆಯೂ ಸರ್ಕಾರ ಮಾತುಕತೆಗೆ ಮುಂದಾಗಬೇಕು ಎಂದು ರೈತರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>