<p><strong>ಚಂಡೀಗಢ:</strong> ಹರಿಯಾಣ ಪೊಲೀಸರು 'ಆಪರೇಷನ್ ಟ್ರ್ಯಾಕ್ಡೌನ್' ಹೆಸರಿನಲ್ಲಿ ಅಪರಾಧ ಕೃತ್ಯಗಳಲ್ಲಿ ತೊಡಗಿರುವವರನ್ನು ಬಂಧಿಸುವ ದೊಡ್ಡ ಕಾರ್ಯಾಚರಣೆ ನಡೆಸುತ್ತಿದ್ದು ಶುಕ್ರವಾರ ಒಂದೇ ದಿನ 257 ಆರೋಪಿಗಳನ್ನು ಬಂಧಿಸಿದ್ದಾರೆ.</p><p>ರಾಜ್ಯವನ್ನು ಇನ್ನಷ್ಟು ಸುರಕ್ಷಿತವಾಗಿಡಲು ಹರಿಯಾಣ ಪೊಲೀಸರು ಕಳೆದ ವಾರದಿಂದ 'ಆಪರೇಷನ್ ಟ್ರ್ಯಾಕ್ಡೌನ್‘ ಹೆಸರಿನಲ್ಲಿ ಆರೋಪಿಗಳನ್ನು ಬಂಧಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಾಜ್ಯದ ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. </p><p>ಕೊಲೆ ಯತ್ನ, ಹತ್ಯೆ, ವಸೂಲಿ ಮತ್ತು ಅಕ್ರಮ ಆಯುಧ ಸಂಗ್ರಹ, ಡಗ್ಸ್ ಮಾಫಿಯಾ, ಅತ್ಯಾಚಾರ ಯತ್ನ ಸೇರಿದಂತೆ ವಿವಿಧ ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಲಾಗುತ್ತಿದ್ದು, ಇಂತಹವರಿಗೆ ಜಾಮೀನು ನೀಡಲಾಗುವುದಿಲ್ಲ ಎಂದು ಹರಿಯಾಣ ಡಿಜಿಪಿ ಓ.ಪಿ.ಸಿಂಗ್ ಹೇಳಿದ್ದಾರೆ. </p><p>42 ಗಂಭೀರ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ 62 ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಒಂಬತ್ತು ಕೊಲೆ ಪ್ರಕರಣಗಳಲ್ಲಿ 23 ಜನ ಹಾಗೂ 13 ಕೊಲೆ ಯತ್ನ ಪ್ರಕರಣಗಳಲ್ಲಿ 16 ಜನರನ್ನು ಬಂಧಿಸಲಾಗಿದೆ.</p><p> ನವೆಂಬರ್ 5ರಿಂದ ಆರಂಭವಾಗಿರುವ ರಾಜ್ಯವ್ಯಾಪಿ 'ಆಪರೇಷನ್ ಟ್ರ್ಯಾಕ್ ಡೌನ್' ಕಾರ್ಯಾಚರಣೆಯಲ್ಲಿ ಸಂಘಟಿತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಲಾಗುತ್ತಿದ್ದೆ. ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಾಧಿಗಳ ಮೇಲೆ ನಿಗಾವಹಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p><p>ಇಲ್ಲಿಯವರೆಗೂ ಸುಮಾರು 500ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಲಾಗಿದೆ ಎಂದು ಡಿಜಿಪಿ ಓ.ಪಿ.ಸಿಂಗ್ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಹರಿಯಾಣ ಪೊಲೀಸರು 'ಆಪರೇಷನ್ ಟ್ರ್ಯಾಕ್ಡೌನ್' ಹೆಸರಿನಲ್ಲಿ ಅಪರಾಧ ಕೃತ್ಯಗಳಲ್ಲಿ ತೊಡಗಿರುವವರನ್ನು ಬಂಧಿಸುವ ದೊಡ್ಡ ಕಾರ್ಯಾಚರಣೆ ನಡೆಸುತ್ತಿದ್ದು ಶುಕ್ರವಾರ ಒಂದೇ ದಿನ 257 ಆರೋಪಿಗಳನ್ನು ಬಂಧಿಸಿದ್ದಾರೆ.</p><p>ರಾಜ್ಯವನ್ನು ಇನ್ನಷ್ಟು ಸುರಕ್ಷಿತವಾಗಿಡಲು ಹರಿಯಾಣ ಪೊಲೀಸರು ಕಳೆದ ವಾರದಿಂದ 'ಆಪರೇಷನ್ ಟ್ರ್ಯಾಕ್ಡೌನ್‘ ಹೆಸರಿನಲ್ಲಿ ಆರೋಪಿಗಳನ್ನು ಬಂಧಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಾಜ್ಯದ ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. </p><p>ಕೊಲೆ ಯತ್ನ, ಹತ್ಯೆ, ವಸೂಲಿ ಮತ್ತು ಅಕ್ರಮ ಆಯುಧ ಸಂಗ್ರಹ, ಡಗ್ಸ್ ಮಾಫಿಯಾ, ಅತ್ಯಾಚಾರ ಯತ್ನ ಸೇರಿದಂತೆ ವಿವಿಧ ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಲಾಗುತ್ತಿದ್ದು, ಇಂತಹವರಿಗೆ ಜಾಮೀನು ನೀಡಲಾಗುವುದಿಲ್ಲ ಎಂದು ಹರಿಯಾಣ ಡಿಜಿಪಿ ಓ.ಪಿ.ಸಿಂಗ್ ಹೇಳಿದ್ದಾರೆ. </p><p>42 ಗಂಭೀರ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ 62 ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಒಂಬತ್ತು ಕೊಲೆ ಪ್ರಕರಣಗಳಲ್ಲಿ 23 ಜನ ಹಾಗೂ 13 ಕೊಲೆ ಯತ್ನ ಪ್ರಕರಣಗಳಲ್ಲಿ 16 ಜನರನ್ನು ಬಂಧಿಸಲಾಗಿದೆ.</p><p> ನವೆಂಬರ್ 5ರಿಂದ ಆರಂಭವಾಗಿರುವ ರಾಜ್ಯವ್ಯಾಪಿ 'ಆಪರೇಷನ್ ಟ್ರ್ಯಾಕ್ ಡೌನ್' ಕಾರ್ಯಾಚರಣೆಯಲ್ಲಿ ಸಂಘಟಿತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಲಾಗುತ್ತಿದ್ದೆ. ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಾಧಿಗಳ ಮೇಲೆ ನಿಗಾವಹಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p><p>ಇಲ್ಲಿಯವರೆಗೂ ಸುಮಾರು 500ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಲಾಗಿದೆ ಎಂದು ಡಿಜಿಪಿ ಓ.ಪಿ.ಸಿಂಗ್ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>