<p><strong>ಚಂಡೀಗಡ</strong>: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನವದೆಹಲಿಯತ್ತ ಜಾಥಾ ಕೈಗೊಂಡಿದ್ದ ರೈತರ ಗುಂಪನ್ನು ಚದುರಿಸಲು ಹರಿಯಾಣ ಪೊಲೀಸರು ಭಾನುವಾರ ಅಶ್ರುವಾಯು ಪ್ರಯೋಗಿಸಿದ್ದಾರೆ.</p>.<p>‘ಭುದ್ಲಾ ಸಂಗ್ವಾರಿ ಗ್ರಾಮದ ಬಳಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್ಗಳನ್ನು ಮುರಿದ ಪ್ರತಿಭಟನಕಾರರು, ಮಸಾನಿ ಅಣೆಕಟ್ಟೆಯ ಸಮೀಪ ಹಾಕಿದ್ದ ಬ್ಯಾರಿಕೇಡ್ಗಳನ್ನೂ ಮುರಿಯಲು ಮುಂದಾದರು. ಈ ವೇಳೆ ಅಶ್ರುವಾಯು ಪ್ರಯೋಗಿಸಿ ಅವರನ್ನು ಚದುರಿಸಲಾಯಿತು’ ಎಂದು ರೆವಾರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಜೋರ್ವಾಲ್ ಹೇಳಿದ್ದಾರೆ.</p>.<p>ಡಿಸೆಂಬರ್ 31ರಂದು ರಾಜಸ್ಥಾನದ ಶಹಜಹಾನ್ಪುರದಲ್ಲೂ ಪ್ರತಿಭಟನಕಾರರು ಬ್ಯಾರಿಕೇಡ್ಗಳನ್ನು ಮುರಿದು ದೆಹಲಿಯತ್ತ ಸಾಗಿದ್ದರು. ಆಗಲೂ ಅವರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದರು. ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ರಾಜಸ್ಥಾನ, ಹರಿಯಾಣದ ರೈತರು ಕೆಲ ದಿನಗಳಿಂದ ಜೈಪುರ–ದೆಹಲಿ ಹೆದ್ದಾರಿಯ ಸನಿಹ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ</strong>: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನವದೆಹಲಿಯತ್ತ ಜಾಥಾ ಕೈಗೊಂಡಿದ್ದ ರೈತರ ಗುಂಪನ್ನು ಚದುರಿಸಲು ಹರಿಯಾಣ ಪೊಲೀಸರು ಭಾನುವಾರ ಅಶ್ರುವಾಯು ಪ್ರಯೋಗಿಸಿದ್ದಾರೆ.</p>.<p>‘ಭುದ್ಲಾ ಸಂಗ್ವಾರಿ ಗ್ರಾಮದ ಬಳಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್ಗಳನ್ನು ಮುರಿದ ಪ್ರತಿಭಟನಕಾರರು, ಮಸಾನಿ ಅಣೆಕಟ್ಟೆಯ ಸಮೀಪ ಹಾಕಿದ್ದ ಬ್ಯಾರಿಕೇಡ್ಗಳನ್ನೂ ಮುರಿಯಲು ಮುಂದಾದರು. ಈ ವೇಳೆ ಅಶ್ರುವಾಯು ಪ್ರಯೋಗಿಸಿ ಅವರನ್ನು ಚದುರಿಸಲಾಯಿತು’ ಎಂದು ರೆವಾರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಜೋರ್ವಾಲ್ ಹೇಳಿದ್ದಾರೆ.</p>.<p>ಡಿಸೆಂಬರ್ 31ರಂದು ರಾಜಸ್ಥಾನದ ಶಹಜಹಾನ್ಪುರದಲ್ಲೂ ಪ್ರತಿಭಟನಕಾರರು ಬ್ಯಾರಿಕೇಡ್ಗಳನ್ನು ಮುರಿದು ದೆಹಲಿಯತ್ತ ಸಾಗಿದ್ದರು. ಆಗಲೂ ಅವರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದರು. ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ರಾಜಸ್ಥಾನ, ಹರಿಯಾಣದ ರೈತರು ಕೆಲ ದಿನಗಳಿಂದ ಜೈಪುರ–ದೆಹಲಿ ಹೆದ್ದಾರಿಯ ಸನಿಹ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>