ಡಿಸೆಂಬರ್ 31ರಂದು ರಾಜಸ್ಥಾನದ ಶಹಜಹಾನ್ಪುರದಲ್ಲೂ ಪ್ರತಿಭಟನಕಾರರು ಬ್ಯಾರಿಕೇಡ್ಗಳನ್ನು ಮುರಿದು ದೆಹಲಿಯತ್ತ ಸಾಗಿದ್ದರು. ಆಗಲೂ ಅವರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದರು. ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ರಾಜಸ್ಥಾನ, ಹರಿಯಾಣದ ರೈತರು ಕೆಲ ದಿನಗಳಿಂದ ಜೈಪುರ–ದೆಹಲಿ ಹೆದ್ದಾರಿಯ ಸನಿಹ ಪ್ರತಿಭಟನೆ ನಡೆಸುತ್ತಿದ್ದಾರೆ.