<p><strong>ಲಖನೌ:</strong> ಉತ್ತರ ಪ್ರದೇಶದ ಹಾಥರಸ್ ಜಿಲ್ಲೆಯ ಫೂಲರಾಯ್ ಗ್ರಾಮದಲ್ಲಿ ಆಯೋಜಿಸಿದ್ದ ‘ಸತ್ಸಂಗ’ದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಕುರಿತು ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಐವರು ಸದಸ್ಯರ ತಜ್ಞರ ಸಮಿತಿಯನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.</p><p>ಸಾರ್ವಜನಿಕ ಸಭೆಗಳಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳು ಮತ್ತು ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸುವಂತೆ ತಜ್ಞರ ಸಮಿತಿಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. </p><p>ಹಾಥರಸ್ ಕಾಲ್ತುಳಿತ ಪ್ರಕರಣ ಸಂಬಂಧ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡುವ ಮೂಲಕ ನಿರ್ಲಕ್ಷ್ಯವಹಿಸಿದ ವ್ಯಕ್ತಿಗಳು, ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ. </p><p>ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 121ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಪೈಕಿ ಬಹುತೇಕರನ್ನು ಗುರುತಿಸಲಾಗಿದ್ದು, 19 ಮೃತದೇಹಗಳನ್ನು ಇನ್ನಷ್ಟೇ ಗುರುತಿಸಬೇಕಿದೆ ಎಂದು ಹೇಳಿದ್ದಾರೆ.</p><p>ಧಾರ್ಮಿಕ ಸಭೆ ಆಯೋಜಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.</p>.Hathras Stampede | ಮೃತರ ಸಂಖ್ಯೆ 121ಕ್ಕೆ ಏರಿಕೆ.Hathras Stampede | ಬಹುತೇಕ ಮೃತದೇಹಗಳ ಗುರುತು ಪತ್ತೆ: ಉ.ಪ್ರದೇಶ ಸರ್ಕಾರ.Hathras Stampede|‘ಸತ್ಸಂಗ’ ಆಯೋಜಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ.ಹಾಥರಸ್ ಕಾಲ್ತುಳಿತಕ್ಕೆ ಜನದಟ್ಟಣೆಯೇ ಪ್ರಮುಖ ಕಾರಣ: ಯುಪಿ ಮುಖ್ಯ ಕಾರ್ಯದರ್ಶಿ.ಹಾಥರಸ್ ಕಾಲ್ತುಳಿತ ದುರಂತ; ಆಸ್ಪತ್ರೆ ಆವರಣದಲ್ಲಿ ಶವಗಳ ರಾಶಿ, ಸಂಬಂಧಿಕರ ಆಕ್ರಂದನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶದ ಹಾಥರಸ್ ಜಿಲ್ಲೆಯ ಫೂಲರಾಯ್ ಗ್ರಾಮದಲ್ಲಿ ಆಯೋಜಿಸಿದ್ದ ‘ಸತ್ಸಂಗ’ದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಕುರಿತು ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಐವರು ಸದಸ್ಯರ ತಜ್ಞರ ಸಮಿತಿಯನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.</p><p>ಸಾರ್ವಜನಿಕ ಸಭೆಗಳಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳು ಮತ್ತು ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸುವಂತೆ ತಜ್ಞರ ಸಮಿತಿಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. </p><p>ಹಾಥರಸ್ ಕಾಲ್ತುಳಿತ ಪ್ರಕರಣ ಸಂಬಂಧ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡುವ ಮೂಲಕ ನಿರ್ಲಕ್ಷ್ಯವಹಿಸಿದ ವ್ಯಕ್ತಿಗಳು, ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ. </p><p>ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 121ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಪೈಕಿ ಬಹುತೇಕರನ್ನು ಗುರುತಿಸಲಾಗಿದ್ದು, 19 ಮೃತದೇಹಗಳನ್ನು ಇನ್ನಷ್ಟೇ ಗುರುತಿಸಬೇಕಿದೆ ಎಂದು ಹೇಳಿದ್ದಾರೆ.</p><p>ಧಾರ್ಮಿಕ ಸಭೆ ಆಯೋಜಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.</p>.Hathras Stampede | ಮೃತರ ಸಂಖ್ಯೆ 121ಕ್ಕೆ ಏರಿಕೆ.Hathras Stampede | ಬಹುತೇಕ ಮೃತದೇಹಗಳ ಗುರುತು ಪತ್ತೆ: ಉ.ಪ್ರದೇಶ ಸರ್ಕಾರ.Hathras Stampede|‘ಸತ್ಸಂಗ’ ಆಯೋಜಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ.ಹಾಥರಸ್ ಕಾಲ್ತುಳಿತಕ್ಕೆ ಜನದಟ್ಟಣೆಯೇ ಪ್ರಮುಖ ಕಾರಣ: ಯುಪಿ ಮುಖ್ಯ ಕಾರ್ಯದರ್ಶಿ.ಹಾಥರಸ್ ಕಾಲ್ತುಳಿತ ದುರಂತ; ಆಸ್ಪತ್ರೆ ಆವರಣದಲ್ಲಿ ಶವಗಳ ರಾಶಿ, ಸಂಬಂಧಿಕರ ಆಕ್ರಂದನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>