<p><strong>ಹಾಥರಸ್:</strong> ‘ಹಾಥರಸ್ ಜಿಲ್ಲೆಯಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆಯಲ್ಲಿ ಸಂತ್ರಸ್ತರಾದವರಿಗೆ ಹೆಚ್ಚಿನ ಮೊತ್ತದ ಪರಿಹಾರವನ್ನು ನೀಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ. </p><p>ಹಾಗೇ ಈ ದುರ್ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.</p>.ಹಾಥರಸ್ ಕಾಲ್ತುಳಿತ ಪ್ರಕರಣ: ರಾಜಕೀಯ ಪಕ್ಷಗಳೊಂದಿಗೆ ಪ್ರಮುಖ ಆರೋಪಿ ಸಂಪರ್ಕ.ಹಾಥರಸ್ ಕಾಲ್ತುಳಿತ | ಅವ್ಯವಸ್ಥೆ ಸೃಷ್ಟಿಸಿದವರನ್ನು ಬಿಡುವುದಿಲ್ಲ: ಭೋಲೆ ಬಾಬಾ.<p>ಈಗಾಗಲೇ ಉತ್ತರ ಪ್ರದೇಶ ಸರ್ಕಾರ ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ₹ 2ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹ 50 ಸಾವಿರ ನೀಡುವುದಾಗಿ ಘೋಷಣೆ ಮಾಡಿದೆ. ಈ ಪರಿಹಾರವು ತುಂಬಾ ಕಡಿಮೆಯಾಗಿದೆ, ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಮತ್ತು ಅದನ್ನು ಆದಷ್ಟು ಬೇಗ ನೀಡಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ. </p><p>ಕಳೆದ ಶುಕ್ರವಾರ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿ ರಾಹುಲ್ ಗಾಂಧಿ ಅವರಿಗೆ ಸಾಂತ್ವಾನ ಹೇಳಿದ್ದರು. </p><p>ಈ ಘಟನೆ ಕುರಿತಂತೆ ನಾನು ರಾಜಕೀಯ ದೃಷ್ಟಿಕೋನದಿಂದ ಮಾತನಾಡಲು ಬಯಸುವುದಿಲ್ಲ. ಈ ವಿಷಯದಲ್ಲಿ ಆಡಳಿತಾತ್ಮಕ ಲೋಪಗಳು ಇವೆ. ಹಲವು ಪ್ರಮಾದಗಳೂ ಇದ್ದು, ಅವುಗಳನ್ನು ಗುರುತಿಸಬೇಕಿದೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕರು ಆಗಿರುವ ರಾಹುಲ್ ಗಾಂಧಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ್ದರು.</p>.ಹಾಥರಸ್ ಕಾಲ್ತುಳಿತ | ಸರ್ಕಾರದಿಂದಲೂ ಲೋಪಗಳಾಗಿವೆ: ರಾಹುಲ್ ಗಾಂಧಿ.ಹಾಥರಸ್ ಕಾಲ್ತುಳಿತ ಪ್ರಕರಣ: ಭೋಲೆ ಬಾಬಾ, ಪ್ರಮುಖ ಆರೋಪಿಗಾಗಿ ಅಂತರರಾಜ್ಯ ಶೋಧ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಥರಸ್:</strong> ‘ಹಾಥರಸ್ ಜಿಲ್ಲೆಯಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆಯಲ್ಲಿ ಸಂತ್ರಸ್ತರಾದವರಿಗೆ ಹೆಚ್ಚಿನ ಮೊತ್ತದ ಪರಿಹಾರವನ್ನು ನೀಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ. </p><p>ಹಾಗೇ ಈ ದುರ್ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.</p>.ಹಾಥರಸ್ ಕಾಲ್ತುಳಿತ ಪ್ರಕರಣ: ರಾಜಕೀಯ ಪಕ್ಷಗಳೊಂದಿಗೆ ಪ್ರಮುಖ ಆರೋಪಿ ಸಂಪರ್ಕ.ಹಾಥರಸ್ ಕಾಲ್ತುಳಿತ | ಅವ್ಯವಸ್ಥೆ ಸೃಷ್ಟಿಸಿದವರನ್ನು ಬಿಡುವುದಿಲ್ಲ: ಭೋಲೆ ಬಾಬಾ.<p>ಈಗಾಗಲೇ ಉತ್ತರ ಪ್ರದೇಶ ಸರ್ಕಾರ ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ₹ 2ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹ 50 ಸಾವಿರ ನೀಡುವುದಾಗಿ ಘೋಷಣೆ ಮಾಡಿದೆ. ಈ ಪರಿಹಾರವು ತುಂಬಾ ಕಡಿಮೆಯಾಗಿದೆ, ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಮತ್ತು ಅದನ್ನು ಆದಷ್ಟು ಬೇಗ ನೀಡಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ. </p><p>ಕಳೆದ ಶುಕ್ರವಾರ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿ ರಾಹುಲ್ ಗಾಂಧಿ ಅವರಿಗೆ ಸಾಂತ್ವಾನ ಹೇಳಿದ್ದರು. </p><p>ಈ ಘಟನೆ ಕುರಿತಂತೆ ನಾನು ರಾಜಕೀಯ ದೃಷ್ಟಿಕೋನದಿಂದ ಮಾತನಾಡಲು ಬಯಸುವುದಿಲ್ಲ. ಈ ವಿಷಯದಲ್ಲಿ ಆಡಳಿತಾತ್ಮಕ ಲೋಪಗಳು ಇವೆ. ಹಲವು ಪ್ರಮಾದಗಳೂ ಇದ್ದು, ಅವುಗಳನ್ನು ಗುರುತಿಸಬೇಕಿದೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕರು ಆಗಿರುವ ರಾಹುಲ್ ಗಾಂಧಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ್ದರು.</p>.ಹಾಥರಸ್ ಕಾಲ್ತುಳಿತ | ಸರ್ಕಾರದಿಂದಲೂ ಲೋಪಗಳಾಗಿವೆ: ರಾಹುಲ್ ಗಾಂಧಿ.ಹಾಥರಸ್ ಕಾಲ್ತುಳಿತ ಪ್ರಕರಣ: ಭೋಲೆ ಬಾಬಾ, ಪ್ರಮುಖ ಆರೋಪಿಗಾಗಿ ಅಂತರರಾಜ್ಯ ಶೋಧ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>