’ಬಿಗಿ ಭದ್ರತೆಯೊಂದಿಗೆಸಂತ್ರಸ್ತೆಯ ಕುಟುಂಬದವರನ್ನು ಬೆಳಿಗ್ಗೆ 6 ಗಂಟೆಗೆಹಾಥರಸ್ನಿಂದ ಲಖನೌಗೆ ಕಳುಹಿಸಲಾಗಿದೆ. ಸಂತ್ರಸ್ತೆಯ ತಂದೆ, ತಾಯಿ, ಮೂವರು ಸಹೋದರರ ಜತೆಯಲ್ಲಿ ಮ್ಯಾಜಿಸ್ಟ್ರೇಟ್ ಅಂಜಲಿ ಗಂಗ್ವಾರ್ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಇದ್ದಾರೆ’ ಎಂದು ಪ್ರಕರಣದ ನೋಡಲ್ ಅಧಿಕಾರಿ ಡಿಐಜಿ ಶಲಬ್ ಮಾಥೂರ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ನ್ಯಾಯಾಲಯ ಕುಟುಂಬದ ಸದಸ್ಯರನ್ನು ವೈಯಕ್ತಿಕವಾಗಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.