ಮಿಜೋರಾಂ ವಿಧಾನಸಭಾ ಚುನಾವಣೆ ಅಂಗವಾಗಿ ಬಿಜೆಪಿಯಿಂದ ಬುಧವಾರ ಇಲ್ಲಿ ನಡೆದ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಯಾವುದೇ ಸಮಸ್ಯೆಯ ಪರಿಹಾರಕ್ಕೆ ಹಿಂಸೆ ಪರಿಹಾರವಲ್ಲ. ಎರಡೂ ಕಡೆಯವರು ಕುಳಿತು ಪರಸ್ಪರ ಮಾತುಕತೆ ನಡೆಸಬೇಕು. ಸಂಘರ್ಷಪೀಡಿತ ಕಣಿವೆ ರಾಜ್ಯದ ಪರಿಸ್ಥಿತಿ ಸುಧಾರಿಸಲು ಮುಂದಾಗಬೇಕು’ ಎಂದು ಹೇಳಿದರು.