ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ ಹಿಂಸಾಚಾರ ‌| ಪರಸ್ಪರ ಮಾತುಕತೆಯೇ ಮದ್ದು: ರಾಜನಾಥ ಸಿಂಗ್

Published 1 ನವೆಂಬರ್ 2023, 12:37 IST
Last Updated 1 ನವೆಂಬರ್ 2023, 12:37 IST
ಅಕ್ಷರ ಗಾತ್ರ

ಟಿಪಾ (ಮಿಜೋರಾಂ) (ಪಿಟಿಐ): ‘ಹಿಂಸಾಚಾರಪೀಡಿತ ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳು ಒಟ್ಟಾಗಿ ಕುಳಿತು ಬಿಚ್ಚುಮನಸ್ಸಿನಿಂದ ಚರ್ಚಿಸಬೇಕು. ಆ ಮೂಲಕ ಎರಡೂ ಕಡೆಯ ನಂಬಿಕೆಯನ್ನು ಗಟ್ಟಿಗೊಳಿಸಿಕೊಳ್ಳಬೇಕು’ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಸಲಹೆ ನೀಡಿದ್ದಾರೆ.

ಮಿಜೋರಾಂ ವಿಧಾನಸಭಾ ಚುನಾವಣೆ ಅಂಗವಾಗಿ ಬಿಜೆಪಿಯಿಂದ ಬುಧವಾರ ಇಲ್ಲಿ ನಡೆದ ಪ್ರಚಾರ ರ‍್ಯಾಲಿಯಲ್ಲಿ ಮಾತನಾಡಿದ ಅವರು, ‘ಯಾವುದೇ ಸಮಸ್ಯೆಯ ಪರಿಹಾರಕ್ಕೆ ಹಿಂಸೆ ಪರಿಹಾರವಲ್ಲ. ಎರಡೂ ಕಡೆಯವರು ಕುಳಿತು ಪರಸ್ಪರ ಮಾತುಕತೆ ನಡೆಸಬೇಕು. ಸಂಘರ್ಷಪೀಡಿತ ಕಣಿವೆ ರಾಜ್ಯದ ಪರಿಸ್ಥಿತಿ ಸುಧಾರಿಸಲು ಮುಂದಾಗಬೇಕು’ ಎಂದು ಹೇಳಿದರು. 

ಮಣಿಪುರದ ಹಿಂಸಾಚಾರ ಹೊರತಾಗಿ ಕಳೆದ ಒಂಬತ್ತು ವರ್ಷಗಳಲ್ಲಿ ಈಶಾನ್ಯ ಭಾರತವು ಶಾಂತಿಯುತವಾಗಿತ್ತು. ಆದರೆ, ಈಗ ಅಲ್ಲಿ ಸೃಷ್ಟಿಯಾಗಿರುವ ಸಂಘರ್ಷವೂ ನಮಗೆ ನೋವು ತರಿಸಿದೆ ಎಂದರು.

‘ಮಣಿಪುರ ಪರಿಸ್ಥಿತಿಯನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್ ಮುಂದಾಗಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT