ನವದೆಹಲಿ: ‘ವಿಧಾನಸಭೆಯಲ್ಲಿ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳಿಗೆ ಬಹುಮತ ಇದೆ. ಅಷ್ಟೇ ಅಲ್ಲ, ಪಕ್ಷದ ವಿರುದ್ಧ ಬಂಡಾಯವೆದ್ದು ಹೋಗಿರುವ ಶಾಸಕರಲ್ಲಿ ಕೆಲವರು ಪುನಃ ಪಕ್ಷಕ್ಕೆ ಮರಳಲು ಉತ್ಸುಕರಾಗಿದ್ದಾರೆ. ಆದರೆ ಅವರನ್ನು ಹರಿಯಾಣದಲ್ಲಿ ಬಂದಿಯಾಗಿಡಲಾಗಿದೆ’ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.