<p><strong>ನಾಸಿಕ್</strong>: ‘ಹಿಂದುತ್ವ ಸಿದ್ಧಾಂತವನ್ನು ನಾನು ತ್ಯಜಿಸಿಲ್ಲ. ಆದರೆ, ಬಿಜೆಪಿ ಅನುಸರಿಸುತ್ತಿರುವ ಅಹಿತಕರವಾದ ಹಿಂದುತ್ವವು ಸ್ವೀಕಾರಾರ್ಹವಲ್ಲ ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಬುಧವಾರ ಹೇಳಿದರು. </p>.<p>ನಾಸಿಕ್ನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು ‘ಶಿವಸೇನಾ (ಯುಬಿಟಿ) ಹಿಂದುತ್ವವನ್ನು ತ್ಯಜಿಸಿದೆ ಎಂಬ ಸುಳ್ಳನ್ನು ಬಿಜೆಪಿ ಹರಡುತ್ತಿದೆ. ಮುಖ್ಯಮಂತ್ರಿಯಾಗಿ ಎಲ್ಲರನ್ನೂ ಸಮಾನವಾಗಿ ನೋಡಿದ ಕಾರಣ ಮುಸ್ಲಿಮರು ನಮ್ಮ ಪಕ್ಷವನ್ನು ಬೆಂಬಲಿಸಿದರು’ ಎಂದರು.</p>.<p>ಅಲ್ಲದೇ ‘ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರವು ಮುಂಬೈನಲ್ಲಿರುವ ರಾಜ ಭವನದ ಆವರಣವನ್ನು ಛತ್ರಪತಿ ಶಿವಾಜಿ ಮಹಾರಾಜರ ಸ್ಮಾರಕವನ್ನು ನಿರ್ಮಿಸಬೇಕು. ರಾಜ್ಯಪಾಲರನ್ನು ಬೇರೆಡೆ ಸ್ಥಳಾಂತರಿಸಬೇಕು’ ಎಂದು ಹೇಳಿದರು.</p>.<p>‘ಅವಿಭಜಿತ ಶಿವಸೇನೆ ಇಲ್ಲದಿದ್ದರೆ ಬಿಜೆಪಿಯು ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಹಂತ ತಲುಪುತ್ತಿರಲಿಲ್ಲ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಸಿಕ್</strong>: ‘ಹಿಂದುತ್ವ ಸಿದ್ಧಾಂತವನ್ನು ನಾನು ತ್ಯಜಿಸಿಲ್ಲ. ಆದರೆ, ಬಿಜೆಪಿ ಅನುಸರಿಸುತ್ತಿರುವ ಅಹಿತಕರವಾದ ಹಿಂದುತ್ವವು ಸ್ವೀಕಾರಾರ್ಹವಲ್ಲ ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಬುಧವಾರ ಹೇಳಿದರು. </p>.<p>ನಾಸಿಕ್ನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು ‘ಶಿವಸೇನಾ (ಯುಬಿಟಿ) ಹಿಂದುತ್ವವನ್ನು ತ್ಯಜಿಸಿದೆ ಎಂಬ ಸುಳ್ಳನ್ನು ಬಿಜೆಪಿ ಹರಡುತ್ತಿದೆ. ಮುಖ್ಯಮಂತ್ರಿಯಾಗಿ ಎಲ್ಲರನ್ನೂ ಸಮಾನವಾಗಿ ನೋಡಿದ ಕಾರಣ ಮುಸ್ಲಿಮರು ನಮ್ಮ ಪಕ್ಷವನ್ನು ಬೆಂಬಲಿಸಿದರು’ ಎಂದರು.</p>.<p>ಅಲ್ಲದೇ ‘ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರವು ಮುಂಬೈನಲ್ಲಿರುವ ರಾಜ ಭವನದ ಆವರಣವನ್ನು ಛತ್ರಪತಿ ಶಿವಾಜಿ ಮಹಾರಾಜರ ಸ್ಮಾರಕವನ್ನು ನಿರ್ಮಿಸಬೇಕು. ರಾಜ್ಯಪಾಲರನ್ನು ಬೇರೆಡೆ ಸ್ಥಳಾಂತರಿಸಬೇಕು’ ಎಂದು ಹೇಳಿದರು.</p>.<p>‘ಅವಿಭಜಿತ ಶಿವಸೇನೆ ಇಲ್ಲದಿದ್ದರೆ ಬಿಜೆಪಿಯು ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಹಂತ ತಲುಪುತ್ತಿರಲಿಲ್ಲ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>