‘ರಾಜ್ಯದಲ್ಲಿ ನಾನು ಪಕ್ಷದ ಮುಖ್ಯಸ್ಥ. ನಾನು ಏನು ಹೇಳಿದ್ದೇನೆ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಶ್ರೀಧರನ್ ಅವರ ನಾಯಕತ್ವವನ್ನು ರಾಜ್ಯದ ಜನರು ಬಯಸುತ್ತಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂಬುದನ್ನು ಬಿಟ್ಟು, ಬೇರೇನನ್ನೂ ನಾನು ಗುರುವಾರ ಹೇಳಿರಲಿಲ್ಲ. ಮಾಧ್ಯಮಗಳು ನನ್ನ ಮಾತನ್ನು ತಪ್ಪಾಗಿ ಅರ್ಥೈಸಿವೆ. ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆಯ ವಿಚಾರವನ್ನು ಪಕ್ಷದ ಕೇಂದ್ರ ನಾಯಕತ್ವ ಮಾತ್ರ ನಿರ್ಧರಿಸಬಲ್ಲದು’ ಎಂದು ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡುತ್ತಾ ಹೇಳಿದ್ದಾರೆ.