<p><strong>ನವದೆಹಲಿ</strong>: 2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಟೆಲಿಕಾಂ ಸಚಿವ ಎ. ರಾಜಾ ಮತ್ತು ಇತರೆ 16 ಮಂದಿಯ ಖುಲಾಸೆ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಅಂಗೀಕರಿಸಿದೆ.</p><p>ವಿಚಾರಣಾ ನ್ಯಾಯಾಲಯದ ತೀರ್ಪಿನಲ್ಲಿ ಕೆಲವು ವೈರುಧ್ಯಗಳಿದ್ದು, ಗಾಢ ಪರಿಶೀಲನೆಯ ಅಗತ್ಯವಿದೆ ಎಂದು ಸಿಬಿಐ ಅರ್ಜಿಗೆ ಪ್ರತಿಕ್ರಿಯೆಯಾಗಿ ದೆಹಲಿ ಹೈಕೋರ್ಟ್ ಹೇಳಿದೆ. ಸಿಬಿಐ ವಾದಕ್ಕೆ ಅರ್ಹ ಅಂಶಗಳನ್ನು ಎತ್ತಿಹಿಡಿದಿದೆ ಎಂದು ಕೋರ್ಟ್ ಹೇಳಿದೆ.</p><p>'ನ್ಯಾಯಾಲಯವು ಲಭ್ಯವಿರುವ ದಾಖಲೆಗಳು, ಸಾಕ್ಷಿಗಳ ಹೇಳಿಕೆ, ಎರಡೂ ಪಕ್ಷಗಳ ಸಲ್ಲಿಕೆಗಳ ಆಧಾರದ ಮೇಲೆ ವಿಚಾರಣಾ ನ್ಯಾಯಾಲಯ ತೀರ್ಪು ನೀಡಿದೆ. ಇವುಗಳ ಬಗ್ಗೆ ಗಾಢ ಪರಿಶೀಲನೆ ಮತ್ತು ಸಾಕ್ಷ್ಯಗಳ ಪುನರ್ ವಿಮರ್ಶೆಯ ಅಗತ್ಯವಿದೆ ಎಂದು ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಹೇಳಿದ್ದಾರೆ.</p> <p>‘ತೀರ್ಪಿನ ವೈರುಧ್ಯಗಳನ್ನು ಆಪಾದಿತರ ಪರ ವಾದ ಮಂಡನೆ ವೇಳೆ ಸೃಷ್ಟಿಸಿದಂತೆ ತೋರುತ್ತಿದೆ. ಇವುಗಳ ನೇರ ಪರಿಶೀಲನೆ ಅಗತ್ಯವಿದೆ’ಎಂದು ನ್ಯಾಯಾಲಯ ಹೇಳಿದೆ.</p><p>ಪ್ರಕರಣದ ಆರೋಪಿಗಳ ಖುಲಾಸೆ ಪ್ರಶ್ನಿಸಿ 2018ರ ಮಾರ್ಚ್ ತಿಂಗಳಲ್ಲೇ ಸಿಬಿಐ ಅರ್ಜಿ ಸಲ್ಲಿಸಿತ್ತು. ಈ ಹಿಂದೆ ಐವರು ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆ ನಡೆಸಿದ್ದರು. ಮಾರ್ಚ್ 14ರಂದು ನ್ಯಾಯಮೂರ್ತಿ ಶರ್ಮಾ ಪ್ರಕರಣದ ತೀರ್ಪನ್ನು ಕಾಯ್ದಿರಿಸಿದ್ದರು.</p><p>2ಜಿ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಮತ್ತು ಇ.ಡಿ ಪ್ರಕರಣಗಳಲ್ಲಿ ಆರೋಪಿಗಳಾದ ರಾಜಾ, ಡಿಎಂಕೆ ಸಂಸದೆ ಕನಿಮೋಳಿ ಮತ್ತು ಇತರರನ್ನು 2017 ಡಿಸೆಂಬರ್ 21ರಂದು ಖುಲಾಸೆ ಮಾಡಿ ವಿಶೇಷ ನ್ಯಾಯಾಲಯ ತೀರ್ಪಿತ್ತಿತ್ತು.</p><p>ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ 2018ರ ಮಾರ್ಚ್ 20ರಂದು ಸಿಬಿಐ, ದೆಹಲಿ ಹೈಕೋರ್ಟ್ ಮೊರೆಹೋಗಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಟೆಲಿಕಾಂ ಸಚಿವ ಎ. ರಾಜಾ ಮತ್ತು ಇತರೆ 16 ಮಂದಿಯ ಖುಲಾಸೆ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಅಂಗೀಕರಿಸಿದೆ.</p><p>ವಿಚಾರಣಾ ನ್ಯಾಯಾಲಯದ ತೀರ್ಪಿನಲ್ಲಿ ಕೆಲವು ವೈರುಧ್ಯಗಳಿದ್ದು, ಗಾಢ ಪರಿಶೀಲನೆಯ ಅಗತ್ಯವಿದೆ ಎಂದು ಸಿಬಿಐ ಅರ್ಜಿಗೆ ಪ್ರತಿಕ್ರಿಯೆಯಾಗಿ ದೆಹಲಿ ಹೈಕೋರ್ಟ್ ಹೇಳಿದೆ. ಸಿಬಿಐ ವಾದಕ್ಕೆ ಅರ್ಹ ಅಂಶಗಳನ್ನು ಎತ್ತಿಹಿಡಿದಿದೆ ಎಂದು ಕೋರ್ಟ್ ಹೇಳಿದೆ.</p><p>'ನ್ಯಾಯಾಲಯವು ಲಭ್ಯವಿರುವ ದಾಖಲೆಗಳು, ಸಾಕ್ಷಿಗಳ ಹೇಳಿಕೆ, ಎರಡೂ ಪಕ್ಷಗಳ ಸಲ್ಲಿಕೆಗಳ ಆಧಾರದ ಮೇಲೆ ವಿಚಾರಣಾ ನ್ಯಾಯಾಲಯ ತೀರ್ಪು ನೀಡಿದೆ. ಇವುಗಳ ಬಗ್ಗೆ ಗಾಢ ಪರಿಶೀಲನೆ ಮತ್ತು ಸಾಕ್ಷ್ಯಗಳ ಪುನರ್ ವಿಮರ್ಶೆಯ ಅಗತ್ಯವಿದೆ ಎಂದು ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಹೇಳಿದ್ದಾರೆ.</p> <p>‘ತೀರ್ಪಿನ ವೈರುಧ್ಯಗಳನ್ನು ಆಪಾದಿತರ ಪರ ವಾದ ಮಂಡನೆ ವೇಳೆ ಸೃಷ್ಟಿಸಿದಂತೆ ತೋರುತ್ತಿದೆ. ಇವುಗಳ ನೇರ ಪರಿಶೀಲನೆ ಅಗತ್ಯವಿದೆ’ಎಂದು ನ್ಯಾಯಾಲಯ ಹೇಳಿದೆ.</p><p>ಪ್ರಕರಣದ ಆರೋಪಿಗಳ ಖುಲಾಸೆ ಪ್ರಶ್ನಿಸಿ 2018ರ ಮಾರ್ಚ್ ತಿಂಗಳಲ್ಲೇ ಸಿಬಿಐ ಅರ್ಜಿ ಸಲ್ಲಿಸಿತ್ತು. ಈ ಹಿಂದೆ ಐವರು ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆ ನಡೆಸಿದ್ದರು. ಮಾರ್ಚ್ 14ರಂದು ನ್ಯಾಯಮೂರ್ತಿ ಶರ್ಮಾ ಪ್ರಕರಣದ ತೀರ್ಪನ್ನು ಕಾಯ್ದಿರಿಸಿದ್ದರು.</p><p>2ಜಿ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಮತ್ತು ಇ.ಡಿ ಪ್ರಕರಣಗಳಲ್ಲಿ ಆರೋಪಿಗಳಾದ ರಾಜಾ, ಡಿಎಂಕೆ ಸಂಸದೆ ಕನಿಮೋಳಿ ಮತ್ತು ಇತರರನ್ನು 2017 ಡಿಸೆಂಬರ್ 21ರಂದು ಖುಲಾಸೆ ಮಾಡಿ ವಿಶೇಷ ನ್ಯಾಯಾಲಯ ತೀರ್ಪಿತ್ತಿತ್ತು.</p><p>ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ 2018ರ ಮಾರ್ಚ್ 20ರಂದು ಸಿಬಿಐ, ದೆಹಲಿ ಹೈಕೋರ್ಟ್ ಮೊರೆಹೋಗಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>