ಇದೇ ವಿಷಯದಲ್ಲಿ ಅರ್ಜಿದಾರರು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಿರುವ ಅಹವಾಲು ಇನ್ನೂ ಇತ್ಯರ್ಥವಾಗಿಲ್ಲ ಎಂಬುದನ್ನೂ ಪರಿಗಣನೆಗೆ ತೆಗೆದುಕೊಂಡ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಪಿ.ಎಸ್. ಅರೋರಾ ಅವರಿದ್ದ ಪೀಠವು, ‘ಅರ್ಜಿದಾರರ ಮನವಿಗೆ ಸಂಬಂಧಿಸಿದಂತೆ ಕಾನೂನಿನ ಅನುಸಾರವಾಗಿ ಎಂಟು ವಾರಗಳಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸಬೇಕು’ ಎಂದು ಆದೇಶ ನೀಡಿ, ಅರ್ಜಿಯನ್ನು ವಿಲೇವಾರಿ ಮಾಡಿತು.