ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿ ಸಂಹಿತೆ ಉಲ್ಲಂಘನೆ: ನ.17ರೊಳಗೆ ವಿಚಾರಣೆಗೆ ಹಾಜರಾಗಲು ನಟಿ ಜಯಪ್ರದಾಗೆ ಸೂಚನೆ

Published 9 ನವೆಂಬರ್ 2023, 14:05 IST
Last Updated 9 ನವೆಂಬರ್ 2023, 14:05 IST
ಅಕ್ಷರ ಗಾತ್ರ

ರಾಮ್‌ಪುರ: 2019ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದೆ ಜಯಪ್ರದಾ ಅವರಿಗೆ ಉತ್ತರ ಪ್ರದೇಶ ಜಿಲ್ಲಾ ನ್ಯಾಯಾಲಯ ಇದೇ 17ರಂದು ವಿಚಾರಣೆಗೆ ಹಾಜರಾಗುವಂತೆ ಹೇಳಿದೆ. 

ಜಯಪ್ರದಾ ಅವರಿಗೆ ಜಾಮೀನು ರಹಿತ ವಾರೆಂಟ್‌ ನೀಡಿದ್ದರೂ, ನವೆಂಬರ್‌ 8ರಂದು ವಿಚಾರಣೆಗೆ ಹಾಜರಾಗಿರಲಿಲ್ಲ ಎಂದು ತನಿಖಾಧಿಕಾರಿ ಅಮರನಾಥ್ ತಿವಾರಿ ತಿಳಿಸಿದ್ದಾರೆ.

2019ರ ಚುನಾವಣಾ ಪ್ರಚಾರದ ವೇಳೆ ಜಯಪ್ರದಾ ಅವರ ವಿರುದ್ಧ ಸ್ವರ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಈವರೆಗೂ ಪ್ರಕರಣ ಇತ್ಯರ್ಥವಾಗದೆ ರಾಮ್‌ಪುರ ಎಂಪಿ–ಎಲ್‌ಎ ನ್ಯಾಯಾಲಯದಲ್ಲಿ ಬಾಕಿ ಉಳಿದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT