ಕೋಲ್ಕತ್ತಾ: ಚುನಾವಣೋತ್ತರ ಹಿಂಸಾಚಾರದಲ್ಲಿ ನಡೆದಿರುವ ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳ ತನಿಖೆ ನಡೆಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ನೀಡಿದ್ದ ನಿರ್ದೇಶನವನ್ನು ಹಿಂಪಡೆಯುವಂತೆ ಕೋರಿ ಸಲ್ಲಿಸಿದ್ದ ಪಶ್ಚಿಮ ಬಂಗಾಳ ಸರ್ಕಾರದ ಮನವಿಯನ್ನು ಕೋಲ್ಕತ್ತಾ ಹೈ ಕೋರ್ಟ್ ಸೋಮವಾರ ತಿರಸ್ಕರಿಸಿದೆ