<p><strong>ಚೆನ್ನೈ:</strong> ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಅವರನ್ನು ಉದ್ದೇಶಿಸಿ ಆಡಿದ ಮಾತುಗಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣದಲ್ಲಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ ನೀಡಲಾಗಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನಿನ ಅವಧಿಯನ್ನು ಏಪ್ರಿಲ್ 17ರವರೆಗೆ ಮದ್ರಾಸ್ ಹೈಕೋರ್ಟ್ ವಿಸ್ತರಿಸಿದೆ. </p>.<p>ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಸುಂದರ್ ಮೋಹನ್ ಅವರು, ‘ಕಾಮ್ರಾ ಅವರು ಸಂಬಂಧಪಟ್ಟ ಕೋರ್ಟ್ ಮೊರೆ ಹೋಗಲು ಕ್ರಮ ಕೈಗೊಳ್ಳಬಹುದು’ ಎಂದು ತಿಳಿಸಿದರು.</p> .<p>‘ಕಾಮ್ರಾ ಅವರ ವಿರುದ್ಧ ಮತ್ತೆ ಮೂರು ಎಫ್ಐಆರ್ಗಳು ದಾಖಲಾಗಿವೆ. ಮುಂಬೈನಲ್ಲಿರುವ ಕಾಮ್ರಾ ಅವರ ಪೋಷಕರ ನಿವಾಸಕ್ಕೆ ಅಧಿಕಾರಿಗಳೂ ಭೇಟಿ ನೀಡಿ, ವಯಸ್ಸಾದ ಪೋಷಕರಿಗೆ ತೊಂದರೆ ನೀಡಿದ್ದಾರೆ. ಈ ಮೂಲಕ ಕಾಮ್ರಾ ಅವರ ಮೇಲಿನ ದ್ವೇಷ ಮುಂದುವರಿದಿದೆ’ ಎಂದು ಕಾಮ್ರಾ ಪರ ವಕೀಲ ವಿ.ಸುರೇಶ್ ನ್ಯಾಯಾಲಯಕ್ಕೆ ತಿಳಿಸಿದರು.</p>. <p>ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಮೂರ್ತಿಗಳು ಏಪ್ರಿಲ್ 17ಕ್ಕೆ ಮುಂದೂಡಿದ್ದಾರೆ.</p>.<p>ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರು ನೀಡಿದ ದೂರಿನ ಮೇರೆಗೆ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ಕಾಮ್ರಾ ವಿರುದ್ಧ ಪ್ರಕರಣ ದಾಖಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕಾಮ್ರಾಗೆ ಎರಡು ಸಲ ಸಮನ್ಸ್ ನೀಡಿದ್ದರು.</p>.ಏಕನಾಥ ಶಿಂದೆ ಬಗ್ಗೆ ಅವಹೇಳನ: ಕುನಾಲ್ ಕಾಮ್ರಾ ವಿರುದ್ಧ 3 ಹೊಸ ಪ್ರಕರಣ ದಾಖಲು.<p>‘ನಾನು 2021ರಲ್ಲೇ ಮುಂಬೈನಿಂದ ತಮಿಳುನಾಡಿಗೆ ವಾಸ ಬದಲಿಸಿದ್ದು, ಅಂದಿನಿಂದ ಈ ರಾಜ್ಯದ ನಿವಾಸಿ ಆಗಿದ್ದೇನೆ. ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗುವ ಭೀತಿಯಲ್ಲಿದ್ದೇನೆ’ ಎಂದು ಹೇಳಿ ಕಾಮ್ರಾ ಅವರು ಹೈಕೋರ್ಟ್ ಮೊರೆ ಹೋಗಿದ್ದರು. </p>.<p>ಮದ್ರಾಸ್ ಹೈಕೋರ್ಟ್ ಶುಕ್ರವಾರ(ಮಾರ್ಚ್ 28) ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.</p>.ಆಕ್ಷೇಪಾರ್ಹ ಹೇಳಿಕೆ | FIR ರದ್ದುಗೊಳಿಸಲು ಕೋರಿ ಹೈಕೋರ್ಟ್ ಮೊರೆ ಹೋದ ಕಾಮ್ರಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಅವರನ್ನು ಉದ್ದೇಶಿಸಿ ಆಡಿದ ಮಾತುಗಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣದಲ್ಲಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ ನೀಡಲಾಗಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನಿನ ಅವಧಿಯನ್ನು ಏಪ್ರಿಲ್ 17ರವರೆಗೆ ಮದ್ರಾಸ್ ಹೈಕೋರ್ಟ್ ವಿಸ್ತರಿಸಿದೆ. </p>.<p>ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಸುಂದರ್ ಮೋಹನ್ ಅವರು, ‘ಕಾಮ್ರಾ ಅವರು ಸಂಬಂಧಪಟ್ಟ ಕೋರ್ಟ್ ಮೊರೆ ಹೋಗಲು ಕ್ರಮ ಕೈಗೊಳ್ಳಬಹುದು’ ಎಂದು ತಿಳಿಸಿದರು.</p> .<p>‘ಕಾಮ್ರಾ ಅವರ ವಿರುದ್ಧ ಮತ್ತೆ ಮೂರು ಎಫ್ಐಆರ್ಗಳು ದಾಖಲಾಗಿವೆ. ಮುಂಬೈನಲ್ಲಿರುವ ಕಾಮ್ರಾ ಅವರ ಪೋಷಕರ ನಿವಾಸಕ್ಕೆ ಅಧಿಕಾರಿಗಳೂ ಭೇಟಿ ನೀಡಿ, ವಯಸ್ಸಾದ ಪೋಷಕರಿಗೆ ತೊಂದರೆ ನೀಡಿದ್ದಾರೆ. ಈ ಮೂಲಕ ಕಾಮ್ರಾ ಅವರ ಮೇಲಿನ ದ್ವೇಷ ಮುಂದುವರಿದಿದೆ’ ಎಂದು ಕಾಮ್ರಾ ಪರ ವಕೀಲ ವಿ.ಸುರೇಶ್ ನ್ಯಾಯಾಲಯಕ್ಕೆ ತಿಳಿಸಿದರು.</p>. <p>ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಮೂರ್ತಿಗಳು ಏಪ್ರಿಲ್ 17ಕ್ಕೆ ಮುಂದೂಡಿದ್ದಾರೆ.</p>.<p>ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರು ನೀಡಿದ ದೂರಿನ ಮೇರೆಗೆ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ಕಾಮ್ರಾ ವಿರುದ್ಧ ಪ್ರಕರಣ ದಾಖಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕಾಮ್ರಾಗೆ ಎರಡು ಸಲ ಸಮನ್ಸ್ ನೀಡಿದ್ದರು.</p>.ಏಕನಾಥ ಶಿಂದೆ ಬಗ್ಗೆ ಅವಹೇಳನ: ಕುನಾಲ್ ಕಾಮ್ರಾ ವಿರುದ್ಧ 3 ಹೊಸ ಪ್ರಕರಣ ದಾಖಲು.<p>‘ನಾನು 2021ರಲ್ಲೇ ಮುಂಬೈನಿಂದ ತಮಿಳುನಾಡಿಗೆ ವಾಸ ಬದಲಿಸಿದ್ದು, ಅಂದಿನಿಂದ ಈ ರಾಜ್ಯದ ನಿವಾಸಿ ಆಗಿದ್ದೇನೆ. ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗುವ ಭೀತಿಯಲ್ಲಿದ್ದೇನೆ’ ಎಂದು ಹೇಳಿ ಕಾಮ್ರಾ ಅವರು ಹೈಕೋರ್ಟ್ ಮೊರೆ ಹೋಗಿದ್ದರು. </p>.<p>ಮದ್ರಾಸ್ ಹೈಕೋರ್ಟ್ ಶುಕ್ರವಾರ(ಮಾರ್ಚ್ 28) ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.</p>.ಆಕ್ಷೇಪಾರ್ಹ ಹೇಳಿಕೆ | FIR ರದ್ದುಗೊಳಿಸಲು ಕೋರಿ ಹೈಕೋರ್ಟ್ ಮೊರೆ ಹೋದ ಕಾಮ್ರಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>