<p><strong>ಮುಂಬೈ:</strong> ಅಂಗವಿಕಲ ಮಕ್ಕಳ ಆಶ್ರಯ ಕೇಂದ್ರವೊಂದರಲ್ಲಿ ಮದ್ಯಪಾನ ತಂದು ಹೊಸ ವರ್ಷದ ಪಾರ್ಟಿ ನಡೆಸಿದ್ದ 13 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಶ್ರಯ ಕೇಂದ್ರದ ಅಧಿಕಾರಿಗಳ ವಿರುದ್ಧ ಬಾಂಬೆ ಹೈಕೋರ್ಟ್ ಸೋಮವಾರ ತನಿಖೆಗೆ ಆದೇಶಿಸಿದೆ.</p>.<p>ನ್ಯಾಯಮೂರ್ತಿ ಅಲೋಕ್ ಅರಾಧೆ ಹಾಗೂ ನ್ಯಾಯಮೂರ್ತಿ ಸಂದೀಪ್ ಮಾರ್ನೆ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ನೀಡಿದ್ದು, ಘಟನೆ ನಡೆದು 13 ವರ್ಷವಾದರೂ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದೆ. </p>.<p>ಮಾನಖರ್ಡ್ ಉಪನಗರದಲ್ಲಿರುವ ಸರ್ಕಾರಿ ಅನುದಾನಿತ ಅಂಗವಿಕಲ ಮಕ್ಕಳ ಆಶ್ರಯ ಕೇಂದ್ರದಲ್ಲಿ 2012ರ ಡಿಸೆಂಬರ್ 31ರಂದು ಮಹಿಳಾ ಡಾನ್ಸರ್ಗಳನ್ನು ಕರೆಸಿ, ಮದ್ಯಪಾನ ಸೇವನೆ ಮಾಡಿ, ಪಾರ್ಟಿ ನಡೆಸಿದ್ದ ಆರೋಪ ಕೇಳಿಬಂದಿತ್ತು.</p>.<p class="title">2014ರಲ್ಲಿ ಸಾಮಾಜಿಕ ಕಾರ್ಯಕರ್ತರಾದ ಸಂಗೀತಾ ಪುನೇಕರ್ ಅವರು ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಿಸಿದ್ದರು. ಆ ಅರ್ಜಿಯನ್ನು ನ್ಯಾಯಪೀಠ ಇದೀಗ ವಿಚಾರಣೆ ನಡೆಸಿದೆ. </p>.<p class="title">ಪ್ರಕರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ, 6 ವಾರಗಳ ಒಳಗೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಹಾಗೂ 3 ತಿಂಗಳ ಒಳಗೆ ನ್ಯಾಯಾಲಯಕ್ಕೂ ಪ್ರಕರಣದ ಅನುಸರಣಾ ವರದಿ ಸಲ್ಲಿಸುವಂತೆ ಅಂಗವಿಕಲರ ಇಲಾಖೆಯ ಆಯುಕ್ತರಿಗೆ ನ್ಯಾಯಪೀಠ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಅಂಗವಿಕಲ ಮಕ್ಕಳ ಆಶ್ರಯ ಕೇಂದ್ರವೊಂದರಲ್ಲಿ ಮದ್ಯಪಾನ ತಂದು ಹೊಸ ವರ್ಷದ ಪಾರ್ಟಿ ನಡೆಸಿದ್ದ 13 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಶ್ರಯ ಕೇಂದ್ರದ ಅಧಿಕಾರಿಗಳ ವಿರುದ್ಧ ಬಾಂಬೆ ಹೈಕೋರ್ಟ್ ಸೋಮವಾರ ತನಿಖೆಗೆ ಆದೇಶಿಸಿದೆ.</p>.<p>ನ್ಯಾಯಮೂರ್ತಿ ಅಲೋಕ್ ಅರಾಧೆ ಹಾಗೂ ನ್ಯಾಯಮೂರ್ತಿ ಸಂದೀಪ್ ಮಾರ್ನೆ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ನೀಡಿದ್ದು, ಘಟನೆ ನಡೆದು 13 ವರ್ಷವಾದರೂ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದೆ. </p>.<p>ಮಾನಖರ್ಡ್ ಉಪನಗರದಲ್ಲಿರುವ ಸರ್ಕಾರಿ ಅನುದಾನಿತ ಅಂಗವಿಕಲ ಮಕ್ಕಳ ಆಶ್ರಯ ಕೇಂದ್ರದಲ್ಲಿ 2012ರ ಡಿಸೆಂಬರ್ 31ರಂದು ಮಹಿಳಾ ಡಾನ್ಸರ್ಗಳನ್ನು ಕರೆಸಿ, ಮದ್ಯಪಾನ ಸೇವನೆ ಮಾಡಿ, ಪಾರ್ಟಿ ನಡೆಸಿದ್ದ ಆರೋಪ ಕೇಳಿಬಂದಿತ್ತು.</p>.<p class="title">2014ರಲ್ಲಿ ಸಾಮಾಜಿಕ ಕಾರ್ಯಕರ್ತರಾದ ಸಂಗೀತಾ ಪುನೇಕರ್ ಅವರು ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಿಸಿದ್ದರು. ಆ ಅರ್ಜಿಯನ್ನು ನ್ಯಾಯಪೀಠ ಇದೀಗ ವಿಚಾರಣೆ ನಡೆಸಿದೆ. </p>.<p class="title">ಪ್ರಕರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ, 6 ವಾರಗಳ ಒಳಗೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಹಾಗೂ 3 ತಿಂಗಳ ಒಳಗೆ ನ್ಯಾಯಾಲಯಕ್ಕೂ ಪ್ರಕರಣದ ಅನುಸರಣಾ ವರದಿ ಸಲ್ಲಿಸುವಂತೆ ಅಂಗವಿಕಲರ ಇಲಾಖೆಯ ಆಯುಕ್ತರಿಗೆ ನ್ಯಾಯಪೀಠ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>