<p><strong>ಮುಂಬೈ:</strong> ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿಸಲಾದ ಐವರು ಹೋರಾಟಗಾರರು ಮತ್ತು ಸಾಕ್ಷ್ಯಾಧಾರಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಹಾರಾಷ್ಟ್ರ ಪೊಲೀಸರನ್ನು ಬಾಂಬೆ ಹೈಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ.</p>.<p>ಹೋರಾಟಗಾರರ ಬಂಧನ ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿರುವಾಗ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವ ಅಗತ್ಯವೇನಿತ್ತು ಎಂದು ಹೈಕೋರ್ಟ್ ವಿಭಾಗೀಯ ಪೀಠವು ಪೊಲೀಸರಿಗೆ ಛೀಮಾರಿ ಹಾಕಿದೆ.</p>.<p>ಬಂಧಿತ ಹೋರಾಟಗಾರರಿಗೆ ನಕ್ಸಲರ ನಂಟು ಇತ್ತು ಎನ್ನಲು ತಮ್ಮ ಬಳಿ ಬಲವಾದ ಸಾಕ್ಷಾಧಾರಗಳಿವೆ ಎಂದು ಮಹಾರಾಷ್ಟ್ರ ಪೊಲೀಸ್ ಅಧಿಕಾರಿಗಳು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.</p>.<p>ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಂದರ್ಭದಲ್ಲಿ ಪೊಲೀಸರು ಸುದ್ದಿಗೋಷ್ಠಿಯಲ್ಲಿ ರಹಸ್ಯ ಮಾಹಿತಿಗಳನ್ನು ಬಹಿರಂಗಗೊಳಿಸಿದ್ದು ತಪ್ಪಲ್ಲವೇ ಎಂದು ಹೈಕೋರ್ಟ್ ಪ್ರಶ್ನಿಸಿದೆ.</p>.<p>ಎಲ್ಗಾರ್ ಪರಿಷತ್–ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ತನಿಖೆಯನ್ನು ಪುಣೆಯ ಪೊಲೀಸರಿಂದ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸುವಂತೆ ಕೋರಿ ಪುಣೆಯ ಉದ್ಯಮಿ ಸತೀಶ್ ಸುರ್ಗಿವ್ ಗಾಯಕವಾಡ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p>.<p>ಪುನೆಯ ಪೊಲೀಸರು ಪ್ರಕರಣದ ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಪುಣೆ ಪೊಲೀಸರ ತನಿಖೆಗೆ ತಡೆ ನೀಡುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.</p>.<p>ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ವಿಭಾಗೀಯ ಪೀಠವು ವಿಚಾರಣೆಯನ್ನು ಸೆ.7ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿಸಲಾದ ಐವರು ಹೋರಾಟಗಾರರು ಮತ್ತು ಸಾಕ್ಷ್ಯಾಧಾರಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಹಾರಾಷ್ಟ್ರ ಪೊಲೀಸರನ್ನು ಬಾಂಬೆ ಹೈಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ.</p>.<p>ಹೋರಾಟಗಾರರ ಬಂಧನ ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿರುವಾಗ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವ ಅಗತ್ಯವೇನಿತ್ತು ಎಂದು ಹೈಕೋರ್ಟ್ ವಿಭಾಗೀಯ ಪೀಠವು ಪೊಲೀಸರಿಗೆ ಛೀಮಾರಿ ಹಾಕಿದೆ.</p>.<p>ಬಂಧಿತ ಹೋರಾಟಗಾರರಿಗೆ ನಕ್ಸಲರ ನಂಟು ಇತ್ತು ಎನ್ನಲು ತಮ್ಮ ಬಳಿ ಬಲವಾದ ಸಾಕ್ಷಾಧಾರಗಳಿವೆ ಎಂದು ಮಹಾರಾಷ್ಟ್ರ ಪೊಲೀಸ್ ಅಧಿಕಾರಿಗಳು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.</p>.<p>ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಂದರ್ಭದಲ್ಲಿ ಪೊಲೀಸರು ಸುದ್ದಿಗೋಷ್ಠಿಯಲ್ಲಿ ರಹಸ್ಯ ಮಾಹಿತಿಗಳನ್ನು ಬಹಿರಂಗಗೊಳಿಸಿದ್ದು ತಪ್ಪಲ್ಲವೇ ಎಂದು ಹೈಕೋರ್ಟ್ ಪ್ರಶ್ನಿಸಿದೆ.</p>.<p>ಎಲ್ಗಾರ್ ಪರಿಷತ್–ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ತನಿಖೆಯನ್ನು ಪುಣೆಯ ಪೊಲೀಸರಿಂದ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸುವಂತೆ ಕೋರಿ ಪುಣೆಯ ಉದ್ಯಮಿ ಸತೀಶ್ ಸುರ್ಗಿವ್ ಗಾಯಕವಾಡ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p>.<p>ಪುನೆಯ ಪೊಲೀಸರು ಪ್ರಕರಣದ ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಪುಣೆ ಪೊಲೀಸರ ತನಿಖೆಗೆ ತಡೆ ನೀಡುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.</p>.<p>ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ವಿಭಾಗೀಯ ಪೀಠವು ವಿಚಾರಣೆಯನ್ನು ಸೆ.7ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>