<p class="title"><strong>ಮುಂಬೈ: </strong>ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ವಿರುದ್ಧ ಅತ್ಯಾಚಾರ ಆರೋಪದಡಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಸೋಮವಾರ ಹೇಳಿದೆ.</p>.<p class="title">ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ, ಮನೀಷ್ ಪಿತಾಲೆ ಅವರನ್ನೊಳಗೊಂಡ ಪೀಠವು, ‘ಫೆ. 18ರಂದು ಮಹಿಳೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಲಿದೆ’ ಎಂದು ತಿಳಿಸಿದೆ.</p>.<p class="title">ಹೇಮಂತ್ ಸೊರೇನ್ ಅವರು ಮುಂಬೈನ ಹೋಟೆಲೊಂದರಲ್ಲಿ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ 2013ರಲ್ಲಿ ಅರ್ಜಿದಾರ ಮಹಿಳೆ ಮೆಟ್ರೊಪಾಲಿಟನ್ ನ್ಯಾಯಾಲಯದ ಮೊರೆ ಹೊಕ್ಕಿದ್ದರು. ಅದೇ ವರ್ಷ ಬಾಂದ್ರಾ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಗೆ ಬರುವ ಮುನ್ನವೇ ಆ ಮಹಿಳೆ ಅರ್ಜಿ ವಾಪಸ್ ಪಡೆಯಲು ಮನವಿ ಸಲ್ಲಿಸಿದ್ದರು. ಆಗ ಕೋರ್ಟ್ ಅರ್ಜಿ ಹಿಂಪಡೆಯಲು ಅನುಮತಿ ನೀಡಿತ್ತು.</p>.<p class="title">2020ರ ಆಗಸ್ಟ್ನಲ್ಲಿ ಅರ್ಜಿದಾರ ಮಹಿಳೆಗೆ ಅಪಘಾತವಾಗಿತ್ತು. ಈ ಅಪಘಾತದ ಹಿಂದೆ ಹೇಮಂತ್ ಸೊರೇನ್ ಕೈವಾಡವಿರಬಹುದೆಂದು ಶಂಕಿಸಿ ಮಹಿಳೆ ಹೇಮಂತ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಬಾಂಬೆ ಹೈಕೋರ್ಟ್ನಲ್ಲಿ ಪ್ರಕರಣವಿರುವಾಗಲೇ ಮಹಿಳೆ ತನ್ನ ವಕೀಲರನ್ನು ಬದಲಾಯಿಸಲು ಕೋರಿದ್ದರು.</p>.<p class="title">ಹೊಸ ವಕೀಲರ ಮೂಲಕ ಅತ್ಯಾಚಾರ ಆರೋಪ ಹಿಂಪಡೆಯಲು ಮಹಿಳೆ ಮನವಿ ಸಲ್ಲಿಸಿದ್ದರು. ಆದರೆ, ಅರ್ಜಿ ಹಿಂಪಡೆಯಲು ಅನುಮತಿ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಈ ನಡುವೆ ಅರ್ಜಿ ಹಿಂಪಡೆಯಬಾರದು ಎಂದು ಕೋರಿ ನ್ಯಾಯಾಲಯಕ್ಕೆ ಪತ್ರಕರ್ತ ಸುನೀಲ್ ಕುಮಾರ್ ತಿವಾರಿ ಹಾಗೂ ಸ್ತ್ರೀ ರೋಷನಿ ಟ್ರಸ್ಟ್ ಅರ್ಜಿ ಸಲ್ಲಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ: </strong>ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ವಿರುದ್ಧ ಅತ್ಯಾಚಾರ ಆರೋಪದಡಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಸೋಮವಾರ ಹೇಳಿದೆ.</p>.<p class="title">ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ, ಮನೀಷ್ ಪಿತಾಲೆ ಅವರನ್ನೊಳಗೊಂಡ ಪೀಠವು, ‘ಫೆ. 18ರಂದು ಮಹಿಳೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಲಿದೆ’ ಎಂದು ತಿಳಿಸಿದೆ.</p>.<p class="title">ಹೇಮಂತ್ ಸೊರೇನ್ ಅವರು ಮುಂಬೈನ ಹೋಟೆಲೊಂದರಲ್ಲಿ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ 2013ರಲ್ಲಿ ಅರ್ಜಿದಾರ ಮಹಿಳೆ ಮೆಟ್ರೊಪಾಲಿಟನ್ ನ್ಯಾಯಾಲಯದ ಮೊರೆ ಹೊಕ್ಕಿದ್ದರು. ಅದೇ ವರ್ಷ ಬಾಂದ್ರಾ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಗೆ ಬರುವ ಮುನ್ನವೇ ಆ ಮಹಿಳೆ ಅರ್ಜಿ ವಾಪಸ್ ಪಡೆಯಲು ಮನವಿ ಸಲ್ಲಿಸಿದ್ದರು. ಆಗ ಕೋರ್ಟ್ ಅರ್ಜಿ ಹಿಂಪಡೆಯಲು ಅನುಮತಿ ನೀಡಿತ್ತು.</p>.<p class="title">2020ರ ಆಗಸ್ಟ್ನಲ್ಲಿ ಅರ್ಜಿದಾರ ಮಹಿಳೆಗೆ ಅಪಘಾತವಾಗಿತ್ತು. ಈ ಅಪಘಾತದ ಹಿಂದೆ ಹೇಮಂತ್ ಸೊರೇನ್ ಕೈವಾಡವಿರಬಹುದೆಂದು ಶಂಕಿಸಿ ಮಹಿಳೆ ಹೇಮಂತ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಬಾಂಬೆ ಹೈಕೋರ್ಟ್ನಲ್ಲಿ ಪ್ರಕರಣವಿರುವಾಗಲೇ ಮಹಿಳೆ ತನ್ನ ವಕೀಲರನ್ನು ಬದಲಾಯಿಸಲು ಕೋರಿದ್ದರು.</p>.<p class="title">ಹೊಸ ವಕೀಲರ ಮೂಲಕ ಅತ್ಯಾಚಾರ ಆರೋಪ ಹಿಂಪಡೆಯಲು ಮಹಿಳೆ ಮನವಿ ಸಲ್ಲಿಸಿದ್ದರು. ಆದರೆ, ಅರ್ಜಿ ಹಿಂಪಡೆಯಲು ಅನುಮತಿ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಈ ನಡುವೆ ಅರ್ಜಿ ಹಿಂಪಡೆಯಬಾರದು ಎಂದು ಕೋರಿ ನ್ಯಾಯಾಲಯಕ್ಕೆ ಪತ್ರಕರ್ತ ಸುನೀಲ್ ಕುಮಾರ್ ತಿವಾರಿ ಹಾಗೂ ಸ್ತ್ರೀ ರೋಷನಿ ಟ್ರಸ್ಟ್ ಅರ್ಜಿ ಸಲ್ಲಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>