<p><strong>ಲಖನೌ</strong>: ‘ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಕೆಲ ಮಿತಿ ಇದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೆ ಭಾರತೀಯ ಸೇನೆ, ಯಾವುದೇ ವ್ಯಕ್ತಿ ವಿರುದ್ಧ ಮಾನಹಾನಿ ಹೇಳಿಕೆ ನೀಡಬಹುದು ಎಂಬ ಸ್ವಾತಂತ್ರ್ಯವಲ್ಲ’ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.</p>.<p>2022ರ ಭಾರತ್ ಜೊಡೋ ಯಾತ್ರೆಯ ಸಂದರ್ಭದಲ್ಲಿ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನೀಡಿದ್ದ ಸಮನ್ಸ್ ರದ್ದುಪಡಿಸಲು ಕೋರಿ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಪೀಠ ಇದೇ ವೇಳೆ ತಿರಸ್ಕರಿಸಿದೆ. </p>.<p>ಲಖನೌ ಪೀಠದ, ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರಿದ್ದ ಪೀಠ ಈ ಕುರಿತು ಮೇ 29ರಂದು ಆದೇಶ ನೀಡಿದೆ. ಭಾರತೀಯ ಸೇನೆ ವಿರುದ್ಧ ರಾಹುಲ್ಗಾಂಧಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬುದು ಮೇಲ್ನೊಟಕ್ಕೆ ಕಂಡುಬರುತ್ತಿದೆ ಎಂದು ಹೇಳಿತು. </p>.<p>ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿ ಕೆಳಹಂತದ ಕೋರ್ಟ್ ಫೆಬ್ರುವರಿ ತಿಂಗಳಲ್ಲಿ ನೀಡಿದ್ದ ಆದೇಶವನ್ನು ಪೀಠವು ಎತ್ತಿಹಿಡಿಯಿತು.</p>.<p>ಸಂವಿಧಾನದ ವಿಧಿ 19 (1)(ಎ) ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಲಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಅದರರ್ಥ ಯಾವುದೇ ವ್ಯಕ್ತಿ, ಸೇನೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಬಹುದು ಎಂಬುದಲ್ಲ ಎಂದು ನ್ಯಾಯಮೂರ್ತಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.</p>.<p>ಗಡಿ ರಸ್ತೆ ಸಂಘಟನೆಯ ನಿವೃತ್ತ ನಿರ್ದೇಶಕ (ಸೇನೆಯ ಕರ್ನಲ್ ಹುದ್ದೆಗೆ ಸಮಾನ) ಉದಯ್ ಶಂಕರ್ ಶ್ರೀವಾತ್ಸವ ಈ ಬಗ್ಗೆ ದೂರು ದಾಖಲಿಸಿದ್ದರು. ಅರುಣಾಚಲದಲ್ಲಿ ಭಾರತ –ಚೀನಾ ಸೇನೆ ನಡುವೆ ನಡೆದಿದ್ದ ಸಂಘರ್ಷ ಕುರಿತು ರಾಹುಲ್ ಗಾಂಧಿ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ‘ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಕೆಲ ಮಿತಿ ಇದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೆ ಭಾರತೀಯ ಸೇನೆ, ಯಾವುದೇ ವ್ಯಕ್ತಿ ವಿರುದ್ಧ ಮಾನಹಾನಿ ಹೇಳಿಕೆ ನೀಡಬಹುದು ಎಂಬ ಸ್ವಾತಂತ್ರ್ಯವಲ್ಲ’ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.</p>.<p>2022ರ ಭಾರತ್ ಜೊಡೋ ಯಾತ್ರೆಯ ಸಂದರ್ಭದಲ್ಲಿ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನೀಡಿದ್ದ ಸಮನ್ಸ್ ರದ್ದುಪಡಿಸಲು ಕೋರಿ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಪೀಠ ಇದೇ ವೇಳೆ ತಿರಸ್ಕರಿಸಿದೆ. </p>.<p>ಲಖನೌ ಪೀಠದ, ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರಿದ್ದ ಪೀಠ ಈ ಕುರಿತು ಮೇ 29ರಂದು ಆದೇಶ ನೀಡಿದೆ. ಭಾರತೀಯ ಸೇನೆ ವಿರುದ್ಧ ರಾಹುಲ್ಗಾಂಧಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬುದು ಮೇಲ್ನೊಟಕ್ಕೆ ಕಂಡುಬರುತ್ತಿದೆ ಎಂದು ಹೇಳಿತು. </p>.<p>ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿ ಕೆಳಹಂತದ ಕೋರ್ಟ್ ಫೆಬ್ರುವರಿ ತಿಂಗಳಲ್ಲಿ ನೀಡಿದ್ದ ಆದೇಶವನ್ನು ಪೀಠವು ಎತ್ತಿಹಿಡಿಯಿತು.</p>.<p>ಸಂವಿಧಾನದ ವಿಧಿ 19 (1)(ಎ) ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಲಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಅದರರ್ಥ ಯಾವುದೇ ವ್ಯಕ್ತಿ, ಸೇನೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಬಹುದು ಎಂಬುದಲ್ಲ ಎಂದು ನ್ಯಾಯಮೂರ್ತಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.</p>.<p>ಗಡಿ ರಸ್ತೆ ಸಂಘಟನೆಯ ನಿವೃತ್ತ ನಿರ್ದೇಶಕ (ಸೇನೆಯ ಕರ್ನಲ್ ಹುದ್ದೆಗೆ ಸಮಾನ) ಉದಯ್ ಶಂಕರ್ ಶ್ರೀವಾತ್ಸವ ಈ ಬಗ್ಗೆ ದೂರು ದಾಖಲಿಸಿದ್ದರು. ಅರುಣಾಚಲದಲ್ಲಿ ಭಾರತ –ಚೀನಾ ಸೇನೆ ನಡುವೆ ನಡೆದಿದ್ದ ಸಂಘರ್ಷ ಕುರಿತು ರಾಹುಲ್ ಗಾಂಧಿ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>