<p><strong>ಹೈದರಾಬಾದ್</strong>: ಹಣ ದುರುಪಯೋಗ ಆರೋಪದ ಮೇಲೆ ತೆಲಂಗಾಣ ಸಿಐಡಿ ಅಧಿಕಾರಿಗಳು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ನ (ಎಚ್ಸಿಎ) ಅಧ್ಯಕ್ಷ ಎ. ಜಗನ್ ಮೋಹನ್ ರಾವ್ ಸೇರಿ ಐದು ಮಂದಿಯನ್ನು ಬಂಧಿಸಿದ್ದಾರೆ.</p>.<p>ಜಗನ್ ಜೊತೆಗೆ ಸಂಸ್ಥೆಯ ಖಜಾಂಚಿ ಸಿ. ಶ್ರೀನಿವಾಸ್ ರಾವ್, ಸಿಇಒ ಸುನೀಲ್ ಕಾಂತೆ ಹಾಗೂ ಮತ್ತಿಬ್ಬರನ್ನು ಬಂಧಿಸಲಾಗಿದೆ. ಈ ಎಲ್ಲರನ್ನೂ ಹಣ ದುರುಪಯೋಗ, ತಪ್ಪುಲೆಕ್ಕ ನಿರ್ವಹಣೆ ಹಾಗೂ ಇತರೆ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="bodytext">2025 ಐಪಿಎಲ್ ಅವಧಿಯಲ್ಲಿ ನಡೆದಿದ್ದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಎಚ್ಸಿಎ ಆಡಳಿತ ಮಂಡಳಿಯ ಪದಾಧಿಕಾರಿಗಳನ್ನು ಬುಧವಾರ ಸಿಐಡಿ ವಶಕ್ಕೆ ಪಡೆದುಕೊಂಡಿದೆ. </p>.<p class="bodytext">ಹೆಚ್ಚಿನ ಉಚಿತ ಟಿಕೆಟ್ಗಳನ್ನು ನೀಡುವಂತೆ ಎಚ್ಸಿಎ ಆಡಳಿತ ಮಂಡಳಿಯವರು ಬ್ಲ್ಯಾಕ್ಮೇಲ್ ತಂತ್ರ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಹೈದರಾಬಾದ್ನ ಸನ್ರೈಸರ್ಸ್ ತಂಡವು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ದೂರು ನೀಡಿ ಮಧ್ಯಪ್ರವೇಶಿಸುವಂತೆ ಕೋರಿತ್ತು. ಇದರ ಬೆನ್ನಲ್ಲೇ, ರೇವಂತ್ ಅವರು ತನಿಖೆಗೆ ಆದೇಶಿಸಿದ್ದರು.</p>.<p class="bodytext">ಈ ಎಲ್ಲಾ ಆರೋಪಗಳನ್ನು ಎಚ್ಸಿಎ ನಿರಾಕರಿಸಿದೆ.</p>.<p class="bodytext">‘ಫ್ರಾಂಚೈಸಿ ಮುಂದೆ ಯಾವುದೇ ಬೇಡಿಕೆಗಳನ್ನು ಇಟ್ಟಿಲ್ಲ’ ಎಂದು ಜಗನ್ಮೋಹನ್ ರಾವ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಹಣ ದುರುಪಯೋಗ ಆರೋಪದ ಮೇಲೆ ತೆಲಂಗಾಣ ಸಿಐಡಿ ಅಧಿಕಾರಿಗಳು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ನ (ಎಚ್ಸಿಎ) ಅಧ್ಯಕ್ಷ ಎ. ಜಗನ್ ಮೋಹನ್ ರಾವ್ ಸೇರಿ ಐದು ಮಂದಿಯನ್ನು ಬಂಧಿಸಿದ್ದಾರೆ.</p>.<p>ಜಗನ್ ಜೊತೆಗೆ ಸಂಸ್ಥೆಯ ಖಜಾಂಚಿ ಸಿ. ಶ್ರೀನಿವಾಸ್ ರಾವ್, ಸಿಇಒ ಸುನೀಲ್ ಕಾಂತೆ ಹಾಗೂ ಮತ್ತಿಬ್ಬರನ್ನು ಬಂಧಿಸಲಾಗಿದೆ. ಈ ಎಲ್ಲರನ್ನೂ ಹಣ ದುರುಪಯೋಗ, ತಪ್ಪುಲೆಕ್ಕ ನಿರ್ವಹಣೆ ಹಾಗೂ ಇತರೆ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="bodytext">2025 ಐಪಿಎಲ್ ಅವಧಿಯಲ್ಲಿ ನಡೆದಿದ್ದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಎಚ್ಸಿಎ ಆಡಳಿತ ಮಂಡಳಿಯ ಪದಾಧಿಕಾರಿಗಳನ್ನು ಬುಧವಾರ ಸಿಐಡಿ ವಶಕ್ಕೆ ಪಡೆದುಕೊಂಡಿದೆ. </p>.<p class="bodytext">ಹೆಚ್ಚಿನ ಉಚಿತ ಟಿಕೆಟ್ಗಳನ್ನು ನೀಡುವಂತೆ ಎಚ್ಸಿಎ ಆಡಳಿತ ಮಂಡಳಿಯವರು ಬ್ಲ್ಯಾಕ್ಮೇಲ್ ತಂತ್ರ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಹೈದರಾಬಾದ್ನ ಸನ್ರೈಸರ್ಸ್ ತಂಡವು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ದೂರು ನೀಡಿ ಮಧ್ಯಪ್ರವೇಶಿಸುವಂತೆ ಕೋರಿತ್ತು. ಇದರ ಬೆನ್ನಲ್ಲೇ, ರೇವಂತ್ ಅವರು ತನಿಖೆಗೆ ಆದೇಶಿಸಿದ್ದರು.</p>.<p class="bodytext">ಈ ಎಲ್ಲಾ ಆರೋಪಗಳನ್ನು ಎಚ್ಸಿಎ ನಿರಾಕರಿಸಿದೆ.</p>.<p class="bodytext">‘ಫ್ರಾಂಚೈಸಿ ಮುಂದೆ ಯಾವುದೇ ಬೇಡಿಕೆಗಳನ್ನು ಇಟ್ಟಿಲ್ಲ’ ಎಂದು ಜಗನ್ಮೋಹನ್ ರಾವ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>