<p><strong>ಬೆಂಗಳೂರು</strong>: ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವರಾಗಿರುವುದು ದಕ್ಷಿಣ ಭಾರತದ ಅದೃಷ್ಟ ಎಂದು ಆಂಧ್ರಪ್ರದೇಶದ ಐಟಿ ಸಚಿವ ನಾರಾ ಲೋಕೇಶ್ ಹೇಳಿದ್ದಾರೆ. </p><p>ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದ್ದಾರೆ. </p><p>‘ಆಂಧ್ರ ಪ್ರದೇಶದ ವಿಶಾಖಪಟ್ಟಣ ಉಕ್ಕು ಕಾರ್ಖಾನೆಯನ್ನು ಮುಚ್ಚುವ ಪರಿಸ್ಥಿತಿ ಎದುರಾಗಿತ್ತು. ಆದರೆ, ಕುಮಾರಸ್ವಾಮಿ ಅವರು ಮಾತನಾಡಿ, ನಾನು ನಿಮ್ಮೊಂದಿಗಿದ್ದೇನೆ. ವಿಶಾಖಪಟ್ಟಣದ ಉಕ್ಕು ಕಾರ್ಖಾನೆಯನ್ನು ಖಾಸಗೀಕರಣವಾಗುವುದಕ್ಕೆ ಬಿಡುವುದಿಲ್ಲ ಎಂದು ಮಾತುಕೊಟ್ಟಿದ್ದರು. ಆದರಂತೆಯೇ ನಡೆದುಕೊಂಡಿದ್ದಾರೆ’ ಎಂದು ಲೋಕೇಶ್ ತಿಳಿಸಿದ್ದಾರೆ. </p><p>‘ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಮಾತ್ರವಲ್ಲ, ಅನಕಪಲ್ಲಿಯಲ್ಲಿ ದೇಶದ ಅತಿದೊಡ್ಡ ಗ್ರೀನ್ ಪ್ಲ್ಯಾಂಟ್ ಸ್ಥಾಪನೆ ಮಾಡಲಾಗುತ್ತಿದೆ. ಇದಕ್ಕೆ ಕುಮಾರಸ್ವಾಮಿ ಅವರೇ ಕಾರಣ ಎಂದರೇ ತಪ್ಪಲ್ಲ. ಇದಕ್ಕಾಗಿ ನಾವೆಲ್ಲ ಅವರ ಋಣದಲ್ಲಿದ್ದೇವೆ’ ಎಂದಿದ್ದಾರೆ. </p><p>‘ಕರ್ನಾಟಕದ ಭೂಮಿ ಪ್ರವಿತ್ರವಾದದ್ದು. ಇಲ್ಲಿಯ ಸಂಸ್ಕೃತಿ, ಪರಂಪರೆ ದೊಡ್ಡದು. ನಮ್ಮ ಮಕ್ಕಳು ಡಾಕ್ಟರ್, ಎಂಜನಿಯರ್ ಆಗಬೇಕು ಎಂದು ಆಸೆ ಪಡುವ ತಂದೆ-ತಾಯಿಯಂದಿರು ನಮ್ಮ ಮಗು ಸೈನಿಕನಾಗಬೇಕು ಎಂದು ಏಕೆ ಪಡುತ್ತಿಲ್ಲ. ನಾವು ಇಲ್ಲಿ ನೆಮ್ಮದಿಯಿಂದ ಇದ್ದೇವೆಂದರೆ ಅದಕ್ಕೆ ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಿರುವ ಸೈನಿಕರೇ ಕಾರಣ. ದೇಶ ರಕ್ಷಣೆ ಕಾರ್ಯಕ್ಕಿಂತ ದೊಡ್ಡ ಸೌಭಾಗ್ಯ ಮತ್ತೊಂದಿಲ್ಲ’ ಎಂದೂ ಲೋಕೇಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p><p>ಕುಮಾರಸ್ವಾಮಿ ಮಾತನಾಡಿ, ‘ತುಂಗಭದ್ರಾ ಜಲಾಶಯದಲ್ಲಿ 30 ಟಿಎಂಸಿ ಹೂಳು ತುಂಬಿದೆ. ಇದಕ್ಕೆ ಪರ್ಯಾಯವಾಗಿ ನವಲಿ ಬಳಿ ಜಲಾಶಯ ನಿರ್ಮಿಸುವ ಕುರಿತು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಸೌಹಾರ್ದಯುತವಾಗಿ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬೇಕಾಗಿದೆ’ ಎಂದಿದ್ದಾರೆ. </p><p>‘ನಾರಾ ಲೋಕೇಶ್ ಸಚಿವರಾಗಿ ಉತ್ತಮ ಆಡಳಿತ ನಡೆಸಿ ಪ್ರಬುದ್ಧ ರಾಜಕಾರಣಿಯಾಗಿ ಬೆಳೆಯುತ್ತಿದ್ದಾರೆ. ಅವರು ನವಲಿ ಜಲಾಶಯದ ಬಗ್ಗೆ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿಕೊಳ್ಳುವುದು ಬೇಡ. ಇದು ಮೂರು ರಾಜ್ಯಗಳ ವಿಚಾರವಾಗಿದ್ದು ಹೊಂದಾಣಿಕೆಯಿಂದ ನಿರ್ಧಾರವಾಗಲಿ’ ಎಂದು ತಿಳಿಸಿದ್ದಾರೆ.</p><p>‘ರಕ್ಷಣಾ ಸಚಿವ ರಾಜನಾಥಸಿಂಗ್ ಅವರ ಮೇಲೆ ಒತ್ತಡ ಹಾಕಿ ಸಿಂಧನೂರಿನ ಶ್ರೀಕೃಷ್ಣದೇವರಾಯ ವಿದ್ಯಾ ಸಂಸ್ಥೆಗೆ ಸೈನಿಕ ಶಾಲೆ ಮಂಜೂರು ಮಾಡಿಸಲಾಗಿದೆ. ಇದರಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಇದರ ಸದುಪಯೋಗ ಎಲ್ಲರೂ ಪಡೆಯಬೇಕು’ ಎಂದು ಹೇಳಿದ್ದಾರೆ.</p><p>ಈಚೆಗೆ ಭದ್ರಾವತಿಯಲ್ಲಿ ಮಾತನಾಡಿದ್ದ ಕುಮಾರಸ್ವಾಮಿ, ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಒಪ್ಪಿಸಿ ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ₹35,000 ಕೋಟಿ ಸಾಲ ತೀರಿಸಿ ಪುನರ್ ಆರಂಭಿದ್ದೇನೆ. ಈಗ ಅಲ್ಲಿ ನಿತ್ಯ 21 ಟನ್ ಉಕ್ಕು ಉತ್ಪಾದನೆ ಆಗುತ್ತಿದೆ’ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವರಾಗಿರುವುದು ದಕ್ಷಿಣ ಭಾರತದ ಅದೃಷ್ಟ ಎಂದು ಆಂಧ್ರಪ್ರದೇಶದ ಐಟಿ ಸಚಿವ ನಾರಾ ಲೋಕೇಶ್ ಹೇಳಿದ್ದಾರೆ. </p><p>ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದ್ದಾರೆ. </p><p>‘ಆಂಧ್ರ ಪ್ರದೇಶದ ವಿಶಾಖಪಟ್ಟಣ ಉಕ್ಕು ಕಾರ್ಖಾನೆಯನ್ನು ಮುಚ್ಚುವ ಪರಿಸ್ಥಿತಿ ಎದುರಾಗಿತ್ತು. ಆದರೆ, ಕುಮಾರಸ್ವಾಮಿ ಅವರು ಮಾತನಾಡಿ, ನಾನು ನಿಮ್ಮೊಂದಿಗಿದ್ದೇನೆ. ವಿಶಾಖಪಟ್ಟಣದ ಉಕ್ಕು ಕಾರ್ಖಾನೆಯನ್ನು ಖಾಸಗೀಕರಣವಾಗುವುದಕ್ಕೆ ಬಿಡುವುದಿಲ್ಲ ಎಂದು ಮಾತುಕೊಟ್ಟಿದ್ದರು. ಆದರಂತೆಯೇ ನಡೆದುಕೊಂಡಿದ್ದಾರೆ’ ಎಂದು ಲೋಕೇಶ್ ತಿಳಿಸಿದ್ದಾರೆ. </p><p>‘ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಮಾತ್ರವಲ್ಲ, ಅನಕಪಲ್ಲಿಯಲ್ಲಿ ದೇಶದ ಅತಿದೊಡ್ಡ ಗ್ರೀನ್ ಪ್ಲ್ಯಾಂಟ್ ಸ್ಥಾಪನೆ ಮಾಡಲಾಗುತ್ತಿದೆ. ಇದಕ್ಕೆ ಕುಮಾರಸ್ವಾಮಿ ಅವರೇ ಕಾರಣ ಎಂದರೇ ತಪ್ಪಲ್ಲ. ಇದಕ್ಕಾಗಿ ನಾವೆಲ್ಲ ಅವರ ಋಣದಲ್ಲಿದ್ದೇವೆ’ ಎಂದಿದ್ದಾರೆ. </p><p>‘ಕರ್ನಾಟಕದ ಭೂಮಿ ಪ್ರವಿತ್ರವಾದದ್ದು. ಇಲ್ಲಿಯ ಸಂಸ್ಕೃತಿ, ಪರಂಪರೆ ದೊಡ್ಡದು. ನಮ್ಮ ಮಕ್ಕಳು ಡಾಕ್ಟರ್, ಎಂಜನಿಯರ್ ಆಗಬೇಕು ಎಂದು ಆಸೆ ಪಡುವ ತಂದೆ-ತಾಯಿಯಂದಿರು ನಮ್ಮ ಮಗು ಸೈನಿಕನಾಗಬೇಕು ಎಂದು ಏಕೆ ಪಡುತ್ತಿಲ್ಲ. ನಾವು ಇಲ್ಲಿ ನೆಮ್ಮದಿಯಿಂದ ಇದ್ದೇವೆಂದರೆ ಅದಕ್ಕೆ ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಿರುವ ಸೈನಿಕರೇ ಕಾರಣ. ದೇಶ ರಕ್ಷಣೆ ಕಾರ್ಯಕ್ಕಿಂತ ದೊಡ್ಡ ಸೌಭಾಗ್ಯ ಮತ್ತೊಂದಿಲ್ಲ’ ಎಂದೂ ಲೋಕೇಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p><p>ಕುಮಾರಸ್ವಾಮಿ ಮಾತನಾಡಿ, ‘ತುಂಗಭದ್ರಾ ಜಲಾಶಯದಲ್ಲಿ 30 ಟಿಎಂಸಿ ಹೂಳು ತುಂಬಿದೆ. ಇದಕ್ಕೆ ಪರ್ಯಾಯವಾಗಿ ನವಲಿ ಬಳಿ ಜಲಾಶಯ ನಿರ್ಮಿಸುವ ಕುರಿತು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಸೌಹಾರ್ದಯುತವಾಗಿ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬೇಕಾಗಿದೆ’ ಎಂದಿದ್ದಾರೆ. </p><p>‘ನಾರಾ ಲೋಕೇಶ್ ಸಚಿವರಾಗಿ ಉತ್ತಮ ಆಡಳಿತ ನಡೆಸಿ ಪ್ರಬುದ್ಧ ರಾಜಕಾರಣಿಯಾಗಿ ಬೆಳೆಯುತ್ತಿದ್ದಾರೆ. ಅವರು ನವಲಿ ಜಲಾಶಯದ ಬಗ್ಗೆ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿಕೊಳ್ಳುವುದು ಬೇಡ. ಇದು ಮೂರು ರಾಜ್ಯಗಳ ವಿಚಾರವಾಗಿದ್ದು ಹೊಂದಾಣಿಕೆಯಿಂದ ನಿರ್ಧಾರವಾಗಲಿ’ ಎಂದು ತಿಳಿಸಿದ್ದಾರೆ.</p><p>‘ರಕ್ಷಣಾ ಸಚಿವ ರಾಜನಾಥಸಿಂಗ್ ಅವರ ಮೇಲೆ ಒತ್ತಡ ಹಾಕಿ ಸಿಂಧನೂರಿನ ಶ್ರೀಕೃಷ್ಣದೇವರಾಯ ವಿದ್ಯಾ ಸಂಸ್ಥೆಗೆ ಸೈನಿಕ ಶಾಲೆ ಮಂಜೂರು ಮಾಡಿಸಲಾಗಿದೆ. ಇದರಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಇದರ ಸದುಪಯೋಗ ಎಲ್ಲರೂ ಪಡೆಯಬೇಕು’ ಎಂದು ಹೇಳಿದ್ದಾರೆ.</p><p>ಈಚೆಗೆ ಭದ್ರಾವತಿಯಲ್ಲಿ ಮಾತನಾಡಿದ್ದ ಕುಮಾರಸ್ವಾಮಿ, ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಒಪ್ಪಿಸಿ ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ₹35,000 ಕೋಟಿ ಸಾಲ ತೀರಿಸಿ ಪುನರ್ ಆರಂಭಿದ್ದೇನೆ. ಈಗ ಅಲ್ಲಿ ನಿತ್ಯ 21 ಟನ್ ಉಕ್ಕು ಉತ್ಪಾದನೆ ಆಗುತ್ತಿದೆ’ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>