‘ನನಗಿನ್ನೂ ನೆನಪಿದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರೈಲು ಅಪಘಾತವೊಂದು ನಡೆದಿತ್ತು. ಆಗ ರೈಲ್ವೇ ಸಚಿವರು ‘ಈಗ ನಡೆದ ಅಪಘಾತಕ್ಕೆ ಬ್ರಿಟಿಷರು ಕಾರಣ‘ ಎಂದು ಹೇಳಿರಲಿಲ್ಲ. ‘ಇದರ ಸಂಪೂರ್ಣ ಹೊಣೆ ನನ್ನದು ಎಂದು ಒಪ್ಪಿಕೊಂಡು ರಾಜೀನಾಮೆ ನೀಡುತ್ತೇನೆ‘ ಎಂದಿದ್ದರು. ಆದರೆ ಇತ್ತೀಚೆಗೆ ಭಾರತದಲ್ಲಿ ತಪ್ಪುಗಳು ನಡೆದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಿಲ್ಲ‘ ಎಂದು ಪರೋಕ್ಷವಾಗಿ ಬಿಜೆಪಿ ಕುರಿತು ಟೀಕಿಸಿದ್ದಾರೆ.